ಮಂಗಳೂರು: ಅ.02 ರಂದು ಸ್ನೇಹಾಲಯ ವ್ಯಸನ ಮುಕ್ತ ಕೇಂದ್ರ ಉದ್ಘಾಟನೆ

ಮಂಗಳೂರು: ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆಯು ಕಳೆದ 15 ವರುಷಗಳಿಂದ, ಮಂಜೆಶ್ವರದ ಪಾವೂರು ಬಳಿಯ ಬಾಚಾಳಿಕೆ ಎಂಬಲ್ಲಿ ಮಾನಸಿಕ ಅಸ್ವಸ್ಥರಿಗಾಗಿ ಆಶ್ರಮ ಒಂದನ್ನು ಸ್ಥಾಪಿಸಿ, ಅವರಿಗೆ ಅಸರೆ ಒದಗಿಸಿದ್ದು, ರೋಗಿಗಳ ಶೂಶ್ರುಷೆ ಮಾಡಿ, ಔಷೋದೊಪಚಾರ ನೀಡಿ, ಅವರನ್ನು ಗುಣಪಡಿಸಿ 1300ಕ್ಕೂ ಮಿಗಿಲಾಗಿ ಅಂತಹ ಗುಣಪಟ್ಟ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿ, ನಿಸ್ವಾರ್ಥವಾಗಿ ನಡೆಸುತ್ತಿರುವ ಸೇವೆಯು ನಿರಾಶ್ರಿತ, ನಿರಾಧಾರಿತರಿಗೆ ಸ್ನೇಹಾಲಯವು ಭರವಸೆಯ ಆಶಾದೀಪವಾಗಿದೆ. ಸರಕಾರದ ಮಾನ್ಯತೆ ಪಡೆದು, ಸಾರ್ವಜನಿಕರ ಪ್ರಶಂಸೆ, ಬೆಂಬಲದೊಂದಿಗೆ ಸಂಸ್ಥೆಯು ಮಾಡುತ್ತಿರುವ ಸೇವೆಯು ಈಗ ಮನೆಮಾತಾಗಿದೆ. ಸೇವಾ ಕ್ಷೇತ್ರದಲ್ಲಿ […]
ಕ್ಷೇತ್ರಕ್ಕೆ ಅನುದಾನ ತರಲು ವಿಫಲರಾಗಿರುವ ಯಶ್ ಪಾಲ್ ಸುವರ್ಣರಿಂದ ಸರಕಾರದ ಮೇಲೆ ಆಧಾರ ರಹಿತ ಆರೋಪ; ಪ್ರಸಾದ್ರಾಜ್ ಕಾಂಚನ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಬಡ ಜನರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಮುಂದಾಗಿದೆ ಎಂಬ ಶಾಸಕ ಯಶ್ ಪಾಲ್ ಸುವರ್ಣ ಆರೋಪಕ್ಕೆ ಕಾಂಗ್ರೆಸ್ ಮುಖಂಡ ಪ್ರಸಾದ್ರಾಜ್ ಕಾಂಚನ್ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತನ್ನ ವೈಫಲ್ಯವನ್ನು ಮರೆಮಾಚಲು ರಾಜ್ಯ ಸರಕಾರದ ವಿರುದ್ಧ ಆಧಾರ ರಹಿತ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಅವರ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 2016ರ […]
ವಿಶ್ವದ ಅತ್ಯುತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ 2 ವಿಜ್ಞಾನಿಗಳ ಹೆಸರು.

ಕಾರ್ಕಳ: ಅಮೇರಿಕಾದ ಸ್ಟ್ಯಾನಫೋರ್ಡ್ ವಿಶ್ವವಿದ್ಯಾಲಯ ಹಾಗೂ ನೆದರಲ್ಯಾಂಡ್ನ ಎಲ್ಸವಿಯರ್ ಪ್ರಕಾಶನ ಸಂಸ್ಥೆಯು ಪ್ರತಿ ವರ್ಷ ಸೈಟೇಷನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ ಶ್ರೇಷ್ಠ 2% ವಿಜ್ಞಾನಿಗಳ ಪಟ್ಟಿಯನ್ನು ಪ್ರಕಟಿಸುತ್ತದೆ. 2024ನೇ ವರ್ಷದ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಇಬ್ಬರು ಸಂಶೋಧಕರಾದ ಡಾ.ಗಣೇಶ್ ಕುಮಾರ್ ಹಾಗೂ ಡಾ.ಸಂತೋಷ್ ಕೆ […]
ಉಡುಪಿ:ಆರೋಗ್ಯ ನಿಗಾ ಸಹಾಯಕರ ತರಬೇತಿ :ಅರ್ಜಿ ಆಹ್ವಾನ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದವರೆಗಿನ ವಯೋಮಿತಿಯ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್ ಕ್ರಾಸ್ ಕಛೇರಿ ಅಜ್ಜರಕಾಡು ಉಡುಪಿ, ದೂ.ಸಂಖ್ಯೆ: 0820–2532222, ಮೊ.ನಂ:8310311448 ಅಥವಾ 9741762007 […]
ಉಡುಪಿ:ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖಾ ವೆಬ್ಸೈಟ್ ಪರಿಶಿಷ್ಟ ಜಾತಿ SW.KAR.NIC.IN, ಪರಿಶಿಷ್ಟ ಪಂಗಡ: TW.KAR.NIC.IN ಅಥವಾ http://ssp.karnataka.gov.in ಲಿಂಕ್ಗೆ ಲಾಗಿನ್ ಆಗಿ ಸಂಪೂರ್ಣ ಮಾಹಿತಿಯನ್ನು ನೀಡಿ ಕಡ್ಡಾಯವಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಹಾಗೂ […]