ಮೇ 30ರಂದು ಉಡುಪಿಯಲ್ಲಿ ರಾಜ್ಯಮಟ್ಟದ “ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ”

ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇದರ ಆಯೋಜನೆಯಲ್ಲಿ ರಾಜ್ಯಮಟ್ಟದ “ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ” ಇದೇ ಮೇ 30ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀರಾದ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯ ಮುಖ್ಯ ಆಯುಕ್ತ […]
ಕೆಸಿಇಟಿ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿ ಅಕ್ಷಯ್ ಎಂ.ಹೆಗ್ಡೆ ರಾಜ್ಯಕ್ಕೆ ಪ್ರಥಮ ರ್ಯಾಂಕ್: ಕರ್ನಾಟಕ ಸಿ.ಇ.ಟಿ.-2025ರಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಅದ್ಭುತ ಸಾಧನೆ

ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-2025ರಲ್ಲಿ ಮತ್ತೊಮ್ಮೆ ಶ್ರೇಷ್ಠ ಸಾಧನೆಯನ್ನು ಮೆರೆದಿದ್ದಾರೆ. ಅಕ್ಷಯ್ ಎಂ. ಹೆಗ್ಡೆ ಕೆಸಿಇಟಿ-ಕೃಷಿ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಈ ಅಸಾಧಾರಣ ಸಾಧನೆಯ ಜೊತೆಗೆ ಆಳ್ವಾಸ್ನ ಇತರ ವಿದ್ಯಾರ್ಥಿಗಳು ಸಹ ಉನ್ನತ ರ್ಯಾಂಕ್ಗಳನ್ನು ಪಡೆದಿದ್ದು, ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಸಿಇಟಿ ಫಲಿತಾಂಶವನ್ನು ಮುಂದುವರಿಸಿದ್ದಾರೆ. ರಾಜ್ಯದ ಮೊದಲ 10 ರ್ಯಾಂಕ್ಗಳಲ್ಲಿ 02 ರ್ಯಾಂಕ್, ಮೊದಲ 50 ರ್ಯಾಂಕ್ಗಳಲ್ಲಿ 12 ರ್ಯಾಂಕ್, ಮೊದಲ […]
ಶ್ರೀನಿಧಿ ಅಪಾರ್ಟ್ಮೆಂಟ್ ನಲ್ಲಿ ಬಳಕೆಯಾಗದ ಅಪಾರ್ಟ್ಮೆಂಟ್ ಖಾಲಿ ಇದೆ.

ಉಡುಪಿ:ಶ್ರೀನಿಧಿ ಅಪಾರ್ಟ್ಮೆಂಟ್ ನಲ್ಲಿ ಬಳಕೆಯಾಗದ ಅಪಾರ್ಟ್ಮೆಂಟ್ ಖಾಲಿ ಇದೆ. Area: 1290 ಚದರ ಅಡಿ (2BHK)Area: 1550 ಚದರ ಅಡಿ (3BHK)View: ಮಣಿಪಾಲ/ಮಂಚಿಯ ಅತ್ಯುತ್ತಮ ನೋಟFacing: 2BHK (ಪಶ್ಚಿಮಕ್ಕೆ ಎದುರಾಗಿರುವ)Facing: 3BHK (ಪೂರ್ವಕ್ಕೆ ಎದುರಾಗಿರುವ)ಮಂದಿರ: ಎರಡೂ ಫ್ಲ್ಯಾಟ್ಗಳಲ್ಲಿ ಪ್ರತ್ಯೇಕವಾಗಿದ್ದು, ಕನಿಷ್ಠ ಪೀಠೋಪಕರಣಗಳಿದ್ದು, ಲೈಟ್/ಫ್ಯಾನ್ ಎಲ್ಲವೂ ಫಿಕ್ಸ್ ಆಗಿರುತ್ತದೆ. ಅತ್ಯುತ್ತಮ ನೋಟಗಳೊಂದಿಗೆ ಶಾಂತಿಯುತ ಮತ್ತು ಶಾಂತ ವಾತಾವರಣ, ಹಚ್ಚ ಹಸಿರಿನ ಸುತ್ತಮುತ್ತಲಿನ ಪ್ರದೇಶಗಳು, ಶ್ರೀ ಕೃಷ್ಣ ದೇವಸ್ಥಾನ, ಮಾರುಕಟ್ಟೆ, ಬಸ್ ನಿಲ್ದಾಣ, ಮಣಿಪಾಲ, ಶಾಲೆ ಮತ್ತು ಕಾಲೇಜುಗಳಿಗೆ ಹತ್ತಿರವಾಗಿದೆ. […]
ತೊಟ್ಟಂ: ಬಡ ಕುಟುಂಬಕ್ಕೆ ‘ಆರ್ಕ್ ಆಫ್ ಹೋಪ್’ ಮನೆ ಹಸ್ತಾಂತರ

ಉಡುಪಿ: ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ನಿರ್ಮಿಸಲಾದ ‘ಆರ್ಕ್ ಆಫ್ ಹೋಪ್’ ಮನೆಯನ್ನು ಭಾನುವಾರ ಹಸ್ತಾಂತರಿಸಲಾಯಿತು. ತೊಟ್ಟಂ ಚರ್ಚಿನ ವಿನೋದ್ ಮತ್ತು ಅಂಜೆಲಿನ್ ಪಿಂಟೊ ಕುಟುಂಬ ಸ್ವಂತ ಸೂರನ್ನು ಕಾಣಬೇಕು ಎಂಬ ಹಂಬಲವಿದ್ದರೂ ಕೂಡ ಆರ್ಥಿಕ ಸಮಸ್ಯೆಯಿಂದ ಅದು ಸಾಧ್ಯವಾಗಿರಲಿಲ್ಲ. ಈ ವೇಳೆ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ […]
ಮಂಗಳೂರು ತ್ರಿಶಾ ಕಾಲೇಜು: ಉಚಿತ ರಕ್ತ ಪರೀಕ್ಷಾ ಶಿಬಿರ

ಮಂಗಳೂರು: ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿಯ ಆರೋಗ್ಯ ಸುಧಾರಣೆ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜೆಂಟ್, ಮಂಗಳೂರಿನಲ್ಲಿ ಮೇ 21, 2025 ರಂದು ಉಚಿತ ರಕ್ತಪರೀಕ್ಷಾ ಶಿಬಿರವನ್ನು ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಶಿಬಿರದ ಉದ್ದೇಶ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಮೊಟ್ಟಮೊದಲ ಹಂತದಲ್ಲೇ ರಕ್ತ ಸಂಬಂಧಿತ ಸಮಸ್ಯೆಗಳನ್ನು ಪತ್ತೆ ಹಚ್ಚುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಂಜುನಾಥ ಕಾಮತ್ ಅವರು ತಿಳಿಸಿದರು. ಶಿಬಿರದಲ್ಲಿ ಹಿಮೋಗ್ಲೋಬಿನ್, ಶುಗರ್, […]