ಸಾಲ ಮರುಪಾವತಿಸಲು ಸಾಧ್ಯವಾಗದೆ ವ್ಯಕ್ತಿ ನೇಣಿಗೆ ಶರಣು.

ಶಂಕರನಾರಾಯಣ: ಕಮಲಶಿಲೆ ಎಂಬಲ್ಲಿ ಧರ್ಮಸ್ಥಳ ಸಂಘ ಹಾಗೂ ಸೊಸೈಟಿಯಿಂದ ಮಾಡಿರುವ ಸಾಲ ಮರುಪಾವತಿಸಲು ಸಾಧ್ಯವಾಗದೆ ಚಿಂತೆಯಲ್ಲಿ ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕಮಲಶಿಲೆ ಗ್ರಾಮದ ಪ್ರಕಾಶ(30) ಎಂದು ಗುರುತಿಸಲಾಗಿದೆ. ಇವರು ಮನೆ ಕಟ್ಲಲು ಧರ್ಮಸ್ಥಳ ಸಂಘದಿಂದ ಮೂರು ಲಕ್ಷ ಮತ್ತು ಸೊಸೈಟಿ ಯಿಂದ ಒಂದು ಲಕ್ಷ ಸಾಲ ಮಾಡಿದ್ದು ಇತ್ತೀಚೆಗೆ ಸರಿಯಾಗಿ ಕೆಲಸ ಇಲ್ಲದೆ ಸಾಲದ ಕಂತು ಕಟ್ಟಲು ಸಾಧ್ಯವಾಗದೇ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕವಾಗಿ ಮನನೊಂದು ಜೂ.20ರಂದು ರಾತ್ರಿ ಮನೆಯಲ್ಲಿ ಇಲಿ ಪಾಷಾಣ […]

ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ವಿರಾಟ್, ರೋಹಿತ್.

ಭಾರತ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ವಿರಾಟ್ ಕೊಹ್ಲಿ ಪಂದ್ಯ ಮುಗಿದ ಬಳಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ತಮ್ಮ ನಿವೃತ್ತಿಯ ಬಗ್ಗೆ ಖಚಿತಪಡಿಸಿದರು. ನಾಯಕ ರೋಹಿತ್ ಶರ್ಮಾ ಅವರೂ ಬಳಿಕ ತನ್ನ ಟಿ20 ನಿವೃತ್ತಿಯನ್ನು ಘೋಷಿಸಿದರು. ವಿರಾಟ್ ಕೊಹ್ಲಿ ಅವರು ಇದು ನನ್ನ ಕೊನೆಯ […]

ಸಾಂಕ್ರಮಿಕ ರೋಗಗಳನ್ನು ತಡೆಗಟ್ಟಲು ಮುಂಜಾಗೃತೆ ಕ್ರಮ ವಹಸಿ: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ಶಾಲೆ, ಹಾಸ್ಟೆಲ್‌ಗಳಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವ ಕುರಿತು ಪ್ರಮುಖ ಆದ್ಯತೆ ನೀಡಬೇಕು. ಶಾಲೆಗಳಲ್ಲಿ, ವಲಸೆ ಕಾರ್ಮಿಕರು ಹೆಚ್ಚಾಗಿರುವ ಸ್ಥಳಗಳಲ್ಲಿ, ಮೀನುಗಾರಿಕೆಯ ಪ್ರದೇಶಗಳಲ್ಲಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ಕೀಟನಾಶಕ ಸಿಂಪಡಣೆ ಮಾಡುವುದರೊಂದಿಗೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಸೂಚನೆ ನೀಡಿದರು. ಅವರು ಶುಕ್ರವಾರ ನಗರಸಭೆಯ ಕಚೇರಿಯಲ್ಲಿ ಜಿಲ್ಲೆಯಲ್ಲಿ ಸಾಂಕ್ರಮಿಕ ರೋಗಗಳ ತಡೆ ಕುರಿತು ಮುಂಜಾಗೃತಾ ಕ್ರಮದ ಬಗ್ಗೆ ನಗರಸಭೆ ಹಾಗೂ ಆರೋಗ್ಯ ಇಲಾಖೆಯೊಂದಿಗೆ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು. ಜಿಲ್ಲೆಗೆ ಹೊರ […]