ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಬಹಳ ಆಘಾತಕಾರಿ: ಪುತ್ತಿಗೆ ಶ್ರೀ ಕಳವಳ

ಉಡುಪಿ: ಶಿವಮೊಗ್ಗ ಹಾಗೂ ಬೀದರ್ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಕೇಳಿ ಬಹಳ ಆಘಾತವಾಗಿದೆ. ಇದೊಂದು ವ್ಯವಸ್ಥಿತವಾದ ಕುತಂತ್ರವಾಗಿದೆ. ಇದು ಹಿಂದು ಧರ್ಮ ಹಾಗೂ ಸನಾತನ ಅನುಯಾಯಿಗಳನ್ನು ಕೆಣಕುವ ದುಷ್ಟ ಪ್ರವೃತ್ತಿಯಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಷ್ಟೇ ಅಲ್ಲ, ಇಂತಹ ಅನೇಕ ಘಟನೆಗಳು ಸರಣಿಯಾಗಿ ನಡೆಯುತ್ತಲೇ ಇದೆ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಸಂಬಂಧಪಟ್ಟಂತಹ ದುಷ್ಟರಿಗೆ ತಕ್ಕ ಶಿಕ್ಷೆ ನೀಡಬೇಕು. ಇಲ್ಲದಿದ್ದಲ್ಲಿ ಇಂತಹ […]
ಅಪ್ರಾಪ್ತ ವಯಸ್ಸಿನ ಬಾಲಕ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ. ದಂಡ – ನ್ಯಾಯಾಲಯ ತೀರ್ಪು

ಚಿಕ್ಕಮಗಳೂರು : ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ದ್ವಿಚಕ್ರ ವಾಹನ ಚಾಲನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ನೀಡಿದ್ದ ಆತನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿ ಮೂಡಿಗೆರೆ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ಪಟ್ಟಣದ ಬಾಪು ನಗರದ ಪೋಷಕರು ತಮ್ಮ ಅಪ್ರಾಪ್ತ ವಯಸ್ಸಿನ ಮಗನ ಕೈಗೆ ಸ್ಕೂಟಿ ನೀಡಿದ್ದರು. ಬಾಲಕ ಬೈಕ್ ಓಡಿಸುತ್ತಿದ್ದ ವೇಳೆ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಈ […]
ಮಣಿಪಾಲ: ನನ್ನ ಕನಸು -2025 ವತಿಯಿಂದ ಬೇಸಿಗೆ ಶಿಬಿರ ಕಾರ್ಯಕ್ರಮ

ಮಣಿಪಾಲ: ನನ್ನ ಕನಸು -2025 ವತಿಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ ಕಾರ್ಯಕ್ರಮವು ಏ.16 ರಿಂದ 26 ವರೆಗೆ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 4.00 ಗಂಟೆವರೆಗೆ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಶಿವಪಾಡಿ ದೇವಸ್ಥಾನ, ಮಣಿಪಾಲ.+91 6361965913
ಉಡುಪಿ:ದೊಡ್ಡಣ್ಣ ಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶತ ನಾಳಿಕೇರ ಗಣಯಾಗ ಸಂಪನ್ನ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗಾಯತ್ರಿ ಧ್ಯಾನಪೀಠದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಅಷ್ಟೋತ್ತರ ಶತ ನಾಳಿಕೆರ ಗಣಯಾಗ ಸಂಪನ್ನಗೊಂಡಿತು… ಕ್ಷೇತ್ರದ ಧ್ಯಾನಪೀಠದಲ್ಲಿ ಮುಂದೆ ಪ್ರತಿಷ್ಟಾಪನೆಗೊಳ್ಳಲಿರುವ ಹಂಸರೂಡೆ ಪಂಚಮುಖಿ ಗಾಯತ್ರಿ ದೇವಿಯ ಪ್ರತಿಷ್ಠಾಪನ ಪೂರ್ವಾಬಾ ವಿ ಪ್ರಾಯಶ್ಚಿತ ಧಾರ್ಮಿಕ ವಿಧಿಯಾಗಿ ಈ ಮಹಾನ್ ಯಾಗ ಸಂಪನ್ನಗೊಂಡಿತು.. ಶ್ರೀಯುತ ಗಣೇಶ ಸರಳಾಯ ಅವರ ನೇತೃತ್ವದಲ್ಲಿ ನೆರವೇರಿದ ಈ ಯಾಗದ ಅಂಗವಾಗಿ […]
ಕೋಟದಲ್ಲಿ ಎರಡು ದಿನಗಳ ಯಕ್ಷ ತ್ರಿವಳಿ ಮಕ್ಕಳ ಯಕ್ಷೋತ್ಸವ ಉದ್ಘಾಟನೆ

ಉಡುಪಿ: ಯಕ್ಷಗಾನ ಕಲೆಯ ಬೆಳವಣಿಗೆಗೆ ವಿವಿಧ ಕಾರ್ಯಾಗಾರಗಳ ಮೂಲಕ ಪ್ರೋತ್ಸಾಹ ನೀಡುತ್ತಿರುವ ಯಕ್ಷಗಾನ ಅಕಾಡೆಮಿ ಅಭಿನಂದನಾರ್ಹ. ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆ ಸರಕಾರದಿಂದ ಸಿಗುವ ಸರಕಾರಿ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು. ಅವರು ಗುರುವಾರ ಕೋಟದ ಶ್ರೀ ಹಂದೆ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ನಾಗಪ್ಪಯ್ಯ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಕಾರದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ ತನ್ನ ಸುವರ್ಣ ಪರ್ವದ 9ನೇ ಕಾರ್ಯಕ್ರಮವಾಗಿ ಹಮ್ಮಿಕೊಂಡ ಆಹ್ವಾನಿತ […]