ಮಂಗಳೂರು: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನ; ಮಗ ಮೃತ್ಯು, ತಾಯಿ ಸ್ಥಿತಿ ಗಂಭೀರ

ಮಂಗಳೂರು: ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ತಾಯಿ ಮತ್ತು ಮಗ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮಗ ಸಾವನ್ನಪ್ಪಿ, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ. ಮೃತಪಟ್ಟವರು ನಾಲ್ಕೂರು ಗ್ರಾಮದ ದೇರಪ್ಪಜ್ಜನಮನೆ ನಿವಾಸಿ ಕುಶಾಲಪ್ಪ ಗೌಡ ಅವರ ಮಗ ನಿತಿನ್ (32). ಅವರ ತಾಯಿ ಸುಲೋಚನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿತಿನ್ ಅವರು ಐಟಿಐ ಪದವೀಧರರಾಗಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಅವರು ಒಂದು ವರ್ಷದ ಹಿಂದೆ ದೀಕ್ಷಾ […]

ಕಾಲೇಜಿನಲ್ಲಿ ಭಾಷಣ ಮಾಡುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಮೃತ್ಯು.

ಮುಂಬೈ: ಮಹಾರಾಷ್ಟ್ರದ ಧಾರಶಿವ್ ಜಿಲ್ಲೆಯ ಕಾಲೇಜೊಂದರಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಸೆಂಡಾಫ್‌ ಪಾರ್ಟಿಯಲ್ಲಿ ವಿದಾಯ ಭಾಷಣ ಮಾಡುತ್ತಿರುವಾಗ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ‌. ವರ್ಷಾ ಖಾರತ್‌ (20) ಮೃತ ವಿದ್ಯಾರ್ಥಿನಿಯಾಗಿದ್ದು, ಆರ್‌ಜಿ ಶಿಂಧೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದಳು. ವಿದ್ಯಾರ್ಥಿನಿ ಕುಸಿದು ಬಿದ್ದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದು, ಏಪ್ರಿಲ್‌ 5ರಂದು ಈ ಘಟನೆ ನಡೆದಿದೆ. 32 ಸೆಕೆಂಡುಗಳ ವಿಡಿಯೋ ಕ್ಲಿಪ್‌ನಲ್ಲಿ ಮನಕಲುಕುವ ದೃಶ್ಯ ಸೆರೆಯಾಗಿದೆ. ಅಂದ ಚೆಂದದ ಸೀರೆಯುಟ್ಟು […]

ಉಡುಪಿಯಲ್ಲಿ ಟೀಚಿಂಗ್ ಸ್ಟಾಫ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯಲ್ಲಿ ಟೀಚಿಂಗ್ ಸ್ಟಾಫ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಪದವಿ ವಿದ್ಯಾರ್ಹತೆ ಹೊಂದಿದ್ದು, 1 ವರ್ಷಗಳ ಅನುಭವವಿರಬೇಕು. ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಗೆ ಕಳುಹಿಸಿ[email protected] ಸಂಪರ್ಕಿಸಿ:9880093063

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದೊಂದಿಗೆ ಬೆಂಗಳೂರು ವೈಜ್ಞಾನಿಕ ಮತ್ತು ಸಿ ಎಸ್ ಐ ಆರ್ ಪ್ಯಾರಾಡೈಂ ಸಂಸ್ಥೆ ಜತೆ ಒಡಂಬಡಿಕೆ

ಬಂಟಕಲ್ :ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಸಿ ಎಸ್ ಐ ಆರ್ ಪ್ಯಾರಾಡೈಂ ಸಂಸ್ಥೆ, ಬೆಂಗಳೂರು ಇವರೊಂದಿಗೆ ದಿನಾಂಕ 03 ಎಪ್ರಿಲ್ 2025ರಂದು ಒಡಂಬಡಿಕೆಗೆ ಸಹಿ ಹಾಕಲಾಯಿತು. ದಕ್ಷಿಣ ಭಾರತ ಖಾಸಗಿ ತಾಂತ್ರಿಕ ಕಾಲೇಜಿನ ಜತೆ ಇದು ಮೊದಲ ಒಡಂಬಡಿಕೆ ಎಂಬುದು ಉಲ್ಲೇಖನೀಯ. ಈ ಎರಡೂ ಸಂಸ್ಥೆಗಳು ರಾಷ್ಟ್ರೀಯ ಕಾರ್ಯಗಾರಗಳನ್ನುಆಯೋಜಿಸುವುದು, ವಿಚಾರ ಸಂಕಿರಣ, ಸಂಶೋಧನ ಜ್ಞಾನದ ವಿನಿಮಯ, ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯದ ಅಭಿವೃದ್ದಿಗಾಗಿ ಸಿ ಎಸ್ ಐ ಆರ್ ಪ್ಯಾರಾಡೈಂ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ […]

ನುಕ್ಕುಾರು:ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ.

ಕೊಕ್ಕರ್ಣೆ:”ಎಸ್ಎಸ್ ಎಲ್ ಸಿ ಅನಂತರದ ಪಿ ಯು ಶಿಕ್ಷಣ ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣ ಮತ್ತು ವೃತ್ತಿ ಬದುಕನ್ನು ನಿಧ೯ರಿಸುವ ಶೈಕ್ಷಣಿಕ ಹಂತವಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಆಸಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ವಿಷಯಗಳ ಆಧರಿತ ಕೇೂರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಶಿಕ್ಷಕರು ಮತ್ತು ಹೆತ್ತವರು ಮಾರ್ಗದರ್ಶನ ಮಾಡಬೇಕಾದ ಅಗತ್ಯವಿದೆ. ಬಡತನ ಎಂದಿಗೂ ವಿದ್ಯಾರ್ಜನೆಯ ಸಾಧನೆಗೆ ತೊಡಕಾಗುವ ಪರಿಸ್ಥಿತಿ ಇಂದಿಲ್ಲ.ಆದಷ್ಟು ಮಟ್ಟಿಗೆ ಚಿಕ್ಕ ವಯಸ್ಸಿನಲ್ಲಿಯೇ ಉನ್ನತ ಶೈಕ್ಷಣಿಕ ಅರ್ಹತೆಯನ್ನು ಗಳಿಸಿಕೊಂಡಿರುವುದು ಮುಂದಿನ ವೃತ್ತಿ ಬದುಕಿನ ಉನ್ನತಿಗೆ ಅದು ಅಗತ್ಯವಾದ […]