ಉಡುಪಿಯಲ್ಲಿ ಸದ್ದು ಮಾಡುತ್ತಿರುವ ಡಿಜಿಟಲ್ ಮಾರ್ಕೆಟಿಂಗ್ ಏಜೆನ್ಸಿ!!!!

ಡಿಜಿಟಲ್ ಮಾರ್ಕೆಟಿಂಗ್ ಕಳೆದ ಕೆಲವು ವರ್ಷಗಳಿಂದ ಮಾರ್ಕೆಟಿಂಗ್‌ನಲ್ಲಿ ಪ್ರಚಲಿತದಲ್ಲಿರುವ ವಿಷಯಗಳಲ್ಲಿ ಒಂದಾಗಿದೆ ಮತ್ತು ಇದು ಮುಂಬರುವ ವರ್ಷಗಳಲ್ಲಿ ಮಾರ್ಕೆಟಿಂಗ್‌ನ ಪ್ರಮುಖ ಚಾನಲ್ ಆಗಲಿದೆ. ಪ್ರತಿ ವ್ಯಾಪಾರವು ಡಿಜಿಟಲ್ ಮಾರ್ಕೆಟಿಂಗ್ ಅನ್ನು ಅಳವಡಿಸಿಕೊಳ್ಳುವುದು, ಡಿಜಿಟಲ್ ಮಾರ್ಕೆಟಿಂಗ್ ಏಜೆನ್ಸಿಗಳನ್ನು ನೇಮಿಸಿಕೊಳ್ಳುವುದು ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮೂಲಕ ROI ಅನ್ನು ಹೆಚ್ಚಿಸುವುದು ಅತ್ಯವಶ್ಯಕವಾಗಿದೆ. ಡಿಜಿಟಲ್ ಮಾರ್ಕೆಟಿಂಗ್ ಜಾಹೀರಾತುದಾರರಿಗೆ ವಯಸ್ಸು, ಲಿಂಗ, ಆಸಕ್ತಿ, ವಿಷಯಗಳು, ಕೀವರ್ಡ್ಗಳು, ವೆಬ್‌ಸೈಟ್‌ಗಳು, ನಗರ, ಪಿನ್ ಕೋಡ್ ಇತ್ಯಾದಿಗಳನ್ನು ಒಳಗೊಂಡಂತೆ ತಮ್ಮ ಪ್ರೇಕ್ಷಕರನ್ನು ನಿಖರವಾಗಿ ಗುರಿಯಾಗಿಸಲು ಅನುಮತಿಸುತ್ತದೆ. ಉಡುಪಿಯ […]

ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ 55 ಕೋಟಿ ರೂ. ನಷ್ಟ

ಉಡುಪಿ: ಕಳೆದ ಹಲವು ದಿನಗಳಿಂದ ಸುರಿದ ಭಾರೀ ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ 55 ಕೋಟಿ ರೂ. ನಷ್ಟ ಉಂಟಾಗಿದೆ‌. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು ಕಡಲ್ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆಮ್ಮಣ್ಣು ಗ್ರಾ.ಪಂ. ವ್ಯಾಪ್ತಿಯ ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯರೊಂದಿಗೆ ಚರ್ಚಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಇಂದು ಸಂಜೆಯವರೆಗೂ ಮಳೆಯಿಂದ ಹಾನಿಯಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಉಡುಪಿಯಲ್ಲಿ ಇದ್ದು ನೆರೆಹಾನಿ ನೋಡುವಂತೆ […]

ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಡನೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಉಡುಪಿ: ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು ಪ್ರದೇಶದಲ್ಲಿ ಕಡಲ್ಕೊರೆತ ಪೀಡಿತ ಭಾಗಗಳಿಗೆ ಅಧಿಕಾರಿಗಳೊಂದಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಡಲ್ಕೊರೆತ ಪ್ರದೇಶದಲ್ಲಿ ಈಗಾಗಲೇ ಹಲವು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಹಲವು ಮನೆಗಳು ಹಾಗೂ ಲಕ್ಷ್ಮೀ ನಾರಾಯಣ ಭಜನ ಮಂದಿರದ ಬಳಿಯ ತಡೆಗೋಡೆ ಸಮುದ್ರ ಪಾಲಾಗುವ ಸಂಭವವಿದ್ದು ತಕ್ಷಣ ತುರ್ತು ಕಾಮಗಾರಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳದಲ್ಲೇ ಮೀನುಗಾರಿಕೆ ಸಚಿವರಾದ ಶ್ರೀ ಮಾಂಕಾಳ ವೈದ್ಯರಿಗೆ ದೂರವಾಣಿ ಕರೆ […]

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷಗಳ ಕಠಿನ ಶಿಕ್ಷೆ, 50,000 ರೂ. ದಂಡ

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿನ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿ ಹುಬ್ಬಳ್ಳಿ ನವನಗರ ಅಮರಗೋಳ್‌ ಬಸವಕಾಲೊನಿಯ ವಿವೇಕ್‌ ಅಂಬಿಗೇರ(20). ಪ್ರಕರಣದ ವಿವರ:ಆರೋಪಿ 2023ರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ತೊಕೊಟ್ಟಿನ ಲಾಡ್ಜ್ವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದು, ಇದರ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯ ಆರಕ್ಷಕ ನಿರೀಕ್ಷಕರಾಗಿದ್ದ ಶಾಂತಿನಾಥ ಜೆ.ವಣ್ಣೂರ […]