ಮೇ ಅಂತ್ಯದೊಳಗೆ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಮುಗಿಯದಿದ್ದರೆ ಸಂಸದರ ಕಚೇರಿಗೆ ಮುತ್ತಿಗೆ

ಉಡುಪಿ: ಮೇ ತಿಂಗಳ ಅಂತ್ಯದೊಳಗೆ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಮುಗಿಯದಿದ್ದರೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಅಮೃತ್ ಶೆಣೈ ಎಚ್ಚರಿಕೆ ನೀಡಿದರು. ಉಡುಪಿ ಕಿದಿಯೂರು ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.1ರಂದು ಶಾಲಾ ಮಕ್ಕಳು ಯಾವುದೇ ಭಯ ಇಲ್ಲದೆ ಆರಾಮವಾಗಿ ಶಾಲೆಗೆ ಹೋಗುವ ವಾತಾವರಣ ಸೃಷ್ಟಿ ಮಾಡಬೇಕು. ಇಲ್ಲದಿದ್ದರೆ ನಾವು ಮತ್ತೆ ಬೀದಿಗಿಳಿಯುತ್ತೇವೆ. ಸಂಸದರ […]

ಇನ್ ಸ್ಟಾಗ್ರಾಂ ಬಳಸ್ತಾ ಇರೋ ಮಕ್ಕಳಿಗೆ ಶಾಕ್ :ಇನ್ಮುಂದೆ ಬೇಕೇ ಬೇಕು ಪೋಷಕರ ಅನುಮತಿ

ಇನ್ ಸ್ಟಾಗ್ರಾಂ ಅಂದ್ರೆ ಮಕ್ಕಳಿಂದ ಹಿಡಿದು ಯುವಜನರವರೆಗೂ ಎಲ್ಲರ ಹಾಟ್ ಫೆವರೇಟ್. ಇನ್ಟಾಗ್ರಾಂ ಗೆ ಎಡಿಕ್ಟ್ ಆದವರು ಏನೂ ಕಡಿಮೆ ಇಲ್ಲ.ಮಕ್ಕಳೂ ಕೂಡ ಇನ್ಟಾಗ್ರಾಂ ಗೆ ದಾಸರಾಗಿರುವುದನ್ನು ತಪ್ಪಿಸುವುದೇ ಭಾರೀ ಕಷ್ಟಕರ. ಇದೀಗ ಇನ್ಸ್ಟಾಗ್ರಾಮ್ ತನ್ನ ಪ್ಲಾಟ್ಫಾರ್ಮ್ನಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದರ ಪ್ರಕಾರ, 16 ವರ್ಷದೊಳಗಿನ ಮಕ್ಕಳು ಇನ್ನು ಮುಂದೆ ಪೋಷಕರ ಅನುಮತಿ ಇಲ್ಲದೆ ಲೈವ್ಸ್ಟ್ರೀಮ್ ಮಾಡಲು ಅವಕಾಶವಿರುವುದಿಲ್ಲ. ಅಂದ ಹಾಗೆ ಈ ನಿಯಮವನ್ನು ಮಕ್ಕಳ ಸುರಕ್ಷತೆ ಮತ್ತು ಆನ್ಲೈನ್ ಗೌಪ್ಯತೆಯನ್ನು ರಕ್ಷಿಸುವ ಉದ್ದೇಶದಿಂದ […]

ಮೂಡುಬಿದಿರೆ:ಪಿಯುಸಿ ಪರೀಕ್ಷೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ರ‍್ಯಾಂಕ್‌ಗಳ ಸುರಿಮಳೆ

ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಒಟ್ಟು 45 ವಿದ್ಯಾರ್ಥಿಗಳು ರಾಜ್ಯದ ಪ್ರಥಮ 10 ರ‍್ಯಾಂಕ್‌ಗಳಲ್ಲಿ ಸ್ಥಾನವನ್ನು ಪಡೆಯುವ ಮೂಲಕ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ. ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಬಿಂದು ನವಲೆ, ರಾಜ ಯದು ವಂಶಿ ಯಾದವ್ ಹಾಗೂ ವಿಜೇತ್ ಜಿ ಗೌಡ 598 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ […]

ಬಂಟಕಲ್:ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೌರಶಕ್ತಿ ಚಾಲಿತ ಬೀಜ ಬಿತ್ತನೆ ಯಂತ್ರದ ಅಭಿವೃದ್ಧಿ ಕಾರ್ಯ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಐಶ್ವರ್ಯ, ಕಿರಣ್, ಗುರುಕಿರಣ್, ಲಿಖಿತ್ ಎರ್ಮಾಳ್ ಇವರು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ರಾಜಾ ಯತೀಶ್ ಯಾದವ್ ಇವರ ನೇತೃತ್ವದಲ್ಲಿ ಸೌರಶಕ್ತಿ ಚಾಲಿತ ಬೀಜ ಬಿತ್ತನೆ ಯಂತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ. ರೈತರು ಕೃಷಿ ಭೂಮಿಯಲ್ಲಿ ಬೀಜಗಳನ್ನು ಬಿತ್ತಲುಸಾಂಪ್ರದಾಯಿಕ ವಿಧಾನಗಳನ್ನು ಬಳಸುತ್ತಿದ್ದಾರೆ. ಈ ಹಳೆಯ ವ್ಯವಸ್ಥೆಯಲ್ಲಿ ಕೈಯಿಂದ ಬೀಜ ಬಿತ್ತಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಹಾಗೂ ಕಾರ್ಮಿಕರಕೊರತೆಯಿರುವುದರಿಂದ ಈ ಪದ್ಧತಿಯು ಕ್ರಮೇಣಅಪ್ರಸ್ತುತ […]

ಮಣಿಪಾಲ: ಧರೆಗೆ ಉರುಳಿತು 50 ವರ್ಷಗಳ ಹಳೆಯ ನೀರಿನ ಟ್ಯಾಂಕ್

ಉಡುಪಿ: ಮಣಿಪಾಲ ಕೆನರಾ ಬ್ಯಾಂಕ್ ರಸ್ತೆಯಲ್ಲಿ ಸಿಂಡಿಕೇಟ್ ಹೌಸ್ ಬಳಿ ಇದ್ದ ಬೃಹತ್ ನೀರಿನ ಟ್ಯಾಂಕ್ ನ್ನು ನಗರಸಭೆ ಸಿಬ್ಬಂದಿ ಧರೆಗೆ ಉರುಳಿಸಿದರು. ನಗರಸಭೆಯ ಮಣಿಪಾಲ ಉಪ ಕಛೇರಿಯ ಎದುರು ಸುಮಾರು 50 ವರ್ಷಗಳಿಂದ ಮಣಿಪಾಲ ಪರಿಸರಕ್ಕೆ ನೀರುಣಿಸುತ್ತಿದ್ದ ಟ್ಯಾಂಕ್ ಇದಾಗಿತ್ತು. ಇದು ಶಿಥಿಲಗೊಂಡಿದ್ದರಿಂದ ಹೊಸ ಟ್ಯಾಂಕ್ ನಿರ್ಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮಗಳೊಂದಿಗೆ ಓವರ್ ಹೆಡ್ ಟ್ಯಾಂಕ್ ಅನ್ನು ಧರಾಶಾಹಿ ಮಾಡಲಾಯಿತು.