ದ್ವಿತೀಯ ಪಿಯುಸಿ ಫಲಿತಾಂಶ: ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನ ದ್ರಶಿತಾ ಎಚ್ ಪುತ್ರನ್ ಅವರು ರಾಜ್ಯಕ್ಕೆ 9ನೇ ರ್ಯಾಂಕ್

ಕಟಪಾಡಿ: ಕಟಪಾಡಿಯ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ದ್ರಶಿತಾ ಎಚ್ ಪುತ್ರನ್ ಅವರು 600ಕ್ಕೆ 591 ಅಂಕಗಳೊಂದಿಗೆ ರಾಜ್ಯಕ್ಕೆ ವಾಣಿಜ್ಯ ವಿಭಾಗದಲ್ಲಿ 9ನೇ ರ‍್ಯಾಂಕ್ ಪಡೆದುಕೊಂಡಿರುತ್ತಾರೆ. ಇವರು ಉಡುಪಿ ಉದ್ಯಾವರದ ಹರಿಶ್ಚಂದ್ರ ಪುತ್ರನ್ ಮತ್ತು ಗೀತಾ ಎಚ್ ಪುತ್ರನ್ ದಂಪತಿಗಳ ಪುತ್ರಿಯಾಗಿರುತ್ತಾರೆ.

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಕಾರ್ಕಳ/ಉಡುಪಿ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ 2024-25ನೇಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯಮಟ್ಟದಲ್ಲಿ 10ರೊಳಗಿನ ರ‍್ಯಾಂಕ್ ಗಳಿಸಿದ ಸಂಸ್ಥೆಯ ಒಟ್ಟು 29 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ 4ನೇ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ, 595 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ […]

ಉಡುಪಿ:ತಾಂಡವ ಟ್ರೋಫಿ 2025 : ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ ಆಯೋಜನೆ

ಉಡುಪಿ: ಉಡುಪಿಯ ಹೋಟೆಲ್ ಶಾರದಾ ಇಂಟರ್ನ್ಯಾಷನಲ್ ನ ಮಾಲೀಕರಾಗಿದ್ದಂತಹ ಕ್ರೀಡಾ ಪ್ರೋತ್ಸಾಹಕರು ಆಗಿದ್ದ ದಿವಂಗತ ಸುಧಾಕರ ಶೆಟ್ಟಿ ಯವರ ಸ್ಮರಣಾರ್ಥವಾಗಿ, “ತಾಂಡವ’ ಎಂಬ ಬಳಗವು 2025 ರ ಮೇ ತಿಂಗಳಿನಲ್ಲಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸುತ್ತಿದೆ. ಈ ಪಂದ್ಯಾವಳಿಯು ಮೇ 9, 10 ಮತ್ತು 11 ರಂದು, ಉಡುಪಿಯ ಮಹಾತ್ಮಗಾಂಧಿ ಬಯಲು ರಂಗಮಂದಿರದ ಬೀಡಿನಗುಡ್ಡೆಯಲ್ಲಿ ನಡೆಯಲಿದೆ. ಪಂದ್ಯಾವಳಿಯ ವಿಜೇತ ತಂಡಕ್ಕೆ 2 ಲಕ್ಷ ರೂ. ಮೊತ್ತದ ಬಹುಮಾನ ಹಾಗೂ ರನ್ನರ್ ಅಪ್ ತಂಡಕ್ಕೆ 1 ಲಕ್ಷ ರೂ. […]

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಭ್ರಷ್ಟಾಚಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಜನಾಕ್ರೋಶ ಯಾತ್ರೆ’ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ನಡೆಯುತ್ತಿರುವ ಜನಾಕ್ರೋಶ ಯಾತ್ರೆ ಇಂದು ಉಡುಪಿಗೆ ಆಗಮಿಸಿತು. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿ.ವೈ ವಿಜಯೇಂದ್ರ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಪ್ರತಿಭಟನಾ ಜಾಥಾ ಕಲ್ಸಂಕ, ಕಡಿಯಾಳಿ ಮಾರ್ಗವಾಗಿ ಬಿಜೆಪಿ ಕಚೇರಿಯ ಹಿಂಭಾಗದ ಮೈದಾನದವರೆಗೆ ಸಾಗಿ ಬಂತು. ಜಾಥಾದಲ್ಲಿ ವಿವಿಧ ಮೋರ್ಚಾ, […]

ಕೇಂದ್ರ ಬಿಜೆಪಿ ಸರಕಾರದ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕೇಂದ್ರ ಬಿಜೆಪಿ ಸರಕಾರದ ಪೆಟ್ರೋಲ್, ಡಿಸೇಲ್ ಮತ್ತು ಎಸ್‌ಪಿಜಿ ಗ್ಯಾಸ್ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಉಡುಪಿ ಬ್ಲಾಕ್ ಮತ್ತು ಬ್ರಹ್ಮಾವರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಅಜ್ಜರಕಾಡು ಹುತಾತ್ಮ ಸ್ಮಾರಕ ಭವನದ ಎದುರು ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರತಿನಿಭಟನನಿರತ ಮಹಿಳೆಯರು ಸ್ಥಳದಲ್ಲಿ ಸೌದೆಯಿಂದ ಒಲೆ ಉರಿಸಿ ಚಹಾ ತಯಾರಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಗ್ಯಾಸ್ ಸಿಲಿಂಡರ್‌ನ್ನು ಪ್ರದರ್ಶಿಸಲಾಯಿತು. ಪ್ರತಿಭಟನಕಾರರು ಕೇಂದ್ರ ಸರಕಾರದ […]