ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿ೦ಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್)ಯ ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ 2024-25ನೇ ಸಾಲಿನ ಉದ್ಯೋಗಾರಿತ ಮತ್ತು ಉದ್ಯೋಗ ಖಚಿತ ಡಿಪ್ಲೊಮಾ ಕೋರ್ಸ್ಗಳಾದ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.(ವಿಜ್ಞಾನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾದವರಿಂದ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cipet.gov.in ಅಥವಾ […]

ಉಡುಪಿಯ ಜಾಹೀರಾತು ಕಂಪನಿಗೆ ಗ್ರಾಫಿಕ್ ಡಿಸೈನರ್, ವಿಡಿಯೋ ಎಡಿಟರ್ ತಕ್ಷಣ ಬೇಕಾಗಿದ್ದಾರೆ

ಉಡುಪಿ: ಇಲ್ಲಿನ ಜಾಹೀರಾತು ಕಂಪನಿ ಒಂದಕ್ಕೆ ಗ್ರಾಫಿಕ್ ಡಿಸೈನರ್ ಹಾಗೂ ವಿಡಿಯೋ ಎಡಿಟರ್ ತಕ್ಷಣ ಬೇಕಾಗಿದ್ದರೆ. ಕಮರ್ಷಿಯಲ್ ಗ್ರಾಫಿಕ್ ಡಿಸೈನ್ ನಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ, ಫೋಟೋಶಾಪ್, ಕೋರೆಲ್ ಡ್ರಾ, ಇಲ್ಲಸ್ಟ್ರೆಟರ್ ಹಾಗೂ ವಿಡಿಯೋ ಎಡಿಟಿಂಗ್ ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.ಉತ್ತಮ ವೇತನ ನೀಡಲಾಗುವುದು. ಸ್ಥಳೀಯರಿಗೆ ಆದ್ಯತೆ ಸಂಪರ್ಕಿಸಿ: 9448379989

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆಯು ಮಾ.27 ಬುಧವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಮಾಜಿ ಸಚಿವ, ಮಾಜಿ ಸಂಸ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರ ಉಪಸ್ಥಿತಿಯಲ್ಲಿ ಹಾಗೂ ನಾಯಕರ ಸಮ್ಮುಖದಲ್ಲಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವು‌ ಉದ್ಘಾಟನೆಗೊಂಡಿತು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಜಯಪ್ರಕಾಶ್ ಹೆಗ್ಡೆ ಅವರಿಗೆ ಹೂಮಾಲೆ ಹಾಕಿ ಶಾಲು ಹೊದಿಸಿ ಗೌರವಿಸಿದರು. […]

HAL ನಲ್ಲಿ ತಯಾರಾದ ಸ್ವದೇಶೀ ನಿರ್ಮಿತ ತೇಜಸ್- ಮಾರ್ಕ್ 1A ಯುದ್ಧ ವಿಮಾನದ ಮೊದಲ ಹಾರಾಟ ಯಶಸ್ವಿ

ಬೆಂಗಳೂರು: ಭಾರತದಲ್ಲಿ ತಯಾರಿಸಿದ ಸ್ಥಳೀಯ LCA ಮಾರ್ಕ್ 1A ಯುದ್ಧ ವಿಮಾನದ ಮೊದಲ ಹಾರಾಟವನ್ನು ಇಂದು ಬೆಂಗಳೂರಿನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಪೂರ್ಣಗೊಳಿಸಿದೆ. ಮೊದಲ ಹಾರಾಟದ ಸಮಯದಲ್ಲಿ ವಿಮಾನವು 15 ನಿಮಿಷಗಳ ಕಾಲ ಗಾಳಿಯಲ್ಲಿ ಹಾರಾಟ ನಡೆಸಿದೆ ಎಂದು HAL ಅಧಿಕಾರಿಗಳು ತಿಳಿಸಿದ್ದಾರೆ. ಇಂಡಿಯಾ ಟುಡೇ ವರದಿಯ ಪ್ರಕಾರ, ಪಾಕಿಸ್ತಾನದ ಗಡಿಯ ಸಮೀಪವಿರುವ ರಾಜಸ್ಥಾನದ ಬಿಕಾನೇರ್‌ನಲ್ಲಿರುವ ನಲ್ ವಾಯುನೆಲೆಯಲ್ಲಿ ಯುದ್ಧ ವಿಮಾನವನ್ನು ನಿಯೋಜಿಸುವ ಸಾಧ್ಯತೆಯಿದೆ. ವಿಮಾನದ ಮೊದಲ ಸ್ಕ್ವಾಡ್ರನ್ ಅನ್ನು ನಲ್ ವಾಯುನೆಲೆಯಲ್ಲಿ ನಿಯೋಜಿಸಲು ಯೋಜಿಸಲಾಗಿದೆ.

ಮಹಾರಾಷ್ಟ್ರದ ಅಂಬಾಜೋಗಿಯಲ್ಲಿ ಯಾದವ ರಾಜವಂಶದ ಎರಡು ಪುರಾತನ ದೇವಾಲಯದ ನೆಲೆಗಳು ಪತ್ತೆ

ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಾಜೋಗಿ ಬಳಿಯ ಸಕಲೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಉತ್ಖನನದ ಸಂದರ್ಭದಲ್ಲಿ, ಒಂದು ವಿಶಿಷ್ಟವಾದ ಉತ್ಖನನವು ಸ್ಥಳೀಯರು ಮತ್ತು ತಜ್ಞರನ್ನು ಸಹ ಬೆಚ್ಚಿಬೀಳಿಸಿದೆ. ಮಹಾರಾಷ್ಟ್ರ ಸರ್ಕಾರದ ಪುರಾತತ್ವ ಇಲಾಖೆಯು (Archeological Survey) ಮಹತ್ವದ ಉತ್ಖನನವನ್ನು ಮಾಡಿದ್ದು, ಇದನ್ನು ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಪುರಾತತ್ವ ಇಲಾಖೆಯು ಸಕಲೇಶ್ವರ ದೇವಾಲಯದ ಆವರಣದಲ್ಲಿ ಎರಡು ಪುರಾತನ ದೇವಾಲಯದ ಅಡಿಪಾಯಗಳನ್ನು ಕಂಡುಹಿಡಿದಿದ್ದು ಇದನ್ನು ‘ಬಾರಾಖಂಬಿ’ ದೇವಾಲಯ ಎಂದೂ ಕರೆಯುತ್ತಾರೆ. ದೇವಾಲಯವನ್ನು 1228 ಎ.ಡಿ ಸುಮಾರಿಗೆ ನಿರ್ಮಿಸಿರಬಹುದು. ಶಾಸನದ ಪ್ರಕಾರ ಇದನ್ನು […]