ಉಡುಪಿ:ಓಂ ಗಣೇಶ್ ಎಂಟರ್ಪ್ರೈಸಸ್ ನಲ್ಲಿ ಬ್ಯಾಂಕ್ ಸಾಲ ಸ್ವಾಧೀನ ಸೌಲಭ್ಯ

ಉಡುಪಿ:ಓಂ ಗಣೇಶ್ ಎಂಟರ್ಪ್ರೈಸಸ್ ನಲ್ಲಿ ಯಾವುದೇ ಬ್ಯಾಂಕ್ ಸಾಲ ಸ್ವಾಧೀನ ಸೌಲಭ್ಯ ಲಭ್ಯವಿದೆ. ಒಂದು ಗ್ರಾಂ.ಗೆ 7500/-. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಮಾಂಡವಿ ಮೆರಿಡಿಯನ್ ಕೋರ್ಟ್ ರೋಡ್, ಉಡುಪಿ. 0820-4291111, 9900062449, 9900513680
ಉಡುಪಿ: ಉಕ್ಕಿ ಹರಿಯುತ್ತಿರುವ ಸ್ವರ್ಣ ನದಿ; ನೀರಿನ ರಭಸಕ್ಕೆ ನದಿ ಪಾಲಾಗುತ್ತಿರುವ ತೆಂಗಿನ ಮರಗಳು

ಉಡುಪಿ: ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸ್ವರ್ಣ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಪೆರಂಪಳ್ಳಿ ಬಳಿಯ ಸ್ವರ್ಣ ನದಿ ತಟದಲ್ಲಿರುವ ಪಾಸ್ಕ ಕುದ್ರು ಬಳಿ ಅವೈಜ್ಞಾನಿಕ ಅಣೆಕಟ್ಟು ನಿರ್ಮಾಣಕ್ಕೆ ಸುರಿಯಲಾಗಿರುವ ಮಣ್ಣು ತೆರವುಗೊಳಿಸದ ಕಾರಣ ನದಿ ನೀರು ನದಿ ತಟದ ಪ್ರದೇಶಗಳಿಗೆ ನುಗ್ಗುತ್ತಿದೆ.ಇದರಿಂದಾಗಿ ನದಿ ತಟದ ತೆಂಗಿನ ಮರಗಳು ನದಿಪಾಲಾಗುತ್ತಿವೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳದಲ್ಲಿ ಪಿಕಪ್ ವಾಹನ ಚಾಲಕನ ಬರ್ಬರ ಹತ್ಯೆ

ಬಂಟ್ವಾಳ: ಪಿಕಪ್ ವಾಹನ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಂದು ಮಂಗಳವಾರ (ಮೇ 27 )ನಡೆದಿದೆ. ಕೊಳತ್ತಮಜಲು ನಿವಾಸಿ ಪಿಕಪ್ ವಾಹನ ಚಾಲಕನ ಸೋದರ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ. ರಹೀಮ್ ಜೊತೆ, ಇನ್ನೊಬ್ಬ ಕೂಡ ಇದ್ದು ಆತನನ್ನು ಕಡಿಯಲಾಗಿದೆ. ಆದರೆ ಆತನಿಗೆ ಕೈಗೆ ಗಾಯವಾಗಿದ್ದು ಆತನನ್ನು […]
ತೋಡುಗಳ ಹೂಳೆತ್ತದೆ ನಗರದ ಹಲವೆಡೆ ಸಮಸ್ಯೆ: ನಗರಸಭೆ ಸಾಮಾನ್ಯ ಸಭೆಯಲ್ಲಿ ಭಾರೀ ಗದ್ದಲ

ಉಡುಪಿ: ಮಳೆಗಾಲ ಆರಂಭಕ್ಕೂ ಎರಡು ತಿಂಗಳು ಮುನ್ನ ರಸ್ತೆ ಬದಿಯ ತೋಡುಗಳ ಹೂಳೆತ್ತದ ಪರಿಣಾಮ ಈ ಬಾರಿ ನಗರದ ಹಲವು ಕಡೆ ಕೃತಕ ನೆರೆ ಸೃಷ್ಟಿಯಾಗಿ ಸಾಕಷ್ಟು ಸಮಸ್ಯೆ ಆಗಿತ್ತು. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು ಆರೋಪಿಸಿದರು. ಇದಕ್ಕೆ ಸಾಕಷ್ಟು ಮಂದಿ ಸದಸ್ಯರು ಧ್ವನಿಗೂಡಿಸಿದರು. ಇದಕ್ಕೆ ಉತ್ತರಿಸಿದ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಅವರು, ಈ ಸಂಬಂಧ ಶಾಸಕರು ಹಾಗೂ ಅಧ್ಯಕ್ಷರು ತಿಂಗಳಿಗೆ ಮೂರು ಬಾರಿಯಂತೆ […]
ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ- ಬಿಜೆಪಿ ಸದಸ್ಯರ ಆರೋಪ

ಉಡುಪಿ: ಉಸ್ತುವಾರಿ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರು ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಗಾಳಿಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಆದರೂ ಸಚಿವೆ ಹೆಬ್ಬಾಳ್ಕರ್ ಜಿಲ್ಲೆಗೆ ಆಗಮಿಸಿ ಜನರ ಸಮಸ್ಯೆಯನ್ನು ಆಲಿಸಿಲ್ಲ ಎಂಬ ಬಿಜೆಪಿ ಸದಸ್ಯರ ಆರೋಪವು ಇಂದು ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಮೊದಲು ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ವಿಜಯಲಕ್ಷ್ಮಿ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈವರೆಗೂ ನಗರಸಭೆಯ ಸದಸ್ಯರ ಮುಖವನ್ನೇ ನೋಡಿಲ್ಲ. ಇನ್ನೂ ನಮ್ಮ […]