ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ :ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜನಸಾಮಾನ್ಯರಿಗೆ ಪಸರಿಸಲು ಬೃಹತ್ ಮಾನವ ಸರಪಳಿಯನ್ನು ಸೆಪ್ಟಂಬರ್ 15 ರಂದು ಒಂದು ಲಕ್ಷಕ್ಕೂ ಹೆಚ್ಚು ಜನರು ನಿರ್ಮಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ಮಾನವಸರಪಳಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವಪೀಳಿಗೆಗೆ ಪ್ರಜಾಪ್ರಭುತ್ವದ […]

ಬೇಕಾಗಿದ್ದಾರೆ

ಉಡುಪಿ:ಬ್ರಹ್ಮಾವರದಲ್ಲಿ ಬೆಳಗಿನ ಜಾವ 4 ಗಂಟೆ ಇಂದ ಮಧ್ಯಾಹ್ನ 1 ಗಂಟೆವರೆಗೆ ಹೋಟೆಲ್ ಮತ್ತು ಅಂಗಡಿಗಳಿಗೆ ಲೈನ್ ಸೇಲ್ ಮಾಡಲು TATA AC ವಾಹನಕ್ಕೆ ಅನುಭವಿ ಡ್ರೈವರ್ ಬೇಕಾಗಿದ್ದಾರೆ. ವಸತಿ,ಊಟ,ಸೌಲಭ್ಯವಿದೆ.ಮತ್ತು ರಾತ್ರಿ ಪಾಳಿಯಲ್ಲಿ ಸಂಜೆ 6 ರಿಂದ ರಾತ್ರಿ 2.30 ತನಕ ಕೆಲಸ ಮಾಡಲು ಕಿಚನ್ ಹೆಲ್ಪರ್ ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9741761153ಸ್ಥಳ :ಬ್ರಹ್ಮಾವರ

ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು.

ಮಂಗಳೂರು: ಬೆಂಗಳೂರಿನ ಹೊಟೇಲೊಂದರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಮಹಿಳೆಯೋರ್ವಳು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಅವರು ಬೆಂಗಳೂರಿನ ಪೈ ವಿಸ್ತಾ ಹೋಟೆಲ್‌ನಲ್ಲಿ 2023ರ ಜೂನ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ರವಿವಾರ ಮಹಿಳೆ ದೂರು ನೀಡಿದ್ದಾರೆ‌. ಅಲ್ಲದೆ ದೌರ್ಜನ್ಯ ಎಸಗಿರುವ ಸಂದರ್ಭದ ಫೋಟೊ, ಸೆಲ್ಫಿ, ವಿಡಿಯೋ ಇಟ್ಟುಕೊಂಡು ಅವರು ತನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ IPC 417, […]

“ಅಮ್ಮ ನನ್ನನ್ನು ಕ್ಷಮಿಸಿಬಿಡು” ತನ್ನ ತಾಯಿಯನ್ನು ಕೊಂದು ಇನ್ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ ಪಾಪಿ ಮಗ: ಗುಜರಾತ್‌ನಲ್ಲಿ ನಡೆದ ಬೆಚ್ಚಿ ಬೀಳಿಸುವ ಭಯಾನಕ ಕಥೆ..!

ಗುಜರಾತ್: ಮಗನೇ ತಾಯಿಯನ್ನು ಕೊಲೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವನ್ನು ಹರಿಬಿಟ್ಟಿರುವ ಘಟನೆ ಗುಜರಾತ್‌ನ ರಾಜ್ ಕೋಟ್‌ನ ಭಗತ್ ಸಿಂಗ್ ಜಿ ಎಸ್ಟೇಟ್ ನಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥ ತಾಯಿಯೊಂದಿಗೆ ಜಗಳವಾಡಿ ಆಕ್ರೋಶಗೊಂಡ ಪಾಪಿ ಪುತ್ರ ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೆತ್ತ ತಾಯಿಯನ್ನು ಹತ್ಯೆಗೈದ ಆರೋಪಿ ನೀಲೇಶ್ ಗೋಸಾಯಿ (21). ಜ್ಯೋತಿ ಬೆನ್ ಖೋಜೈ ಮೃತ ತಾಯಿ. ಜ್ಯೋತಿ ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. […]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ಜೂನಿಯರ್‌ ಎನ್‌ಟಿಆರ್‌.

ಕೊಲ್ಲೂರು: ತೆಲುಗು ಸಿನೆಮಾ ರಂಗದ ನಟ ಜೂನಿಯರ್‌ ಎನ್‌ಟಿಆರ್‌ ಅವರು ಸಕುಟುಂಬಿಕರಾಗಿ ಸೆ. 1ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಎನ್‌ಟಿಆರ್‌ ಅವರ ತಾಯಿ ಕುಂದಾಪುರ ಮೂಲದ ಶಾಲಿನಿ ಭಾಸ್ಕರ ರಾವ್‌, ಪತ್ನಿ, ರಿಷಬ್‌ ಶೆಟ್ಟಿ ದಂಪತಿ, ನಿರ್ದೇಶಕ ಪ್ರಶಾಂತ್‌ ನೀಲ್‌ ದಂಪತಿ, ನಟ ಪ್ರಮೋದ್‌ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು. ದೇಗುಲದ ವತಿಯಿಂದ ಸಮ್ಮಾನಕಾರ್ಯನಿರ್ವಹಣಾ ಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ ಅವರು ನಟರನ್ನು ದೇಗುಲದ ವತಿಯಿಂದ ಸಮ್ಮಾನಿಸಿದರು. ಆ […]