ಲೋಕಸಭಾ ಚುನಾವಣೆ: ದ.ಕ ಶೇ.58.76%; ಉಡುಪಿ-ಚಿಕ್ಕಮಗಳೂರು 57.49% ಮತದಾನ; ಬೆಂಗಳೂರು ಸೆಂಟ್ರಲ್‌ನಲ್ಲಿ ಕನಿಷ್ಠ ಮತದಾನ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಮತದಾನ ನಡೆದ 14 ಕ್ಷೇತ್ರಗಳ ಪೈಕಿ 3 ಗಂಟೆವರೆಗಿನ ಮಾಹಿತಿ ಪ್ರಕಾರ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಅಂದರೆ ಶೇ.58.76ರಷ್ಟು ಮತದಾನವಾಗಿದ್ದು, ಉಡುಪಿ-ಚಿಕ್ಕಮಗಳೂರಿನಲ್ಲಿ ಶೇ.57.49ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್‌ನಲ್ಲಿ ಕನಿಷ್ಠ 40.10 ಪ್ರತಿಶತ. ಬೆಂಗಳೂರು ದಕ್ಷಿಣದಲ್ಲಿ ಶೇ.40.77 ಹಾಗೂ ಬೆಂಗಳೂರು ಉತ್ತರದಲ್ಲಿ ಶೇ.41.12ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ 49.62 ರಷ್ಟು ಮತದಾನವಾಗಿದೆ.

ಇವಿಎಂ ಮತದಾನ ವ್ಯವಸ್ಥೆಯನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್: ಬ್ಯಾಲಟ್ ಬಾಕ್ಸ್ ಮತದಾನಕ್ಕೆ ನಕಾರ

ನವದೆಹಲಿ: ಏಪ್ರಿಲ್ 26 ರಂದು ಸುಪ್ರೀಂ ಕೋರ್ಟ್ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತದಾನದ ವ್ಯವಸ್ಥೆಯನ್ನು ಎತ್ತಿಹಿಡಿದಿದೆ ಮತ್ತು ಕಾಗದದ ಮತಪತ್ರಗಳನ್ನು (ಬ್ಯಾಲಟ್ ಬಾಕ್ಸ್) ಪುನರುಜ್ಜೀವನಗೊಳಿಸುವ ಮನವಿಯನ್ನು ತಿರಸ್ಕರಿಸಿದೆ. ಒಂದು ಸಂಸ್ಥೆ ಅಥವಾ ವ್ಯವಸ್ಥೆಯ ಬಗ್ಗೆ “ಕುರುಡು ಅಪನಂಬಿಕೆ” ಎಂದು ಹೇಳುವುದು ಅನಗತ್ಯ ಸಂದೇಹವನ್ನು ಹುಟ್ಟುಹಾಕುತ್ತದೆ ಮತ್ತು ಪ್ರಗತಿಗೆ ಅಡ್ಡಿಯಾಗುತ್ತದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಲೋಕಸಭೆಗೆ ಎರಡನೇ ಹಂತದ ಸಾರ್ವತ್ರಿಕ ಚುನಾವಣೆಗೆ ಹೊಂದಿಕೆಯಾಗುವ ತೀರ್ಪಿನಲ್ಲಿ, ಮತದಾರರ ಪರಿಶೀಲಿಸಬಹುದಾದ ಪೇಪರ್ ಆಡಿಟ್ ಟ್ರಯಲ್ […]

ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಮತ ಚಲಾವಣೆ

ತಿರುವನಂತಪುರಂ: ದೇಶದ ಹೆಮ್ಮೆಯ ಸಂಸ್ಥೆ, ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರು ಕೇರಳದ ತಿರುವನಂತಪುರಂನಲ್ಲಿರುವ ಮತಗಟ್ಟೆಯಲ್ಲಿ ಇತರ ಮತದಾರರೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಪೂರ್ಣಪ್ರಜ್ಞ ಕಾಲೇಜು: ಭೂಮಿ ದಿನ ಕಾರ್ಯಕ್ರಮ

ಉಡುಪಿ: ಪೂರ್ಣಪ್ರಜ್ಞ ಕಾಲೇಜು (ಆಟೋನಾಮಸ್) ಸಸ್ಯಶಾಸ್ತ್ರ ವಿಭಾಗ ಮತ್ತು ಇಕೋ ಕ್ಲಬ್ವತಿಯಿಂದ ಭೂಮಿದಿನ ಆಚರಿಸಲಾಯಿತು. ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ. ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ‘ಪ್ಲಾನೆಟ್ ವರ್ಸಸ್ ಪ್ಲಾಸ್ಟಿಕ್ಸ್’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಹೆಚ್ಚುತ್ತಿರುವ ತಾಪಮಾನದಿಂದ ಹೀಟ್ ವೇವ್ ಉಂಟಾಗುತ್ತಿದ್ದು ಇದರಿಂದ ಅನೇಕ ದೀರ್ಘಕಾಲಿಕ ಪರಿಣಾಮಗಳು ಉಂಟಾಗುತ್ತಿವೆ. ಜಾಗತಿಕ ಮಟ್ಟದಲ್ಲಿ ಇದೊಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರತಿಯೊಬ್ಬರೂ ಪರಿಸರ ಸ್ನೇಹಿ ಜೀವನಶೈಲಿಯನ್ನು […]