ಯುಗಾದಿ ಹಬ್ಬದಲ್ಲಿದೆ ಹೊಸತನ, ಬೇವು ಬೆಲ್ಲದ ಚೇತನ.

ಚೈತ್ರ ಕಳೆದು ವಸಂತದ ಮಧುರ ಪರಿಮಳದ ಮೊದಲ ಹಬ್ಬವೇ ಯುಗಾದಿ ಎಲ್ಲೆಲ್ಲೂ ಹಬ್ಬದ ವಾತಾವರಣ ಹೊಸ ವರ್ಷದ ನಿಜವಾದ ಕ್ಯಾಲೆಂಡರ್ ಬದಲಿಸೋ ಕಾಲ. ಬ್ರಹ್ಮದೇವನು ಬ್ರಹ್ಮಾಂಡದ ಹೊಸ ಯುಗವನ್ನು ಪ್ರಾರಂಭಿಸಿದ್ದು ಕೂಡ ಇದೇ ದಿನ ನೋಡಿ ಹಬ್ಬದ ಆರಂಭಕ್ಕೂ ಮೊದಲೇ ಮನೆಯನ್ನು ಸ್ವಚ್ಛ ಮಾಡಿ ಬಾಗಿಲಿಗೆ ಮಾವಿನ ತೋರಣ ಬಾಗಿಲ ಮುಂದೆ ರಂಗೋಲಿ ಆ ರಂಗೋಲಿ ಮಧ್ಯದಲ್ಲಿ ಹೂವು ಆಹಾ! ನೋಡಲು ಕಣ್ಣಿಗೆ ತಂಪು ಮನಸ್ಸಿಗೆ ಇಂಪು. ಹಾಗೆ ಯುಗಾದಿಯ ಬೆಳಗ್ಗೆ ಬಿಸಿ ಬಿಸಿ ಎಣ್ಣೆ ಅಭ್ಯಂಜನ […]

ಎ. 12ರಂದು ಪ್ರಥಮ ವರ್ಷದ ಹೊನಲು ಬೆಳಕಿನ ಜೋಡುಕರೆ ಗುರುಪುರ ಕಂಬಳ

ಗುರುಪುರ: ಕರಾವಳಿ ಜೋಡುಕರೆ ಕಂಬಳ ಟ್ರಸ್ಟ್‌ ಮೂಳೂರು – ಅಡ್ಡೂರು ಪ್ರಥಮ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳ ಎ. 12ರಂದು ಗುರುಪುರದ ಮಾಣಿಬೆಟ್ಟು ಗುತ್ತುವಿನಲ್ಲಿ ನಡೆಯಲಿದೆ. ಬೆಳಗ್ಗೆ 8.30ಕ್ಕೆ ಉದ್ಘಾಟನೆ ನಡೆಯಲಿದ್ದು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಮಾಲಾಡಿ ಉದ್ಘಾಟಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಆನುವಂಶಿಕ ಅರ್ಚಕ ಅನಂತ ಅಸ್ರಣ್ಣ ದೀಪ ಬೆಳಗಲಿದ್ದು, ಗುರುಪುರ ಪೊಂಪೈ ಚರ್ಚ್‌ನ ಧರ್ಮಗುರು ವಂ| ರೊಡಾಲ್ಫ್ ರವಿ ಡೆಸಾ, ಗುರುಪುರ ದಾರುಸಲಾಂ […]

ಗುಣಮಟ್ಟದ ವಾಣಿಜ್ಯ ಶಿಕ್ಷಣಕ್ಕೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಆಯ್ಕೆ.

ಉಡುಪಿ ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶ ವನ್ನು ನೀಡುತ್ತಾ ಬಂದಿರುವ ಈ ಸಂಸ್ಥೆ, ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರಾಂಕ್ ಗಳನ್ನು ಪಡೆದುಕೊಂಡಿದೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡಲಾಗುತ್ತಿದೆ. ಏಳು ಉಪನ್ಯಾಸಕರು ಸೇರಿಕೊಂಡು ನಿರ್ಮಿಸಿದ ಈ ಸಂಸ್ಥೆ ಇಂದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕಾಲೇಜ್ ಎಂದು ಗುರುತಿಸಿ ಕೊಂಡಿದೆ. ಶೈಕ್ಷಣಿಕ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿಕೊಂಡು ಬಂದಿದೆ. ದ್ವಿತೀಯ ಪಿಯುಸಿಯಲ್ಲಿ ರಾಜ್ಯದ ಹತ್ತು ರಾಂಕ್ ಗಳಲ್ಲಿ ವಾಣಿಜ್ಯ ವಿಭಾಗಕ್ಕೆ 3 […]

ಲೇಖಕರು ಸದಾ ಸಂವೇದನಾಶೀಲರಾಗಿರಬೇಕು: ದತ್ತಾ ದಾಮೋದರ ನಾಯಕ್  

ಮಂಗಳೂರು:ಲೇಖಕರು ವೈಜ್ಞಾನಿಕ ಮನೋಭಾವ, ತಾರ್ಕಿಕತೆ ಮತ್ತು ಸಂವೇದನಾಶೀಲತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಉತ್ತಮ ಸಾಹಿತ್ಯ ಕೃತಿ ರಚಿಸಲು ಸಾಧ್ಯ. 25 ಮಿಲಿ ಸುಗಂದ ದ್ರವ್ಯ ತಯಾರಿಸಲು ಸಾವಿರಾರು ಹೂವಿನ ಪಕಳೆಗಳನ್ನು ಅರೆಯಬೇಕಾಗುತ್ತದೆಯೋ ಹಾಗೆ ಒಂದು ಸಾಹಿತ್ಯ ಕೃತಿ ರಚನೆಯ ಹಿಂದೆ ಸಾವಿರಾರು ಪುಟಗಳ ಓದು, ಅಭ್ಯಾಸ  ಇರುತ್ತದೆ  ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಗೋವಾದ ಹಿರಿಯ ಸಾಹಿತಿ  ದತ್ತಾ ದಾಮೋದರ ನಾಯಕ್ ಅಭಿಪ್ರಾಯಪಟ್ಟರು. ದತ್ತಾ ನಾಯಕ್ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆದ ಮೈಕಲ್ ಡಿ ಸೊಜಾ  ವಿಶನ್ ಕೊಂಕಣಿ ಪುಸ್ತಕ ಪ್ರಕಟಣೆ ಯೋಜನೆಯಡಿ ಆಯ್ಕೆಯಾದ ಲೇಖಕರ ಬಳಗವನ್ನು ಉದ್ದೇಶಿಸಿ ಮಾತನಾಡುತ್ತಿದರು. ಬರವಣಿಗೆಯ ಭಾಷೆ ಸಾಧ್ಯವಾದಷ್ಟು ಸರಳ  ಮತ್ತು ಹೃದ್ಯವಾದಾಗ ವಾಚಕನಿಗೆ ಓದುವ ಅನುಭೂತಿ ದಕ್ಕುತ್ತದೆ. ಅತಿಯಾದ ಅಲಂಕಾರ, ಸಾಂಕೇತಿಕತೆ, ಪ್ರತಿಮೆ – ಪ್ರತೀಕಗಳನ್ನು ಹೇರಿಕೊಂದು ರಚಿಸಿದ ಸಾಹಿತ್ಯ ಕೃತಿಯಿಂದ ಓದುಗರು ವಿಮುಖರಾಗುವ ಸಾಧ್ಯತೆಗಳು ಹೆಚ್ಚು. ಓದುಗ ಪುಸ್ತಕ ಓದುವುದು ಅವನ ಸುಖಕ್ಕಾಗಿ ಹೊರತು ನಮಗಾಗಿ ಅಲ್ಲ ಎಂಬುದನ್ನು ಪುಸ್ತಕ ಲೇಖಕರೂ, ಪ್ರಕಾಶಕರೂ ಅರ್ಥ ಮಾಡಿಕೊಳ್ಳಬೇಕು.  ಒಂದು ಉತ್ತಮ ಪುಸ್ತಕ ರೂಪಿಸುವಲ್ಲಿ ಪ್ರಕಾಶಕನ ಕೆಲಸವೂ ಗಮನಾರ್ಹ. ಪುಸ್ತಕ ಪ್ರಕಾಶನವೆಂದರೆ ಅದು ಬರೀ ಪ್ಯಾಕೆಜಿಂಗ್ ಕೆಲಸ ಮಾತ್ರವಲ್ಲ ಎಂದು ಉಪಸ್ಥಿತರಿದ್ದ ಲೇಖಕ – ಪ್ರಕಾಶಕರಿಗೆ ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಳ್ಳುವುದರ ಮೂಲಕ ಸಲಹೆ ನೀಡಿದರು.  ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕ ಬಸ್ತಿ ವಾಮನ್ ಶೆಣೈಯವರ ಪ್ರತಿಮೆಗೆ ಹಾರಾರ್ಪಣೆ ಮತ್ತು ದೀಪ ಪ್ರಜ್ವಲನೆಯ ಮೂಲಕ ಆರಂಭವಾದ ಕಾರ್ಯಕ್ರಮದಲ್ಲಿ ಪತ್ರಕರ್ತ ಎಚ್ಚೆಮ್ ಪೆರ್ನಾಲ್ ಅಧ್ಯಕ್ಷತೆಯಲ್ಲಿ ನಡೆದ “ಪುಸ್ತಕ ಪಂಚಾತಿಕೆ” ಎಂಬ ಸಂವಾದ ಕಾರ್ಯಕ್ರಮ ನಡೆಯಿತು. ಹಿರಿಯ ಲೇಖಕರಾದ ಶಕುಂತಲಾ ಆರ್. ಕಿಣಿ,  ಎಡ್ಡಿ ಸಿಕ್ವೇರಾ ಲೇಖಕರ ಪರವಾಗಿ, ಪಯ್ಯನ್ನೂರು ರಮೇಶ ಪೈ ಮತ್ತು ಸಂತ ಅಲೋಶಿಯಸ್ ಪ್ರಕಾಶನದ ನಿರ್ದೇಶಕಿ ಡೊ| ವಿದ್ಯಾ ವಿನುತ ಡಿಸೊಜ ಪ್ರಕಾಶಕರ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.  ಪುಸ್ತಕ ಪ್ರಕಾಶನ ಮತ್ತು ಮಾರಾಟ ವ್ಯವಸ್ಥೆಯಲ್ಲಿ ಲೇಖಕ ಮತ್ತು ಪ್ರಕಾಶಕರ ಜವಾಬ್ದಾರಿ, ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಲಭ್ಯವಿರುವ ಪರಿಹಾರ ಮಾರ್ಗೋಪಾಯಗಳ ಕುರಿತು ಸಂವಾದದಲ್ಲಿ ಮುಕ್ತವಾಗಿ ಚರ್ಚಿಸಲಾಯಿತು. ವಿಶ್ವ ಕೊಂಕಣಿ ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಸಂಪಾದಕ ಮಂಡಳಿ ಸದಸ್ಯ ಕವಿ/ ಚಿಂತಕ  ಟೈಟಸ್ ನೊರೊನ್ಹಾ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸುವುದರ ಜೊತೆಗೆ ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಕಾರ್ಯಕ್ರಮದ ಕುರಿತು ವಿಸ್ತಾರ ಮಾಹಿತಿಯನ್ನು ನೀಡಿದರು.  ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಹಾಗೂ ಸಂಪಾದಕ ಮಂಡಳಿ ಸದಸ್ಯ  ಕವಿ ಮೆಲ್ವಿನ್ ರೊಡ್ರಿಗಸ್ ಪುಸ್ತಕ ಅನುದಾನಕ್ಕೆ ಆಯ್ಕೆಯಾದ ಕೃತಿ ಮತ್ತು ಲೇಖಕರ ಹೆಸರುಗಳ ಘೋಷಣೆ ಮಾಡಿದರು.  ಗೋವಾ, ಮಹಾರಾಷ್ಟ್ರ, ಕರ್ನಾಟಕ ಮಾತ್ರವಲ್ಲ ದೂರದ ಆಸ್ಟ್ರೇಲಿಯಾದಿಂದಲೂ  ಕೊಂಕಣಿ   ಸಾಹಿತಿಗಳ 21 ಕೃತಿಗಳು ಅನುದಾನಕ್ಕೆ ಆಯ್ಕೆಯಾಗಿದ್ದು, ಸಾಹಿತಿಗಳು ಮತ್ತು ಅವರ ಪ್ರತಿನಿಧಿಗಳು ಹಾಜರಿದ್ದು ಪ್ರಸ್ತಾಪಕ್ಕೆ ಸಹಿ ಮಾಡಿದರು.  ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ, ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಕಾರ್ಯಕ್ರಮದ ನಿರ್ದೇಶಕ ಸಿ.ಎ. ನಂದಗೋಪಾಲ ಶೆಣೈ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ  ಕೊಂಕಣಿ ಸಾಹಿತ್ಯಕ್ಕೆ ಉತ್ತೇಜನ ನಿಡುವುದು ಮತ್ತು ಆ ಮೂಲಕ ಕೊಂಕಣಿ ಭಾಷಾ ಸೇವೆ ಮಾಡುವುದು ವಿಶ್ವ ಕೊಂಕಣಿ ಕೇಂದ್ರದ ಮೂಲ ಉದ್ದೇಶಗಳಲ್ಲಿ ಒಂದು. ಮೈಕಲ್ ಡಿ ಸೊಜಾ ವಿಶನ್ ಕೊಂಕಣಿ ಕಾರ್ಯಕ್ರಮದ ಮೂಲಕ ಈ ಉದ್ದೇಶವನ್ನು ಈಡೇರಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದು ವಿಶ್ವ ಕೊಂಕಣಿ ಕೇಂದ್ರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದು   ಈ ಕಾರ್ಯಕ್ರಮ ನೂರು ಪುಸ್ತಕ ಪ್ರಕಟಣೆಗೆ ಸೀಮಿತಗೊಳಿಸುವುದಿಲ್ಲ, ಮುಂದುವರೆಸಿಕೊಂಡು  ಹೋಗುತ್ತೇವೆ ಎಂದು ಭರವಸೆ ನೀಡಿದರು. ವಿಶ್ವ ಕೊಂಕಣಿ ಕೇಂದ್ರದ ಉಪಾಧ್ಯಕ್ಷ  ಗಿಲ್ಬರ್ಟ್ ಡಿ ಸೊಜಾ ವಂದಿಸಿದರು ಸುಚಿತ್ರಾ ಎಸ್. ಶೆಣೈ ನಿರೂಪಿಸಿದರು. ವಿಶ್ವ ಕೊಂಕಣಿ ಕೇಂದ್ರದ ವಿಶ್ವಸ್ಥ ವಿಲಿಯಮ್ ಡಿ ಸೊಜಾ, ಡಾ| ಕಸ್ತೂರಿ ಮೋಹನ್ ಪೈ, ಖಜಾಂಜಿ ಬಿ. ಆರ್. ಭಟ್ ಮತ್ತು ಕಾರ್ಯ ನಿರ್ವಹಣಾ ಅಧಿಕಾರಿ ಡಾ| ಬಿ. ದೇವದಾಸ ಪೈ ಈ ಸಂದರ್ಭದಲ್ಲಿ ಹಾಜರಿದ್ದರು.

ಅದಮಾರು ಮಠ: ನೂತನ ಉಪಹಾರ ಮಂದಿರ ಉದ್ಘಾಟನೆ

ಉಡುಪಿ: ಅದಮಾರು ಮಠದ ಹಿಂಭಾಗದಲ್ಲಿರುವ ಅದಮಾರು ಮಠದ ಅತಿಥಿಗೃಹದಲ್ಲಿ ನೂತನವಾಗಿ ನಿರ್ಮಿಸಿರುವ ಉಪಹಾರ ಮಂದಿರವನ್ನು ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಮಠದ ಅಧಿಕಾರಿಗಳಾದ ಗೋವಿಂದರಾಜ್ ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.