ಉಪ್ಪೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆ ಖಾಲಿ

ಉಡುಪಿ: ನಗರದ ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಉಪನ್ಯಾಸಕರ ಅವಶ್ಯಕತೆ ಇದ್ದು, ಎಂಟೆಕ್ ಹಾಗೂ ಬಿ.ಇ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ ಕೊಳಲಗಿರಿ ಉಪ್ಪೂರು ಉಡುಪಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ: 0820-2950101, 9880510585 ಇ-ಮೇಲ್: gttcudupi@gmail.com

ಮುಂಬೈ: ಡಹಾಣೂ ಮಹಾಲಕ್ಷ್ಮೀ ಮಂದಿರದ ವಾರ್ಷಿಕ ಜಾತ್ರೆ ಆರಂಭ

ಮುಂಬೈ: ದೇಶದ 61 ಶಕ್ತಿಪೀಠಗಳಲ್ಲಿ ಒಂದಾಗಿದ್ದು ಮಹಾರಾಷ್ಟ್ರ ಹಾಗೂ ಗುಜರಾತ್ ನ ಅಸಂಖ್ಯ ಭಾವಿಕರ ಶೃದ್ಧಾಸ್ಥಾನವಾಗಿರುವ ಡಹಾಣೂವಿನ ಶ್ರೀ ಮಹಾಲಕ್ಷ್ಮೀ ಮಂದಿರದಲ್ಲಿನ ವಾರ್ಷಿಕ ಜಾತ್ರೆಯು ಎಪ್ರಿಲ್ 23 ರ ಹನುಮಾನ್ ಜಯಂತಿಯಂದು ಆರಂಭವಾಗಿದೆ. ಮುಂಬೈ ಅಹಮದಾಬಾದ್ ರಾಜಮಾರ್ಗದಲ್ಲಿನ ಚಾರೋಟಿಯ ಡಹಾಣೂ ನಾಸಿಕ್ ಕೂಡುರಸ್ತೆಯಲ್ಲಿಂದ ಸುಮಾರು ಮೂರು ಕಿ.ಮೀ.ದೂರದಲ್ಲಿನ ವಿವಲ್ ವೇಡೆ ಯಲ್ಲಿ ಹೈವೇ ಬದಿಯಲ್ಲಿಯೇ ಇರುವ ಈ ಪ್ರಸಿದ್ಧ ಮಂದಿರದಲ್ಲಿ ಚೈತ್ರ ಪೂರ್ಣಿಮೆಯಂದು ಆರಂಭವಾಗಿ ಕೃಷ್ಣ ಪಕ್ಷದ ಅಷ್ಟಮಿಯ ತನಕ ಸುಮಾರು 15 ರಿಂದ 20 ದಿನ […]

ಉಡುಪಿ: ಇಂದು ಬಿಜೆಪಿ ‘ಬೃಹತ್ ಪಾದಯಾತ್ರೆ’; ಸಮಾರೋಪ ಭಾಷಣ

ಉಡುಪಿ: ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬುಧವಾರ ಸಂಜೆ 3.30ಕ್ಕೆ ಉಡುಪಿ ಜೋಡುಕಟ್ಟೆಯಿಂದ ಸಿಟಿ ಬಸ್ ನಿಲ್ದಾಣದ ವರೆಗೆ ‘ಬ್ರಹತ್ ಪಾದಯಾತ್ರೆ’ ನಡೆಯಲಿದೆ. ಸಮಾರೋಪ ಭಾಷಣ: ಪಾದಯಾತ್ರೆಯ ಬಳಿಕ ಉಡುಪಿ ಸಿಟಿ ಬಸ್ ನಿಲ್ದಾಣ – ನರ್ಮ್ ಬಸ್ ನಿಲ್ದಾಣದ ಬಳಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಂದ ಸಮಾರೋಪ ಭಾಷಣ ನಡೆಯಲಿದೆ. ಈ ಬೃಹತ್ ಪಾದಯಾತ್ರೆ ಮತ್ತು ಸಮಾರೋಪ ಭಾಷಣದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ […]

ಪುತ್ತೂರಿನಲ್ಲಿ ಅಣ್ಣಾಮಲೈ ಭರ್ಜರಿ ರೋಡ್ ಶೋ: ಕ್ಯಾ. ಬ್ರಿಜೇಶ್ ಚೌಟ ಗೆಲ್ಲಿಸಲು ಕರೆ

ಪುತ್ತೂರು: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಾಖಲೆಯ ಅಂತರದಿಂದ ಗೆಲ್ಲಿಸಬೇಕು. ಭಾರತೀಯ ಸೇನೆಯ ಗೋರ್ಖಾ ರೆಜಿಮೆಂಟಿನಲ್ಲಿ ದೇಶ ಸೇವೆ ಮಾಡಿ ಬಂದವರು. ದಕ್ಷಿಣ ಕನ್ನಡ ಜಿಲ್ಲೆಯ ಸರ್ವಾಂಗಣ ಅಭಿವೃದ್ಧಿಯ ಬಗ್ಗೆ ದೊಡ್ಡ ಕನಸನ್ನು ಇಟ್ಟುಕೊಂಡ ವ್ಯಕ್ತಿ ನಮಗೆ ಅಭ್ಯರ್ಥಿಯಾಗಿ ಸಿಕ್ಕಿದ್ದಾರೆ. ದಾಖಲೆ ಅಂತರದಲ್ಲಿ ಗೆಲ್ಲಿಸಿ ಮೋದಿಯವರ ಕೈಬಲಪಡಿಸಬೇಕು ಎಂದು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದರು. ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಮೋದಿಯವರು ಮತ್ತೊಮ್ಮೆ […]