“ಸರಸ್ವತಿ ಸಾಧಕ ಸಿರಿ” ರಾಷ್ಟ್ರ ಪ್ರಶಸ್ತಿಗೆ ಶ್ರೀಮತಿ ಮಾಯಾ ಕಾಮತ್ ಆಯ್ಕೆ.

ಮಣಿಪಾಲ:ದಾವಣಗೆರೆಯ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಟಾನದ ವತಿಯಿಂದ ಕನ್ನಡ ನಿತ್ಯೋತ್ಸವದ ಪ್ರಯುಕ್ತ “ಸರಸ್ವತಿ ಸಾಧಕ ಸಿರಿ ” ರಾಷ್ಟ್ರ ಪ್ರಶಸ್ತಿ ಗೆ ಶ್ರೀಮತಿ ಮಾಯಾ ಕಾಮತ್ ಈಶ್ವರನಗರ ಮಣಿಪಾಲ, ಉಡುಪಿ ಜಿಲ್ಲೆ ಇವರು ಆಯ್ಕೆಯಾಗಿದ್ದಾರೆ. ಏಪ್ರಿಲ್ 27ರಂದು ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಕಲ್ಯಾಣಮಂಟಪ, ದಾವಣಗೆರೆಯಲ್ಲಿ ಪ್ರಧಾನ ಸಮಾರಂಭ ಜರಗಲಿದೆ ಎಂದು ಪ್ರತಿಷ್ಟಾನದ ಅಧ್ಯಕ್ಷ ಡಾ. ನಾಗೇಶ್ ಕಿಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾಗಿರಿ:ರಾಷ್ಟ್ರಮಟ್ಟದ ಶೂಟಿಂಗ್ ಸ್ಟಾರ್ಸ್-2025: ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಚಾಂಪಿಯನ್

ವಿದ್ಯಾಗಿರಿ: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ನಡೆಸಿದ ‘ಶೂಟಿಂಗ್ ಸ್ಟಾರ್ಸ್ 2025’ ರಾಷ್ಟ್ರೀಯ ಮಟ್ಟದ ಚಲನಚಿತ್ರ ನಿರ್ಮಾಣ ಮತ್ತು ಸಾಕ್ಷ್ಯಚಿತ್ರ ಸ್ಪರ್ಧೆಯಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜು ಪದವಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಚಾಂಪಿಯನ್ ಆದರು. ಶೂಟಿಂಗ್ ಸ್ಟಾರ್ಸ್ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗೆ ಭಾಜನರಾದರು. ಫೋಟೊಗ್ರಪಿ: ಸ್ಪೂರ್ತಿ – (ಪ್ರಥಮ), ಟ್ರೈಲರ್ ಮೇಕಿಂಗ್ : ಸ್ಪೂರ್ತಿ ಮತ್ತು ತಂಡ (ದ್ವಿತೀಯ), ಆರ್.ಜೆ ಹಂಟ್ – […]

ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ, ಮುಂಡ್ಕಿನಜೆಡ್ಡು ಇದರ 49 ನೇ ಭಜನಾ ಮಂಗಲೋತ್ಸವ ಹಾಗೂ ಯಕ್ಷಗಾನ ಕಾರ್ಯಕ್ರಮ

ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ, ಮುಂಡ್ಕಿನಜೆಡ್ಡು ಇದರ 49 ನೇ ಭಜನಾ ಮಂಗಲೋತ್ಸವದ ಪ್ರಯುಕ್ತ ಮಂದಿರದ ಆವರಣದಲ್ಲಿ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಸಾಲಿಗ್ರಾಮ ಮೇಳದ ಪ್ರಸಿದ್ಧ ಕಲಾವಿದರಿಂದ ಶ್ರೀ ರಾಮ ಪಟ್ಟಾಭಿಷೇಕ ಎಂಬ ಪ್ರಸಂಗ ಪ್ರದರ್ಶಿಸಲ್ಪಟ್ಟಿತು. ಈ ಪ್ರಯುಕ್ತ ಜರುಗಿದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಾರಾಯಣ ನಾಯ್ಕ, ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಎ. ಗುರುರಾಜ ರಾವ್ ಆರೂರು ಪಂಚಾಯತ್ ಅಧ್ಯಕ್ಷರು ,ಎಂ ಬಾಲಕೃಷ್ಣ ಭಟ್, ನಿವೃತ್ತ ಪ್ರಾಧ್ಯಾಪಕರು, ಚೀಂಪ, ಹಿರಿಯ ಯಕ್ಷಗಾನಾಭಿಮಾನಿ, […]

ಉಡುಪಿ:ಅನಧಿಕೃತ ಪ್ರಾಣಿಗಳ ಪಾರುಗಾಣಿಕಾ ಕೇಂದ್ರಕ್ಕೆ ಸಾಕುಪ್ರಾಣಿಗಳನ್ನು ಬಿಡದಂತೆ ಸೂಚನೆ

ಉಡುಪಿ: ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ ನೊಂದಣಿಯಿಲ್ಲದೆ ಬ್ರಹ್ಮಾವರ ತಾಲೂಕು ಕೆರೆಕಟ್ಟೆಮನೆಯ ಬಿ.ಸುದೀಂದ್ರ ಐತಾಳ್ ಇವರು ಅನಧಿಕೃತವಾಗಿ ಪ್ರಾಣಿಗಳ ಪಾರುಗಾಣಿಕಾ ಕೇಂದ್ರವನ್ನು (ಎನಿಮಲ್ ರೆಸ್ಕ್ಯು ಸೆಂಟರ್) ನಡೆಸುತ್ತಿದ್ದು, ಮೂಲಭೂತ ಸೌಕರ್ಯಗಳ ಕೊರತೆ, ಆಹಾರ, ನೀರು, ಸ್ವಚ್ಛತೆ, ಲಸಿಕೆ, ಚಿಕಿತ್ಸೆ ಇತ್ಯಾದಿ ದಾಖಲೆಗಳು ಇರುವುದಿಲ್ಲ. ಆದ್ದರಿಂದ ಇದು ಪ್ರಾಣಿ ಹಿಂಸೆತಡೆ ಕಾಯ್ದೆ 1960 ರ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಈ ಪ್ರಾಣಿಗಳ ಪಾರುಗಾಣಿಕೆ ಕೇಂದ್ರದಲ್ಲಿ ಇನ್ನು ಮುಂದೆ ನಾಯಿ, ಬೆಕ್ಕು, ಮುದ್ದಿನ ಪಕ್ಷಿಗಳುಇತ್ಯಾದಿಗಳನ್ನು ನೀಡಬಾರದು. ಅನಾಥ, ಅಂಗವಿಕಲ ಮತ್ತು […]

ಉಡುಪಿ:ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಅವಿರೋಧವಾಗಿ ಆಯ್ಕೆ

ಉಡುಪಿ:ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ,. ಉಡುಪಿ‌ ಇದರ 2025-2026 ನೇ ಸಾಲಿನಿಂದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಡಿ ಇಂದ್ರಾಳಿ ಇವರು ಹಾಗೂ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಬಲ್ಲಾಳ್ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಇವರನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರ ಪರವಾಗಿ ಆಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು‌ ಹಾಗೂ ‌ಶಾಸಕರಾದ ಯಶ್ ಪಾಲ್‌ ಎ ಸುವರ್ಣ ,‌ ನಿರ್ದೇಶಕರುಗಳಾದ […]