ಉಡುಪಿ:ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ […]
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ

ಕುಂದಾಪುರ: ಕೊಲ್ಲೂರು ಶ್ರೀಮುಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಮೊದಲ ಸಭೆ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಕುಂದಾಪುರ ಸಹಾಯಕ ಆಯುಕ್ತರಾದ ಮಹೇಶ್ಚಂದ್ರ ಪ್ರಕ್ರಿಯೆ ನಡೆಸಿದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಧನಾಕ್ಷಿ, ಸುಧಾ ಕೆ., ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ.ವಿ, ಯು. […]
ಕುಂದಾಪುರ: ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜಿಲ್ಲಾ ಸಮಗ್ರ ಚಾಂಪಿಯನ್.

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಒಟ್ಟು 29 ವಿದ್ಯಾರ್ಥಿಗಳು ಪದಕಗಳನ್ನು ಪಡೆಯುವುದರ ಮೂಲಕ ಜಿಲ್ಲಾ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದಿರುತ್ತಾರೆ. 14 ವಿದ್ಯಾರ್ಥಿಗಳು ಚಿನ್ನದ ಪದಕಗಳನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.ಕ್ರಮವಾಗಿ ತರಣ್(61ಕೆ.ಜಿ.ವಿಭಾಗ), ಸಫಾನ್ ಅಲಿ(55ಕೆ.ಜಿ ವಿಭಾಗ), ನಿಖಿಲ್(60ಕೆ.ಜಿ.ವಿಭಾಗ), ಸ್ರಜನ್(63ಕೆ.ಜಿ.ವಿಭಾಗ), ಆರ್ಯನ್(72ಕೆ.ಜಿ.ವಿಭಾಗ), ಪ್ರಣಿತ್(77ಕೆ.ಜಿ.ವಿಭಾಗ), ಕಿಶನ್(82ಕೆ.ಜಿ.ವಿಭಾಗ), ಅಲೆನ್(87ಕೆ.ಜಿ.ವಿಭಾಗ) ಪನ್ನಗ(97ಕೆ.ಜಿ.ವಿಭಾಗ), ಹ್ರತ್ವಿಕ್(97+ಕೆ.ಜಿ.ವಿಭಾಗ) ಅನನ್ಯ (50ಕೆ.ಜಿ.ವಿಭಾಗ), ಅನುಷಾ ಪಿ(68ಕೆ.ಜಿ.ವಿಭಾಗ), ಅನುಷಾ(72ಕೆ.ಜಿ.ವಿಭಾಗ), […]
ಕುಂದಾಪುರ: ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯಮಟ್ಟಕ್ಕೆ ಆಯ್ಕೆ.

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಭಾಗಿತ್ವದಲ್ಲಿ ಅಕ್ಟೋಬರ್ 3 ರಂದು ನಡೆದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆ ರಾಜ್ಯ ಮಟ್ಟದಲ್ಲಿ ರಾರಾಜಿಸಲಿ ಎಂದು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
ಹೆಜಮಾಡಿ: ಸಂಚರಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ; ತಪ್ಪಿದ ಭಾರೀ ದುರಂತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ತಡೆ ರಹಿತ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರು. ಬಳಿಕ ಅದಾನಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಮೂಲಕ ಭಾರೀ ಅವಘಡ ತಪ್ಪಿಸಿದಂತಾಗಿದೆ. ಉಡುಪಿ ಕಡೆಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಮಂಜುನಾಥ ಹೆಸರಿನ ಖಾಸಗಿ ಬಸ್ಸಿನಲ್ಲಿ ಹೆಜಮಾಡಿಯ ಕಿರು ಟೋಲ್ ಗೇಟ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕನ ಗಮನಕ್ಕೆ ಬಂದು ಬಸ್ ನಿಲ್ಲಿಸಿ […]