ಮಣಿಪಾಲ: ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೈ ಮಾಡುತ್ತಿದ್ದ ಯುವಕ ಅರೆಸ್ಟ್.

ಉಡುಪಿ: ಗಾಂಜಾ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಅಪಾರ್ಟ್‌ಮೆಂಟ್‌ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು ಹೋಟೆಲ್ ಮ್ಯಾನೇಜೈಂಟ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಯನ್ನು ತಿರುವನಂತಪುರದ ಸಿದ್ದಾರ್ಥ (22) ಎಂದು ಗುರುತಿಸಲಾಗಿದೆ. ಈತ ವಾಸಿಸುತ್ತಿದ್ದ ವಸತಿಗೃಹಕ್ಕೆ ದಾಳಿ ಮಾಡಿದ ಪೊಲೀಸರು, 20,000 ರೂ ಮೌಲ್ಯದ ಸುಮಾರು 388 ಗ್ರಾಂ ತೂಕದ ಗಾಂಜಾ ಹಾಗೂ 45,000 ರೂ ಮೌಲ್ಯದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಿ ಲಾಭಗಳಿಸುವ ಉದ್ದೇಶದಿಂದ ಗಾಂಜಾವನ್ನು ಶೇಖರಿಸಿ ಇಟ್ಟಿರುವುದಾಗಿ ವಿಚಾರಣೆ […]

ಆಗುಂಬೆ: ಸಿಡಿಲು ಬಡಿದು ವ್ಯಕ್ತಿ ಮೃತ್ಯು.

ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ನಡೆದಿದೆ. ಮೃತ ದುರ್ದೈವಿ ನಾಗೇಂದ್ರ ಬಿನ್ ಸೀನ ಪೂಜಾರಿ ಎಂದು ಗುರುತಿಲಾಗಿದೆ. ಇವರು ಬೀದರಗೋಡು ಗ್ರಾಮದವರಾಗಿದ್ದು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಬಿನ್ ವಿಠಲ್ ಕಿಣಿ ಇವರ ಅಡಿಕೆ ತೋಟದಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.