ಉಡುಪಿ: ಗ್ಲಾಸ್ ತ್ಯಾಜ್ಯ ಎಸೆದವರಿಂದ ದಂಡ ವಸೂಲಿ.

ಉಡುಪಿ: ಉಡುಪಿ ನಗರವನ್ನು ತ್ಯಾಜ್ಯಮುಕ್ತಗೊಳಿಸುವ ನಿಟ್ಟಿನಲ್ಲಿ ನಿರಂತರ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದರೂ, ರಸ್ತೆ ಬದಿಗಳಲ್ಲಿ ನಿರಂತರ ತ್ಯಾಜ್ಯ ಎಸೆಯುತ್ತಿರುವ ದೃಶ್ಯಗಳು ಕಂಡು ಬರುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಸ್ತೆ ಬದಿ ತ್ಯಾಜ್ಯ ಎಸೆಯುವವರನ್ನು ಹಿಡಿದು ದಂಡ ವಸೂಲಿ ಮಾಡಲಾಗುತ್ತಿದೆ. ಅದರಂತೆ ಮೇ 15 ರಂದು ಕೊಳಚೆ ನೀರು ಶುದ್ದೀಕರಣ ಘಟಕದ ಎದುರು ನಿಟ್ಟೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗ್ಲಾಸ್ ತ್ಯಾಜ್ಯವನ್ನು ಎಸೆದ ವಾಹನ ಚಾಲಕನನ್ನು ಹಿಡಿದು 5000 ರೂ. ದಂಡ ವಿಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ […]

ವಿಧಾನಪರಿಷತ್ ಚುನಾವಣೆ: ಇಲ್ಲಿದೆ ಉಡುಪಿ ಜಿಲ್ಲೆಯ ಮತದಾನ ಕೇಂದ್ರಗಳ ವಿವರ..

ಉಡುಪಿ: ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂದಿಸಿದಂತೆ, ಭಾರತ ಚುನಾವಣಾ ಆಯೋಗವು ಮತದಾನ ಕೇಂದ್ರಗಳ ಪಟ್ಟಿಯನ್ನು ಅನುಮೋದಿಸಿದ್ದು, ಉಡುಪಿ ಜಿಲ್ಲೆಗೆ ಸಂಬಂದಿಸಿದ ನೈರುತ್ಯ ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾನ ಕೇಂದ್ರಗಳ ವಿವರವು ಈ ಕೆಳಗಿನಂತಿದೆ. ಬೈಂದೂರು ತಾಲೂಕಿಗೆ ಸಂಬಂದಿಸಿದಂತೆ ನೈರುತ್ಯ ಪದವೀಧರರರ ಕ್ಷೇತ್ರಕ್ಕೆ ಮತದಾನ ಕೇಂದ್ರ ಸಂಖ್ಯೆ 67 ರ ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜು (ಮಧ್ಯಭಾಗ) ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಬೈಂದೂರಿನ ಸರಕಾರಿ […]

ಮಣಿಪಾಲ MSDCಯಲ್ಲಿ ಇಂಟರ್ ನೆಟ್ ತಂತ್ರಜ್ಞಾನದ ಕುರಿತು ಅಲ್ಪಾವಧಿ ಕೋರ್ಸ್’ಗಳು.

ಮಣಿಪಾಲ: ಮಣಿಪಾಲದ MSDC ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (ಡಾ. ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ)ವಾಗಿದ್ದು ಆಸಕ್ತರಿಂದ ಅಲ್ಪಾವಧಿಯ (ಒಂದು ತಿಂಗಳು) ಕೋರ್ಸ್ ಗಳನ್ನು ಆಹ್ವಾನಿಸಿದೆ. ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಇಲ್ಲಿ ನೀಡಲಾಗುತ್ತಿದೆ. ಇಂಟರ್ ನೆಟ್ ನ ಟೆಕ್ನಿಕ್ ಕುರಿತು, ತಂತ್ರಜ್ಞಾನದ ಕುರಿತು ಮಾಹಿತಿ ಇಲ್ಲಿ ನೀಡಲಾಗುತ್ತದೆ. ಅದ್ಬುತ ಅವಕಾಶವಿರುವ ಕ್ಷೇತ್ರ ಇದಾಗಿದೆ. Embedded Systems and loT: 🔹IoT Architecture and life cycle 🔹 Platforms for IoT 🔹 Real time […]