ಕೊಕ್ಕರ್ಣೆಯ ಸತ್ಯನಾಥ್ ಸ್ಟೋರ್ಸ್ ನಲ್ಲಿ ಅ.9ರಂದು ನೂತನ ಶಾಖೆಯ ಶುಭಾರಂಭ

ಕೊಕ್ಕರ್ಣೆ:ಅ.09 ರಂದು ಕೊಕ್ಕರ್ಣೆಯಲ್ಲಿ ಸತ್ಯನಾಥ್ ಸ್ಟೋರ್ಸ್ ನ ನೂತನ ಶಾಖೆ ಶುಭಾರಂಭಗೊಳ್ಳಲಿದ್ದು ಬುಧವಾರ ಪೂರ್ವಾಹ್ನ ಗಂಟೆ 9.00ಕ್ಕೆ ಸರಿಯಾಗಿ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಶರನ್ನವರಾತ್ರಿ ಮಹೋತ್ಸವ:18ರ ಸಂಭ್ರಮ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ 18ನೇ ವರ್ಷದ ಶರನ್ನವರಾತ್ರಿ ಮಹೋತ್ಸವವನ್ನು ಬಹು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಶ್ರೀ ಕ್ಷೇತ್ರವನ್ನು ಶೂನ್ಯದಿಂದ ಅನಂತದೆಡೆಗೆ ಕೊಂಡೊಯ್ಯುತ್ತಿರುವ ಶ್ರೀ ಗುರೂಜಿಯವರು ಆತ್ಮಸ್ಥೈರ್ಯದ ಪ್ರತೀಕ ಕ್ಷೇತ್ರದ ನಡೆದಾಡುವ ದೇವರಾದ ಶ್ರೀ ಗುರೂಜಿಯವರನ್ನು ಕ್ಷೇತ್ರದ ನವಶಕ್ತಿ ವೇದಿಕೆಯಲ್ಲಿ ಶ್ರೀ ರಮಾನಂದ ಗುರೂಜಿ ಶಿಷ್ಯ ಬಳಗ ಆಯೋಜಿಸಿದ ವಿಶೇಷ ಕಾರ್ಯಕ್ರಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.. ರಾತ್ರಿಯ ರಂಗ ಪೂಜಾ ಸಹಿತ ಕಲ್ಪೋಕ್ತ ಪೂಜೆಯ ನಂತರ ಶ್ರೀ ಕ್ಷೇತ್ರದಿಂದ […]

ಬೆಳ್ತಂಗಡಿ: ಗೆಲ್ಲು ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು.

ಬೆಳ್ತಂಗಡಿ: ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಪುದುವೆಟ್ಟು ಗ್ರಾಮದ ಮಿರ್ಯಾ ಬಳಿ ಅ. 4ರಂದು ನಡೆದಿದೆ. ಮೃತ ವ್ಯಕ್ತಿಯನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್‌ (35) ಎಂದು ಗುರುತಿಸಲಾಗಿದೆ. ಮಿಯಾರ್‌ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ್ದ ಅವರು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾರೆ. ತತ್‌ಕ್ಷಣ ಸ್ಥಳದಲ್ಲಿದ್ದವರು ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ […]

ಮಣಿಪಾಲ: ಹೊಟೇಲ್‌ ಮ್ಯಾನೇಜರ್‌ಗೆ ವಂಚನೆ; ಲಕ್ಷಾಂತರ ರೂ.ನಗದಿನೊಂದಿಗೆ ವೈಟರ್‌ ಪರಾರಿ.

ಮಣಿಪಾಲ: ಮಣಿಪಾಲದ ಈಶ್ವರನಗರದ ಹೊಟೇಲ್‌ವೊಂದರಲ್ಲಿ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌ ಲಕ್ಷಾಂತರ ರೂ.ನಗದಿನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ವಂಚನೆಗೊಳಗಾದ ವ್ಯಕ್ತಿ ಹೋಟೆಲ್ ಮ್ಯಾನೇಜರ್‌ ಆಗಿ ಕೆಲಸ ನಿರ್ವಹಿಸುತ್ತಿರುವ ಗಿರೀಶ್‌. ಗಿರೀಶ್ ಅವರ ಹೊಟೇಲ್‌ನಲ್ಲಿ ವೈಟರ್‌ ಆಗಿ ಕೆಲಸ ಮಾಡಿಕೊಂಡಿದ್ದ ಜಯಮೋಹನ್‌ ಸೋಮೇಶ್‌ ಎಂಬಾತ ಗಿರೀಶ್‌ ಅವರೊಂದಿಗೆ ವಾಸವಾಗಿದ್ದನು. ಸೆ.29ರಂದು ಗಿರೀಶ್‌ ಅವರು ಕೆಲಸ ಮುಗಿಸಿ ರೂಮಿಗೆ ಬಂದು 26,650 ರೂ.ನಗದು ಹಾಗೂ 10,000 ರೂ.ಬೆಲೆಬಾಳುವ ವಿವೋ ವೈ 18 ಮಾದರಿಯ ಮೊಬೈಲ್‌ ಫೋನ್‌ ಅನ್ನು ತನ್ನ ರೂಮಿನ ಡ್ರಾವರ್‌ನಲ್ಲಿಟ್ಟು […]

ಬೈಂದೂರು: ಅಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು.

ಬೈಂದೂರು: ಕಾಲ್ತೋಡು ಗ್ರಾಮದ ಮಂಜು (59) ಎಂಬವರು ಗುರುವಾರ ಅಪರಾಹ್ನ 2.30ರ ಸುಮಾರಿಗೆ ಮನೆಯ ತೋಟದಲ್ಲಿ ಸೊಪ್ಪು ಕೊಯ್ಯುತ್ತಿರುವಾಗ ಅಕಸ್ಮಿಕವಾಗಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.