ಉಡುಪಿ ಕೃಷ್ಣಮಠದ ರಥಬೀದಿಯಲ್ಲಿ ಇನ್ನು ಫೋಟೋಶೂಟ್ ಮಾಡುವಂತಿಲ್ಲ

ಉಡುಪಿ: ಕೃಷ್ಣಮಠದ ರಥಬೀದಿಯಲ್ಲಿ ಇನ್ನು ಮುಂದೆ ಫೋಟೋಶೂಟ್ ಮಾಡುವಂತಿಲ್ಲ. ಪ್ರಿ ವೆಡ್ಡಿಂಗ್ ಪೋಸ್ಟ್ ವೆಡ್ಡಿಂಗ್ ಶೂಟಿಂಗ್ ಮಾಡಲು ಅವಕಾಶವಿಲ್ಲ ಎಂದು ಕೃಷ್ಣಮಠ ಸ್ಪಷ್ಟವಾಗಿ ನಿಯಮ ತಂದಿದೆ. ರಾಜ್ಯದ ಮೂಲೆಮೂಲೆಯ ಜನ ಇಲ್ಲಿಗೆ ಬಂದು ಫೋಟೋಶೂಟ್ ನೆಪದಲ್ಲಿ ಅಸಭ್ಯ ವರ್ತನೆ ಮಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಪರ್ಯಾಯ ಪುತ್ತಿಗೆ ಮಠ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.ಮುಖ್ಯವಾಗಿ ಕೇರಳ, ಬೆಂಗಳೂರು ಕಡೆಯಿಂದ ಬರುವ ಫೋಟೋಗ್ರಾಫರ್ಸ್ ಇಲ್ಲೇ ಫೋಟೋಶೂಟ್ ನಡೆಸುತ್ತಾರೆ. ಮಠದ ರಥಬೀದಿಯಲ್ಲಿ ಪಾರಂಪರಿಕ ಕಟ್ಟಡಗಳು ಇವೆ. ಹೀಗಾಗಿ ಇತ್ತೀಚೆಗೆ ಇಲ್ಲಿಗೆ ಫೋಟೋಶೂಟ್ಗೆ […]
ಉಡುಪಿ ಬಡಗಬೆಟ್ಟು ಸೊಸೈಟಿಗೆ 19.37 ಕೋಟಿ ರೂ. ಲಾಭ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 2,935 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿ 19.37 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 107 ವರ್ಷಗಳಿಂದ ಸಾರ್ಥಕ ಸೇವೆಯನ್ನು ನೀಡುತ್ತಿರುವ ಸಂಘವು 2024-25 ಆರ್ಥಿಕ ವರ್ಷಾಂತ್ಯಕ್ಕೆ 21,519 ಸದಸ್ಯರಿಂದ 4.83 ಕೋ.ರೂ ಪಾಲು ಬಂಡವಾಳ ಹೊಂದಿದೆ. 1,050 ಕೋಟಿ ರೂ. ವ್ಯವಹಾರ ವರದಿ ವರ್ಷಾಂತ್ಯಕ್ಕೆ ಸಂಘವು […]
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕಂಬಳ ಮನೆ ದಿನೇಶ್ ಶೆಟ್ಟಿ ಆಯ್ಕೆ

ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಕಂಬಳ ಮನೆ ದಿನೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಪರ್ಯಾಯ ಅರ್ಚಕರು ಸೇರಿದಂತೆ, ಪಾಂಡುರಂಗ ನಾಯ್ಕ್, ಶೇಖರ್ ಸುವರ್ಣ ಗರಡಿಮನೆ, ಲಕ್ಷ್ಮೀನಾರಾಯಣ ರಾವ್, ದಿನೇಶ್ ಶೆಟ್ಟಿ ಕಂಬಳ ಮನೆ, ಉಮೇಶ್ ಎಸ್. ಶೆಟ್ಟಿಗಾರ್, ಶಂಕರ್ ಆಚಾರ್ಯ, ವಿಜಯಲಕ್ಷ್ಮಿ ಎಂ., ಚಂದ್ರಾವತಿ ಅವರು ನೇಮಕಗೊಂಡಿದ್ದಾರೆ. ದೇವಸ್ಥಾನದ ಆಡಳಿತಾಧಿಕಾರಿಯಾದ ರೇಷ್ಮಾ ಅವರು ಬುಧವಾರ ನೂತನ ಅಧ್ಯಕ್ಷರಾದ ದಿನೇಶ್ ಶೆಟ್ಟಿಯವರಿಗೆ ದೇವಸ್ಥಾನದ ಕೀಲಿಕೈ ನೀಡುವ ಮುಖಾಂತರ […]
ಮೂರು ಮಕ್ಕಳ ತಾಯಿ ಪಿಯುಸಿ ಹುಡುಗನನ್ನು ವರಿಸಿದಳು.!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯಲ್ಲಿ ಮೂರು ಮಕ್ಕಳನ್ನು ಹೊಂದಿರುವ 30 ವರ್ಷದ ಮುಸ್ಲಿಂ ಮಹಿಳೆಯೊಬ್ಬರು ಧಾರ್ಮಿಕ ಸಮಾರಂಭದಲ್ಲಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು, 12ನೇ ತರಗತಿಯ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ. ಮಹಿಳೆಯನ್ನು ಶಬ್ನಮ್ ಎಂದು ಗುರುತಿಸಲಾಗಿದ್ದು, ಆಕೆ ಮತಾಂತರದ ಬಳಿಕ ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿಕೊಂಡಿದ್ದಾಳೆ. ಆಕೆಯ ಪೋಷಕರು ಮೃತಪಟ್ಟಿದ್ದು. ಈ ಹಿಂದೆ ಎರಡು ಬಾರಿ ವಿವಾಹವಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಯಲ್ಲಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಕಾನೂನುಬಾಹಿರ […]
ಸಿದ್ದರಾಮಯ್ಯ ಕೇವಲ ಮುಸಲ್ಮಾನರಿಗೆ ಮಾತ್ರ ಮುಖ್ಯಮಂತ್ರಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಉಡುಪಿ: ಸಿದ್ದರಾಮಯ್ಯ ನಾಡಿನ ಮುಖ್ಯಮಂತ್ರಿ ಅಲ್ಲ, ಕೇವಲ ಮುಸಲ್ಮಾನರಿಗೆ ಮಾತ್ರ ಮುಖ್ಯಮಂತ್ರಿ. ಕೇವಲ ಸಾಯ್ಬರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಸಿಎಂ ಭಾವಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಭ್ರಷ್ಟಾಚಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿ ಕಡಿಯಾಳಿಯ ಬಿಜೆಪಿ ಕಚೇರಿಯ ಮುಂಭಾಗದ ಮೈದಾನದಲ್ಲಿ ಗುರುವಾರ ಆಯೋಜಿಸಿದ “ಜನಾಕ್ರೋಶ ಯಾತ್ರೆ”ಯ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಸಲ್ಮಾನ ಹೆಣ್ಣು ಮಕ್ಕಳ ಆತ್ಮ ಸಂರಕ್ಷಣೆಗೆ […]