ಉಡುಪಿ: ಸರಕಾರಿ ಬಸ್‌ನ ಮೆಟ್ಟಿಲು ತುಂಡು; ವೀಡಿಯೋ ವೈರಲ್

ಉಡುಪಿ: ಉಡುಪಿ ಜಿಲ್ಲೆಯ ಈ ವರ್ಷ ವಾಡಿಕೆಗಿಂತ ಜಾಸ್ತಿ ಮಳೆ ಸುರಿದಿದೆ. ಇದರಿಂದಾಗಿ ರಸ್ತೆ ವಿಪರೀತ ಹೊಂಡಗಳಿಂದ ತುಂಬಿದ್ದು ಸವಾರರು ಪರದಾಡುತ್ತಿದ್ದಾರೆ. ಇದೇ ವೇಳೆ ಹದಗೆಟ್ಟ ರಸ್ತೆಯಿಂದಾಗಿ ವಾಹನಗಳಿಗೂ ಸಾಕಷ್ಟು ಹಾನಿ ಉಂಟಾಗುತ್ತಿದೆ. ಉಡುಪಿ- ಕಾರ್ಕಳ ನಡುವೆ ಸಂಚರಿಸುವ ಸರಕಾರಿ ಬಸ್ಸೊಂದರ ಮೆಟ್ಟಿಲು ಸಂಪೂರ್ಣ ತುಂಡಾಗಿದ್ದು, ಈ ವಿಡಿಯೋ ಇದೀಗ ಸಾಕಷ್ಟು ವೈರಲ್ ಆಗಿದೆ. ಈ ಬಸ್ಸಿನಲ್ಲಿ ಪ್ರಯಾಣ ಉಚಿತ, ಅಪಾಯ ಖಚಿತ ಎಂದು ಜನರು ಕಮೆಂಟ್ ಮಾಡುತ್ತಿದ್ದಾರೆ. ಇದೇ ವೇಳೆ ಈ ವೈರಲ್ ವಿಡಿಯೋ ಸಂಬಂಧಪಟ್ಟ […]

ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ

ಉಡುಪಿ: 2024-25ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯಲ್ಲಿ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ “ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆಯಾಗಿದೆ. ಪ್ರಶಸ್ತಿ ಪುರಸ್ಕೃತ ಶಿಕ್ಷಕ- ಶಿಕ್ಷಕಿಯರ ಹೆಸರು ಈ ಕೆಳಕಂಡಂತಿದೆ.

ಮಣಿಪಾಲ: ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಕಳ್ಳತನ; ಪ್ರಕರಣ ದಾಖಲು.

ಮಣಿಪಾಲ: ಶಿವಳ್ಳಿ ಗ್ರಾಮದಲ್ಲಿ ನಡೆದುಕೊಂಡು ಹೋಗುತ್ತಿದ್ದ‌ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಕದ್ದ ಕುರಿತು ಮಣಿಪಾಲ ಪೊಲೀಸ್ ಠಾಣೆಹಳ್ಳಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 3 ರಂದು ಬೆಳಿಗ್ಗೆ ಕಮಲ (70), ಶಿವಳ್ಳಿ ಗ್ರಾಮ, ಉಡುಪಿ ಇವರು ತನ್ನ ಅಣ್ಣನ ಮನೆಗೆ ಹೋಗಲಿ ಬಗ್ಗೆ ಮನೆಯಿಂದ ಹೊರಟಿದ್ದು ಬೆಳಿಗ್ಗೆ 11 ಗಂಟೆಗೆ ಶಿವಳ್ಳಿ ಗ್ರಾಮದ ಸಗ್ರಿನೋಳೆ ತಿರುಮಲ ಕೋಳಿ ಫಾರಂನ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ವ್ಯಕ್ತಿ ಓರ್ವ ಹಿಂದಿನಿಂದ ಬಂದು ಅವರ ಕುತ್ತಿಗೆಯಲ್ಲಿದ್ದ ಸರ ಕದ್ದು […]

ಉಡುಪಿ: ಬಿಜಿಎಸ್ ಮೋಟಾರ್ಸ್ ಸುಜುಕಿಯಲ್ಲಿ ಗಣೇಶ ಚತುರ್ಥಿ ಮತ್ತು ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು.

ಉಡುಪಿ: ಉಡುಪಿ ಕಿನ್ನಿಮೂಲ್ಕಿ ಬಿಜಿಎಸ್ ಮೋಟಾರ್ಸ್ ಸುಜುಕಿಯಲ್ಲಿ ಗಣೇಶ ಚತುರ್ಥಿ ಮತ್ತು ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳನ್ನು ಗ್ರಾಹಕರಿಗೆ ಆಯೋಜಿಸಿದೆ. ಹಾಗೂ BGS ಮೋಟಾರ್ಸ್ ಸುಜುಕಿಯಲ್ಲಿ ಗಣೇಶ ಚತುರ್ಥಿ ಮತ್ತು ನವರಾತ್ರಿಯನ್ನು ಆಚರಿಸಿಕೊಳ್ಳಿ. ಇದೀಗ ಗ್ರಾಹಕರಿಗಾಗಿ ಸುಜುಕಿಯೊಂದಿಗೆ ಸವಾರಿ ಮಾಡಿ ಮತ್ತು ಚಿನ್ನದ ನಾಣ್ಯವನ್ನು ಗೆಲ್ಲುವ ಅವಕಾಶವನ್ನು ಕಲ್ಪಿಸಿದೆ. ಹಾಗೂ ಗ್ರಾಹಕರು ಯಾವುದೇ ಸುಜುಕಿ ದ್ವಿಚಕ್ರ ವಾಹನವನ್ನು ಖರೀದಿಸಿ. ನಿಮ್ಮ ಫೋಟೋ ಕ್ಲಿಕ್ ಮಾಡಿ, ಅದನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿ. #FestivalStartsWithBgsMotors ಅನ್ನು ಬಳಸಿ. […]

ಇಂದಿನಿಂದ ಉಡುಪಿ ಭಂಡಾರಕೇರಿ ಮಠದಲ್ಲಿ ಪ್ರೋಷ್ಠಪದಿ ಭಾಗವತ ಪ್ರವಚನ

ಉಡುಪಿ: ಉಡುಪಿ ರಥಬೀದಿಯಲ್ಲಿರುವ ಭಂಡಾರಕೇರಿ ಮಠದಲ್ಲಿ ಸೆ. 4ರಿಂದ 16ರವರೆಗೆ ಬೆಳಿಗ್ಗೆ 9 ರಿಂದ 12ರವರೆಗೆ ಪ್ರೋಷ್ಠಪದಿ ಭಾಗವತ ಪ್ರವಚನ ಏರ್ಪಡಿಸಲಾಗಿದೆ ಎಂದು ಭಂಡಾರಕೇರಿ ಮಠದ ಶ್ರಿ ವಿದ್ಯೇಶ ತೀರ್ಥ ಸ್ವಾಮೀಜಿ ತಿಳಿಸಿದರು. ಉಡುಪಿ ಭಂಡಾರಕೇರಿ ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 4 ರಂದು ಬೆಳಗ್ಗೆ 9 ಗಂಟೆಗೆ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸೆ. 16ರಂದು ಸಾಯಂಕಾಲ 5 ಗಂಟೆಗೆ ಪ್ರೋಷ್ಠಪದಿ ಮಂಗಲ ಮಹೋತ್ಸವ ನಡೆಯಲಿದ್ದು, ಕೃಷ್ಣಾಪುರ ಶ್ರೀ ವಿದ್ಯಾಸಾಗರ […]