ಉಡುಪಿ:ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಕ್ಯಾನ್ಸರ್ ದಿನ ಆಚರಣೆ : ಪ್ರಭಾರ ಡಿ.ಹೆಚ್.ಓ ಡಾ. ನಾಗರತ್ನ

ಉಡುಪಿ: ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಹಾಗೂ ಅದರ ತಡೆಗಟ್ಟುವಿಕೆ, ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತಿದ್ದು, ಕ್ಯಾನ್ಸರ್‌ನಿಂದ ಉಂಟಾಗುವ ಅನಾರೋಗ್ಯ ಮತ್ತು ಸಾವುಗಳನ್ನುಗಮನಾರ್ಹವಾಗಿ ಕಡಿಮೆ ಮಾಡುವುದು ಈ ದಿನದ ಪ್ರಾಥಮಿಕ ಗುರಿಯಾಗಿದೆ ಎಂದು ಪ್ರಭಾರ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರತ್ನ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, […]

ದುಬೈನ ವಿದ್ವಾರ್ಸ್ ಬಾಯ್ಸ್ ತಂಡಕ್ಕೆ ಚಾಂಪಿಯನ್ ಟ್ರೋಫಿ.

ದುಬೈಯ ಅಜ್ಮಾನ್ ರಾಯಲ್ ಮೈದಾನದಲ್ಲಿ ಜರಗಿದ ಯು.ಎ.ಇ ಯ ಪ್ರತಿಷ್ಠಿತ ಕ್ರಿಕೆಟ್ ಪಂದ್ಯಾಕೂಟದಲ್ಲಿ ದುಬೈನ ವಿದ್ವಾರ್ಸ್ ಕ್ರಿಕೆಟ್ ತಂಡವು ಚಾಂಪಿಯನ್ ತಂಡವಾಗಿ ಎ-7 ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ದುಬೈನ ಕನ್ನಡಿಗರ ಬಳಗದ ಶ್ರೀಸಾಹಿಲ್ ನೆಲೆಯಾಡಿ ಹಾಗೂ ಸ್ನೇಹಿತರು ಆಯೋಜಿಸಿದ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡಿಗರಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗಿತ್ತು.ಪ್ರತಿತಂಡವು ಗರಿಷ್ಠ ಇಬ್ಬರು ಕರ್ನಾಟಕೇತರ ಆಟಗಾರರನ್ನು ಮಾತ್ರ ಹೊಂದಿರಬಹುದು. ದುಬೈನಲ್ಲಿ ನೆಲೆಸಿರುವ ಕನ್ನಡಿಗರ ಬಲಿಷ್ಠ ಹತ್ತುತಂಡಗಳು ಈ ಕ್ರಿಕೆಟ್ ಕೂಟದಲ್ಲಿ ಪಾಲ್ಗೊಂಡಿದ್ದು ಲೀಗ್ ಮಾದರಿಯಲ್ಲಿ ಈ ಪಂದ್ಯಾವಳಿಯು ಜರಗಿತ್ತು. ಬಹುತೇಕ […]

ಮಣಿಪಾಲ: ವೃದ್ಧೆ ನಾಪತ್ತೆ

ಉಡುಪಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಂಚಿಕೋಡಿ ನಿವಾಸಿ ಜಯಲಕ್ಷ್ಮಿ (65) ಎಂಬ ವೃದ್ಧೆಯು 2024 ರ ಆಗಸ್ಟ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಮಾನ್ಯ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕರು ಮೊ.ನಂ: 9480805448, ಪಿ.ಎಸ್.ಐ ಮಣಿಪಾಲ ಮೊ.ನಂ: 9480805475 […]