ದಿ.ಮೇಟಿ ಮುದಿಯಪ್ಪ ನೆನಪಿನ ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ.

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಶರಣ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಬರುವ 26 ಮೇ, ಭಾನುವಾರ ಸಂಜೆ 5:30ಕ್ಕೆ ದಿ.ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಡಾ. ಶ್ರೀಪಾದ್ ಭಟ್ ನಿರ್ದೇಶನದ ಮಂಟೇಸ್ವಾಮಿ ಕಾವ್ಯ ಪ್ರಯೋಗ ಉಡುಪಿಯ ಯಕ್ಷಗಾನ ಕಲಾರಂಗ ಐ ವೈ ಸಿ ಯ ಸಭಾಂಗಣದಲ್ಲಿ ನಡೆಯಲಿದೆ. […]

ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: 2023-24 ನೇ ಸಾಲಿನಲ್ಲಿ ಜಿಲ್ಲೆಯ ಕೊರಗ ಸಮುದಾಯದ 7 ನೇ ಹಾಗೂ 10 ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆದಿವಾಸಿ ವಿಶೇಷ ಪ್ರೋತ್ಸಾಹಧನಕ್ಕಾಗಿ ಹಾಗೂ 10 ನೇ ತರಗತಿ ಹಾಗೂ ಅದರ ನಂತರದ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ, ಸಮಾಜ ಕಲ್ಯಾಣ ಇಲಾಖೆಯ ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಕಚೇರಿಗಳಲ್ಲಿ […]

ಮಲ್ಪೆ: ವ್ಯಕ್ತಿ ನಾಪತ್ತೆ.

ಉಡುಪಿ: ಮಲ್ಪೆ ನಿವಾಸಿ ನಾರಾಯಣ ಅಂಚನ್ (65) ಎಂಬ ವ್ಯಕ್ತಿಯು ಮೇ 11 ರಂದು ಮನೆಯಿಂದ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂ: 0820-2537999, ಪಿ.ಎಸ್.ಐ ಮೊ.ನಂ:9480805447 ಅಥವಾ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.