ಪ್ರಸಾದ್ ಶೆಣೈ ಅವರ “ನೇರಳೆ ಐಸ್ ಕ್ರೀಂ” ಕೃತಿ ವೀರಲೋಕ ಪ್ರಕಾಶನದಿಂದ ಅದ್ದೂರಿ ಬಿಡುಗಡೆ

ಬೆಂಗಳೂರು: ಯುವ ಕತೆಗಾರ, ಕನ್ನಡನಾಡಿನ ಪ್ರತಿಷ್ಠಿತ ಟೊಟೋ ಪ್ರಶಸ್ತಿ ಪುರಸ್ಕೃತ ಬರಹಗಾರ ಕಾರ್ಕಳದ ಪ್ರಸಾದ್ ಶೆಣೈ ಆರ್ ಕೆ ಅವರ ಮೂರನೇ ಕೃತಿ “ನೇರಳೆ ಐಸ್ ಕ್ರೀಂ” ಕಥಾ ಸಂಕಲನದ ಬಿಡುಗಡೆ ಕಾರ್ಯಕ್ರಮ ಸಾಹಿತ್ಯ ಯುಗಾದಿ ಭಾನುವಾರ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಚಲನಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ , ಕಾದಂಬರಿಗಾರ್ತಿ ಸಹನಾ ವಿಜಯ್ ಕುಮಾರ್, ವಿಮರ್ಶಕ ಬಸವರಾಜ್ ಸರಬದ, ಸಾಹಿತಿ ಡಾ.ಬೈರಮಂಗಲ ರಾಮೇಗೌಡ, ವೀರಲೋಕದ ಪ್ರತಿಷ್ಠಾನದ ವೀರಕಪುತ್ರ ಶ್ರೀನಿವಾಸ […]