ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ಶ್ರುತಿಕಾ ಶೆಟ್ಟಿ ದ್ವಿತೀಯ ಸ್ಥಾನ.

ಕುಂದಾಪುರ: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ,ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ 50ರ ಸಂಭ್ರಮಾಚರಣೆಯ ಪ್ರಯಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ‘ಕನ್ನಡ ಭಾಷಣ’ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನಆಡಳಿತ ಮಂಡಳಿ, ಪ್ರಾಂಶುಪಾಲರು/ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಉಡುಪಿ: ಪ್ರೀ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ನ ಎರಡನೇ ವಾರ್ಷಿಕ ಮಹಾಸಭೆ

ಉಡುಪಿ: ಪ್ರೀ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ಉಡುಪಿ ಇದರ ಎರಡನೇ ವಾರ್ಷಿಕ ಮಹಾಸಭೆಯು ಉಡುಪಿ ಬಡಗುಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಭಾನುವಾರ ನಡೆಯಿತು. ಪ್ರೀ ಓನ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ ನ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಅವರು ಸಭೆಯನ್ನು ಉದ್ಘಾಟಿಸಿ ಶುಭಹಾರೈಸಿದರು. ಪ್ರಧಾನ ಕಾರ್ಯದರ್ಶಿ ಉದಯ ಕಿರಣ್ ವಾರ್ಷಿಕ ವರದಿ ಮಂಡಿಸಿದರು. ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಸರ್ಟಿಫಿಕೇಟ್ ಹಾಗೂ ಐಡಿ ಕಾರ್ಡ್ ವಿತರಣೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ, ಉಪಾಧ್ಯಕ್ಷರಾದ […]