ಕಾರ್ಕಳ: ಹರ್ಷಿತ್ ಆಚಾರ್ಯಗೆ ‘ಹೆಮ್ಮೆಯ ಕನ್ನಡಿಗ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ.

ಕಾರ್ಕಳ: ಕ್ರೀಡೆಯಲ್ಲಿ(ಕರಾಟೆ ಮತ್ತು ಚದುರಂಗ) ಉತ್ತಮ ಸಾಧನೆಯನ್ನು ಗುರುತಿಸಿ ಕಾರ್ಕಳ ತಾಲೂಕಿನ ಬೈಲೂರು ಪ್ರೌಢಶಾಲೆಯ ವಿದ್ಯಾರ್ಥಿ 9 ನೇ ತರಗತಿಯ ಹರ್ಷಿತ್ ಆಚಾರ್ಯ ಅವರಿಗೆ ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ ಇವರು ಸೆ.8ರಂದು ಬೆಳಗಾವಿ ಜಿಲ್ಲೆಯ ಕನ್ನಡ ಭವನದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ‘ಹೆಮ್ಮೆಯ ಕನ್ನಡಿಗ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಿದ್ದಾರೆ. ಹರ್ಷಿತ್ ಕರಾಟೆ ಮಾಸ್ಟರ್ ಗಳಾದ ಸೋಮನಾಥ ಡಿ. ಸುವರ್ಣ ಮತ್ತು ಡಾ.ವಿಜಯಲಕ್ಷ್ಮಿ ಆರ್ ನಾಯಕ್ ಅವರ ಶಿಷ್ಯರಾಗಿದ್ದು, ಬೈಲೂರು ಪ್ರೌಢಶಾಲೆಯ ಮುಖ್ಯ ಶಿಕ್ಷಕ […]
ಉಡುಪಿ: ಡಾ.ವಿಜಯಲಕ್ಷ್ಮಿ ಆರ್. ನಾಯಕ್ ಅವರಿಗೆ ‘ಸಾವಿತ್ರಿ ಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿ’ ಪ್ರಧಾನ.

ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಮಾತ್ರವಲ್ಲದೆ ಅಕ್ಯುಪ್ರೆಶರ್ ಮತ್ತು ವಾಟರ್ ಥೆರಪಿ, ಹೀಗೆ ಹಲವು ಕ್ಷೇತ್ರದಲ್ಲಿ ಉತ್ತಮ ಸಾಧನೆಯನ್ನು ಗುರುತಿಸಿ ಹಿರಿಯಡ್ಕ ಅಂಜಾರು ಗ್ರಾಮದ ಡಾ. ವಿಜಯಲಕ್ಷ್ಮಿ ಆರ್ ನಾಯಕ್ ಅವರಿಗೆ ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ್ ಇವರು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಇವರು ಕುಬುಡೊ ಬುಡೋಕಾನ್ ಕರಾಟೆ ಡೊ ಅಸೋಸಿಯೇಶನ್ ಕರ್ನಾಟಕ (ರಿ). ಸಂಸ್ಥೆಯ ಶಿಕ್ಷಕಿಯಾಗಿದ್ದು, ಮುಖ್ಯಶಿಕ್ಷಕ ರವಿಕುಮಾರ್ ಉದ್ಯಾವರ, ಸೋಮನಾಥ ಡಿ. ಸುವರ್ಣ ಹಾಗೂ ನಾರಾಯಣ ಆಚಾರ್ಯ ಅವರ […]
ಕೋಟ: ಮಾರಣಬಲೆ ತರಲು ಹೋಗಿದ್ದ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತ್ಯು

ಉಡುಪಿ: ಸಮುದ್ರದಲ್ಲಿ ಬಿಟ್ಟಿದ್ದ ಮಾರಣಬಲೆ ತರಲು ಹೋಗಿದ್ದ ಮೀನುಗಾರನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಪಾರಂಪಳ್ಳಿ- ಪಡುಕರೆ ಕಡಲ ತೀರದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತ ಮೀನುಗಾರನನ್ನು ಭಾಸ್ಕರ ಪೂಜಾರಿ (55) ಎಂದು ಗುರುತಿಸಲಾಗಿದೆ. ಅವರು ಇಂದು ಮಧ್ಯಾಹ್ನ ಪಾರಂಪಳ್ಳಿಯ ಮರಿನಾ ಮನೆ ಗೆಸ್ಟ್ ಹೌಸ್ ಸಮೀಪ ಸಮುದ್ರದಲ್ಲಿ ಬಿಟ್ಟಿದ್ದ ಮಾರಣಬಲೆಯನ್ನು ಮೇಲೇತ್ತಲು ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಅವರು ಕೊಚ್ಚಿ ಹೋಗಿದ್ದರು. ತಕ್ಷಣವೇ ಮಲ್ಪೆ ಕರಾವಳಿ ಪೊಲೀಸ್ ಠಾಣೆಯ ಸಿಬ್ಬಂದಿ […]
ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜ್ ಗೆ ಇಪ್ಪತ್ತರ ಸಂಭ್ರಮ.

ಕುಂದಾಪುರ: ರಾಜ್ಯದ ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜುಗಳಲ್ಲೊಂದಾದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿಗೆ ಈಗ ಇಪ್ಪತ್ತರ ಸಂಭ್ರಮ. ಮಾಜಿ ಸಂಸದ ದಿವಂಗತ ಐ ಎಮ್ ಜಯರಾಮ ಶೆಟ್ಟರ ಕನಸಿನ ಕೂಸಾಗಿ ಹುಟ್ಟಿದ ಈ ಕಾಲೇಜು ಹಲವು ಕಾರ್ಯವೈಖರಿಗಳಿಂದ ತನ್ನದೇ ಆದ ಛಾಪು ಮೂಡಿಸಿದೆ. 2004ರಲ್ಲಿ ಸ್ಥಾಪಿತವಾದ ಈ ಕಾಲೇಜು ಐ.ಎಂ. ಜಯರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಸ್ಥಾಪನೆಯಾದ ಎಂಎನ್ ಬಿಎಸ್ ಟ್ರಸ್ಟ್ ನ ಅಂಗಸಂಸ್ಥೆಯಾಗಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಪಡೆಯುವ ಭರವಸೆಯ ಸಂಕೇತವಾಗಿ ರೂಪಿತವಾಗಿದೆ. ಅಲ್ಲದೇ ಪ್ರತಿಭಾನ್ವಿತ ಮತ್ತು ಆರ್ಥಿಕವಾಗಿ […]
ಉಡುಪಿ: ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆಪ್ರೋತ್ಸಾಹಧನ ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆಸಲ್ಲಿಸಬೇಕು. […]