ಉಡುಪಿ: ರಸ್ತೆ ಹೊಂಡದ ಮೇಲೆ ಪ್ರೇತಗಳ ಲಾಂಗ್ ಜಪ್

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಅಷ್ಟಮಿ ಮತ್ತು ವಿಟ್ಲಪಿಂಡಿ ಉತ್ಸವದ ಪ್ರಯುಕ್ತ ವಿವಿಧ ವೇಷಧಾರಿಗಳು ಸಂಚರಿಸಿ ಮನರಂಜನೆ ನೀಡುತ್ತಿದ್ದಾರೆ. ಹುಲಿ ವೇಷಧಾರಿಗಳು, ಅದೇ ರೀತಿ ಮಹಿಷಾಸುರ ,ರಾಕ್ಷಸ ವೇಷಧಾರಿಗಳು… ಹೀಗೆ ಬಗೆ ಬಗೆಯ ವೇಷಗಳು ಅಲ್ಲಲ್ಲಿ ಕಣ್ಣಿಗೆ ಬೀಳುತ್ತಿವೆ. ಇದೇ ವೇಳೆ ನಾಲ್ವರು ವೇಷಧಾರಿಗಳು ಉಡುಪಿಯ ಹೊಂಡಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಅಣಕ ಮಾಡಿದ್ದು ಸಾಕಷ್ಟು ವೈರಲ್ ಆಗುತ್ತಿದೆ. ಈ ರಸ್ತೆಯಲ್ಲಿ ಸಂಚರಿಸಿದರೆ ಅಪಾಯ ಖಚಿತ. ಯಮಧರ್ಮನೂ ಅಳತೆ ಮಾಡುವಷ್ಟು ಗುಂಡಿಗಳು ಬಿದ್ದಿವೆ.. ಇದು ಆದಿ ಉಡುಪಿ-ಮಲ್ಪೆೆ ಸಂಪರ್ಕಿಸುವ ರಸ್ತೆಯಲ್ಲಿ […]
ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧನ

ಉಡುಪಿ: ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ (63) ಅವರು ಹೃದಯಾಘಾತದಿಂದ ಆ. 27ರಂದು ನಿಧನ ಹೊಂದಿದರು. ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷರಾಗಿ, ಹಾಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕಟಪಾಡಿ ಗ್ರಾ.ಪಂ.ನಲ್ಲಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಟಪಾಡಿ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿರುವ ಅವರು ವಿವಿಧ ದೇವಸ್ಥಾನ, ದೈವಸ್ಥಾನಗಳಲ್ಲಿ ಜೀರ್ಣೋದ್ದಾರ ಸಮಿತಿಗಳಲ್ಲಿ ತೊಡಗಿಸಿಕೊಂಡಿದ್ದರು. ಸಾಮಿಲ್ ಉದ್ಯಮಿಯಾಗಿದ್ದು, ಸಾಮಿಲ್ […]
ತ್ರಿಶಾ ಕ್ಲಾಸಸ್ : ಸಿ ಎ ಫೌಂಡೇಶನ್ 48 ಗಂಟೆಗಳ ರಿವಿಷನ್ ತರಗತಿಗಳು

ಸಿ ಎ, ಸಿ ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳಿಗೆ ಸತತ 26 ವರ್ಷಗಳಿಂದ ತರಬೇತಿಯನ್ನು ನೀಡುತ್ತಾ ಬಂದಿರುವ ತ್ರಿಶಾ ಕ್ಲಾಸಸ್ ವತಿಯಿಂದ ಈ ಬಾರಿ ಸೆಪ್ಟೆಂಬರ್ ನಲ್ಲಿ ಸಿ ಎ ಫೌಂಡೇಶನ್ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ರಿವಿಷನ್ ತರಗತಿಗಳು ಸಪ್ಟೆಂಬರ್ 1 ರಿಂದ ಆರಂಭಗೊಳ್ಳಲಿದೆ. ಅನುಭವಿ ಪ್ರಾಧ್ಯಾಪಕ ವೃಂದ , ನಾಲ್ಕೂ ವಿಷಯಗಳ ಸಂಪೂರ್ಣ ಅಧ್ಯಯನ, ಐಸಿಎಐ ಮಾದರಿಯ ಪೂರ್ವ ಸಿದ್ಧತಾ ಪರೀಕ್ಷೆಗಳು, ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಲಹೆ ಸೂಚನೆಗಳು ಇತ್ಯಾದಿಗಳು ತರಗತಿಯ ವೈಶಿಷ್ಟ್ಯಗಳಾಗಿವೆ. ಆಸಕ್ತರು […]