ಮಂಗಳೂರು: ರೋಹನ್ ಸಿಟಿ ಬಿಜೈ ವಾಣಿಜ್ಯ ಮಳಿಗೆಗಳಲ್ಲಿ ವಿನಿಯೋಗಿಸಿ: ಖಚಿತ 7.50% ಪ್ರತಿಫಲವನ್ನು ಪಡೆಯಿರಿ.

ಮಂಗಳೂರು: ‘ರೋಹನ್ ಸಿಟಿ’ ರೋಹನ್ ಕಾರ್ಪೊರೇಷನ್ ಸಂಸ್ಥೆಯ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು, ಒಟ್ಟು 546 ಅಪಾರ್ಟ್‍ಮೆಂಟ್‍ಗಳನ್ನು ಒಳಗೊಂಡಿದೆ. ಡ್ಯುಪ್ಲೆಕ್ಸ್:1405 ರಿಂದ 1505 ಚದರ ಅಡಿ 3 ಬಿಎಚ್‍ಕೆ.1075 ರಿಂದ 1135 ಚದರ ಅಡಿ 2 ಬಿಎಚ್‍ಕೆ.700 ರಿಂದ 815 ಚದರ ಅಡಿ 1 ಬಿಎಚ್‍ಕೆ.ಫ್ಲ್ಯಾಟುಗಳನ್ನು ಹೊಂದಿದೆ. ವಸತಿ ಪ್ರದೇಶದ ಜೊತೆಗೆ, 284 ಪ್ರತ್ಯೇಕ ಘಟಕಗಳನ್ನು ಒಳಗೊಂಡಿರುವ 2 ಲಕ್ಷ ಚದರ […]

ಜಿಲ್ಲೆಯಲ್ಲಿ ಆಗುವ ಜನನ ಹಾಗೂ ಮರಣ ನೋಂದಣಿಯನ್ನು ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಮಾಡಿಸಬೇಕು: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಆಗುವ ಜನನ ಮತ್ತು ಮರಣ ನೊಂದಣಿಯನ್ನು “ಜನನ ಮರಣ ನೋಂದಣಿಅಧಿನಿಯಮಗಳ” ಅನ್ವಯ ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ ಮರಣಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಹಾಗೂ ಮರಣ ದಾಖಲಾತಿಗಳು ಭವಿಷ್ಯದಲ್ಲಿ ಜೀವನದ ಅವಧಿಯ ಪ್ರತೀ ಹಂತದಲ್ಲಿಯೂ ಅವಶ್ಯಕತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸೂಕ್ತ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ […]

ಉಡುಪಿ ಶಾಸಕರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ.

ಉಡುಪಿ: ಉಡುಪಿ ಜಿಲ್ಲೆಯ ಬಗ್ಗೆ ನಿರಂತರವಾಗಿ ನಿರ್ಲಕ್ಷ್ಯ ವಹಿಸುತ್ತ ಸ್ವಪಕ್ಷದ ಕಾರ್ಯಕರ್ತರ ಗೋ ಬ್ಯಾಕ್ ಅಭಿಯಾನಕ್ಕೆ ಓಡೋಡಿ ಬಂದು ಕಾಟಾಚಾರಕ್ಕೆ ಪ್ರಾಕೃತಿಕ ವಿಕೋಪದ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡೆಯನ್ನು ಖಂಡಿಸಿದ ಉಡುಪಿ ಶಾಸಕರ ವಿರುದ್ಧ ಕಾಂಗ್ರೆಸ್ ಮುಖಂಡರು ಹತಾಶ ಹೇಳಿಕೆ ನೀಡುತ್ತಿದ್ದು, ಶಾಸಕರ ಕಾರ್ಯ ವೈಖರಿ, ಹಾಗೂ ಸಿದ್ಧಾಂತ ವಿಚಾರದಲ್ಲಿನ ಬದ್ಧತೆಯ ಬಗ್ಗೆ ಕಾಂಗ್ರೆಸ್ ನಾಯಕರ ಸರ್ಟಿಫಿಕೇಟ್ ಅಗತ್ಯವಿಲ್ಲ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ ರಮೇಶ್ […]

ಉಡುಪಿ: ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ಕೊಡುಗೆ

ಉಡುಪಿ: ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ನ ನೀಡಿದ್ದು ಅದರ ಹಸ್ತಾಂತರ ಕಾರ್ಯಕ್ರಮವು ಇತ್ತೀಚಿಗೆ ನೆರವೇರಿತು. ಅದರ ಪ್ರಾಯೋಜಕರಾದ ಶ್ರೀಯುತ ಕಮಲಾಕರ ನಾಯಕರು ಕೊಡುಗೆಯ ಹಸ್ತಾಂತರ ನೆರವೇರಿಸಿ ಇಂತಹ ಉಪಯುಕ್ತ ಸಾದನವನ್ನು ನೀಡುವರೇ ಬಹಳ ಸಂತೋಷ ವಾಗಿದೆಯೆಂದು ಹೇಳಿ ರೋಟರಿ ಈ ಸೇವಾಕಾರ್ಯಕ್ಕೆ ಅಭಿನಂದಿಸಿದರು. ಪ್ರಾರಂಭದಲ್ಲಿ ಸುಮೇಧಾ ಸಂಸ್ಥೆಯ ಕೋಶಾಧಿಕಾರಿ ರಾಮಚಂದ್ರ ಉಪಾಧ್ಯಾಯರು ಸ್ವಾಗತಿಸಿದರು. ರೋಟರಿ ಅದ್ಯಕ್ಷ ರೋ. ಗುರುರಾಜ ಭಟ್ ಅವರು ದನ್ಯವಾದ ಸಮರ್ಪಿಸಿದರು. ನಂತರ ಡಾ. ಪಿ.ವಿ. ಭಂಡಾರಿ […]

ಉಡುಪಿ: ಇಂದ್ರಾಳಿ ದೇವಸ್ಥಾನದ ಹೊಸ ಕುಣಿತ ಭಜನ ತಂಡ ಉದ್ಘಾಟನೆ.

ಉಡುಪಿ: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾಮಾಕ್ಷಿ ಹಾಗೂ ಕಾಲ ಬೈರವ ಸನ್ನಿಧಾನ‌, ಇಂದ್ರಾಳಿ ಉಡುಪಿ ದೇವಸ್ಥಾನದ ಹೊಸ ಕುಣಿತ ಭಜನ ತಂಡದ ಉದ್ಘಾಟನೆಯು ಗುರು ಪೂರ್ಣಿಮೆಯ ದಿನ ಜು.21 ರಂದು ದೀಪ ಪ್ರಜ್ವಲಿಸುದರ ಮೂಲಕ ಚಾಲನೆ ನೀಡಲಾಯಿತು. ಗುರುಗಳಾಗಿ ರೋಹಿತ್ ಕಬಿಯಾಡಿ, ಧರ್ಮಸ್ಥಳ ಭಜನ ಪರಿಷತ್ತಿನ ಹಿರಿಯಡ್ಕ ವಲಯದಅಧ್ಯಕ್ಷರು ವಿಜಯ್ ಶೆಟ್ಟಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಭಜನ ಪರಿಷತ್ತಿನ ನಿರೀಕ್ಷಣಾ ಅಧಿಕಾರಿ ರಾಘವೇಂದ್ರ , ಹಿರಿಯಡ್ಕ ವಲಯದ ಕಾರ್ಯದರ್ಶಿ ಪೂರ್ಣಿಮಾ ಹಾಗೂ […]