ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ ಐದಕ್ಕೆ ಏರಿಕೆ..!

ಕಾರ್ಕಳ: ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಎರಡು ದಿನಗಳ ಹಿಂದೆ ವಶಕ್ಕೆ ಪಡೆದುಕೊಂಡ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಆ.28ರಂದು ಬಂಧಿಸಿದ್ದಾರೆ. ಅವರನ್ನು ಕೂಡ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ಕೊಳ್ಳಲಾಗಿದೆ. ಬಂಧಿತ ಆರೋಪಿಗಳ ಪೈಕಿ ಅಭಯ್‌ನನ್ನು ಪೊಲೀಸರು ಈಗಾಗಲೇ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು. ಉಳಿದ ಇಬ್ಬರು ಆರೋಪಿಗಳಾದ ಅಲ್ತಾಫ್ […]

ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ಬೃಹತ್ ರಕ್ತದಾನ ಶಿಬಿರ

ಉಡುಪಿ: ಮನುಷ್ಯ ಆರೋಗ್ಯಕರವಾಗಿರ ಬೇಕಾದರೆ ಉತ್ತಮ ಆಹಾರ ಪದ್ಧತಿಯ ಜೊತೆಗೆ ದೈಹಿಕ ವ್ಯಾಯಾಮದ ಅಗತ್ಯವೂ ಇದೆ. ವಿದ್ಯಾರ್ಥಿಗಳು ತಮ್ಮನ್ನು ಬೇರೆ ಬೇರೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ಕ್ರೀಡೆಯಿಂದ ದೇಹಕ್ಕೆ ಒಳ್ಳೆಯ ವ್ಯಾಯಾಮ ಸಿಗುವುದರ ಜೊತೆಗೆ ಕೊಲೆಸ್ಟ್ರಾಲ್ ಸಮಸ್ಯೆ, ರಕ್ತದ ಒತ್ತಡ, ಉದಾಸೀನತೆಯಂತಹ ಸಮಸ್ಯೆಯನ್ನು ಹೋಗಲಾಡಿಸಿ, ವಿದ್ಯಾರ್ಥಿಗಳಲ್ಲಿ ಉತ್ತಮ ಯೋಚನೆ ಮತ್ತು ಕ್ರೀಯಾಶೀಲತೆಯನ್ನು ಹೆಚ್ಚಿಸುತ್ತದೆ ಎಂದು ಜಿಲ್ಲೆಯ ಮಾನ್ಯ ಶಾಸಕರಾದ ಶ್ರೀ.ಯಶ್‌ಪಾಲ್ ಸುವರ್ಣ ಅಭಿಪ್ರಾಯ ಪಟ್ಟರು. ಇವರು ಜಿಲ್ಲೆಯ ಡಾ. ಜಿ. ಶಂಕರ್ ಸರಕಾರಿ ಪ್ರಥಮ […]

ಪೆರ್ಡೂರು: ನಾಯಿಯನ್ನು ಬೆನ್ನಟ್ಟಿ ಬಂದು ಬಾವಿಗೆ ಬಿದ್ದ ಚಿರತೆ.!

ಉಡುಪಿ: ಉಡುಪಿ ಜಿಲ್ಲೆಯ ಪೆರ್ಡೂರು ಎಂಬಲ್ಲಿ ನಾಯಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಸಂಭವಿಸಿದೆ. ಘಟನೆ ನಡೆಯುತ್ತಿದ್ದಂತೆ ಗಾಬರಿಗೊಂಡ ಮನೆಯವರು ಮತ್ತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಮೇಲೆತ್ತುವ ಕಾರ್ಯಾಚರಣೆ ನಡೆಸಿದರು. ಹಗ್ಗದ ಮೂಲಕ ಬೋನ್ ಬಾವಿಗೆ ಇಳಿಸಿ, ಬಳಿಕ ಚಿರತೆಯನ್ನು ಸೆರೆಹಿಡಿಯಲಾಯಿತು.

ಶಿರ್ವಾ: ಮಹಿಳೆ ಸಂಶಯಾಸ್ಪದ ಸಾವು; ಪ್ರಕರಣ ದಾಖಲು

ಉಡುಪಿ: ಮಹಿಳೆಯೊಬ್ಬರ ಸಂಶಯಾಸ್ಪದ ಸಾವಿನ ಕುರಿತು ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ತಾಯಿ ಸುಮತಿ (66) ಅವರು ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆಂದು ಮಹಿಳೆಯ ಮಗಳು ದೂರಿನಲ್ಲಿ ತಿಳಿಸಿದ್ದಾರೆ‌. ಮೃತರಿಗೆ 5 ಜನ ಮಕ್ಕಳಿದ್ದು ಅವರ ಗಂಡ 3 ವರ್ಷದ ಹಿಂದೆ ಮರಣ ಹೊಂದಿದ ಬಳಿಕ ಒಬ್ಬರೇ ವಾಸಿಸುತ್ತಿದ್ದರು. ಮಕ್ಕಳು ಆಗಾಗ್ಗೆ ಬಂದು ಹೋಗುತಿದ್ದರು. ಆ.26ರಂದು ಮಗಳು ವಿಜಯ್ ಅವರು ಸುಮತಿ ರವರನ್ನು ಮನೆಗೆ ಬಂದು ಮಾತನಾಡಿಸಿಕೊಂಡು ಹೋಗಿದ್ದು ಪ್ರತಿ ನಿತ್ಯದಂತೆ ಆಗಸ್ಟ್ 27 ರಂದು ರಾತ್ರಿ […]