ಸಿ ಎಸ್ ಇ ಇ ಟಿ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಹೆಮ್ಮಾಡಿ: ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್ ಇನ್ ಇಂಡಿಯಾದವರು ನಡೆಸಿದ ಸಿ.ಎಸ್.ಇ.ಇ.ಟಿ(ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಭರವಸೆಯ ವಿದ್ಯಾರ್ಥಿಗಳಾದ ಸನ್ವಿತಾ, ವಂಶಿ, ಕೆ.ವಿ.ಶರಣ್ಯ,ಪ್ರೇಕ್ಷಾ ಪೂಜಾರಿ, ನಾಗೇಂದ್ರ ಇವರು ಉತ್ತಮ ಅಂಕ ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ದುಬೈನಲ್ಲಿ ಮಿಸ್ಟರ್ ರಾಹುಲ್ ದ್ರಾವಿಡ್ ಕ್ರಿಕೆಟ್ ಪಂದ್ಯಾಕೂಟ.

ದುಬೈನಲ್ಲಿ ಮಿಸ್ಟರ್ ಕ್ರಿಕೆಟ್ ರಾಹುಲ ದ್ರಾವಿಡ್ ಕಪ್ ಕ್ರಿಕೆಟ್ ಪಂದ್ಯಾಟವು ಜೂನ್ ಒಂದರಿಂದ ಆರಂಭವಾಗಲಿದೆ. ಗ್ರೇಟ್ ವಾಲ್ ಆಫ್ ಕ್ರಿಕೆಟ್ ಎಂದು ಪ್ರಸಿದ್ಧರಾಗಿರುವ ರಾಹುಲ್ ದ್ರಾವಿಡ್ ಹೆಸರಿನಲ್ಲಿ ಅವರ ಮಹಾನ್ ಅಭಿಮಾನಿಯಾದ ದುಬೈನ ಟೆಕ್ನೋ ಟೈಟಾನ್ಸ್ ಕ್ರಿಕೆಟ್ ತಂಡದ ನಾಯಕ ಶ್ರೀವಿಠಲ ರೀಶಾನ್ ನಾಯಕ್ ಈ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ. ಕುಂದಾಪುರ ಸಮೀಪದ ಸೂರಾಲು ಮೂಲದ ಸದ್ಯ ದುಬೈನಲ್ಲಿ ನೆಲೆಸಿರುವ ವಿಠಲರಿಶಾನ್ ನಾಯಕರ ನ್ನೇತೃತ್ವದಲ್ಲಿ ಜರುಗಲಿರುವ ಈ ಪಂದ್ಯಾಟವು ಜೂನ್ ಒಂದರಿಂದ ಜುಲೈ 20ರ ವರೆಗೆ ಪ್ರತಿ ಭಾನುವಾರ […]