ವಿದ್ಯಾರ್ಥಿವೇತನ ಸೌಲಭ್ಯ : ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಪಿ ತಂತ್ರಾಂಶದಲ್ಲಿ ಪ್ರೀ-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು 1 ರಿಂದ 10 ನೇ ತರಗತಿಯ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್https://ssp.postmatric.karnataka.gov.in/CA/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:0820-2574810, 2574811 […]

ಜಿಲ್ಲಾ ಮಟ್ಟದ ಮ್ಯಾರಥಾನ್‌ಗೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಎನ್.ಎಸ್.ಎಸ್) ಅಜ್ಜರಕಾಡು, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಸಾಯಿರಾಧಾ ಗ್ರೂಪ್, ರಾಜ್ ಫಿಶ್‌ಮಿಲ್ ಮತ್ತು ಆಯಿಲ್ ಕಂಪನಿ ಮಲ್ಪೆ, ಆದರ್ಶ ಆಸ್ಪತ್ರೆ ಉಡುಪಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಮತ್ತು […]

ಉಡುಪಿ: ನೇಜಾರು ಹತ್ಯೆ ಪ್ರಕರಣದ ವಿಚಾರಣೆ ತಡೆಯಾಜ್ಞೆ ತೆರವು: ಹೈಕೋರ್ಟ್ ಆದೇಶ

ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30ರಂದು ಆದೇಶ ಹೊರಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ನವಾಜ್, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸುವಂತೆ ನಿರ್ದೇಶನ ನೀಡಿದ್ದಾರೆ. ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ […]

ಕುಂದಾಪುರ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ -ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್https://karnemakaone.kar.nic.in/abcd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ತಾಲೂಕು ಪಂಚಾಯತ್ ಹತ್ತಿರದ ಶಿಶು ಅಭಿವೃದ್ಧಿಯೋಜನಾಧಿಕಾರಿಗಳ ಕಛೇರಿಯನ್ನು […]

ಮಂಗಳೂರು: ಹವ್ಯಾಸಿಗಳಿಂದ ಕೊಂಕಣಿ ಭಾಷೆ, ಸಾಹಿತ್ಯ ಸಮೃದ್ದಿ – ಫಾ. ಪ್ರವೀಣ್ ಮಾರ್ಟಿಸ್

ಮಂಗಳೂರು: “ಜೀವನಾನುಭವಕ್ಕಿಂತ ದೊಡ್ಡ ವಿಶ್ವವಿದ್ಯಾಲಯ ಇನ್ನೊಂದಿಲ್ಲ. ಕೊಂಕಣಿ ಭಾಷೆ, ಸಾಹಿತ್ಯ, ಕಲೆಯನ್ನು ಬೆಳೆಸುವಲ್ಲಿ ಜೀವಾನಾನುಭವದ ವಿಶ್ವವಿದ್ಯಾಲಯದಲ್ಲಿ ಕಲಿತ ಹವ್ಯಾಸಿಗಳು, ವಿಶ್ವವಿದ್ಯಾಲಯದ ವಿಂದ್ವಾಸರಿಗಿಂತಲೂ ತುಸು ಜಾಸ್ತಿಯೇ ದೇಣಿಗೆ ನೀಡಿದ್ದಾರೆ. ಮಂಗಳೂರು, ಮುಂಬಯಿ ಮತ್ತು ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿದ್ದು, ಕೊಂಕಣಿ ನಾಟಕ, ಕಲೆ, ನಿರೂಪಣೆ, ಸಂಗೀತ – ಹೀಗೆ ಕೊಂಕಣಿಯ ಬಹುತೇಕ ಕ್ಷೇತ್ರಗಳಿಗೂ ಆರು ದಶಕಗಳಿಗಿಂತಲೂ ಹೆಚ್ಚು ಸೇವೆ ನೀಡಿರುವ ಎಡ್ಡಿ ಸಿಕ್ವೇರಾ ನಾಟಕಗಳಲ್ಲಿ ಕರಾವಳಿಯ ಕೊಂಕಣಿಗರ ಜನಜೀವನ ಮತ್ತು ಏರು ಪೇರುಗಳ ಪ್ರತಿಫಲನ ಕಾಣಬಹುದಾಗಿದೆ. ಈ ನಿಟ್ಟಿನಲ್ಲಿ ಇಂದು […]