ಕೆ.ಸಿ.ಇ.ಟಿ ಫಲಿತಾಂಶ: ಜ್ಞಾನಸುಧಾದ ತರುಣ್.ಎ.ಸುರಾನಾಗೆ ಇಂಜಿನಿಯರಿಂಗ್‌ನಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್ ಇಂಜಿನಿಯರಿಂಗ್‌ನಲ್ಲಿ 23 ವಿದ್ಯಾರ್ಥಿಗಳಿಗೆ 500ರ ಒಳಗಿನ ರ‍್ಯಾಂಕ್

ಗಣಿತನಗರ :ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತರುಣ್ ಎ.ಸುರಾನ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕನ್ನು ಪಡೆದಿರುತ್ತಾರೆ, ಸಂಸ್ಥೆಯ 40 ವಿದ್ಯಾರ್ಥಿಗಳು ಇಂಜಿನಿಯರಿಂಗ್ ವಿಭಾಗದಲ್ಲಿ ಸಾವಿರದೊಳಗಿನ ರ‍್ಯಾಂಕ್ ಪಡೆದಿದ್ದು, 1. ತರುಣ್ ಎ. ಸುರಾನ 6ನೇ ರ‍್ಯಾಂಕ್ (ಬಿ.ಫಾರ್ಮದಲ್ಲಿ30ನೇ ರ‍್ಯಾಂಕ್, ಅಗ್ರಿಯಲ್ಲಿ 54ನೇ ರ‍್ಯಾಂಕ್)2. ವಿಷ್ಣು ಧರ್ಮ ಪ್ರಕಾಶ್ 22ನೇ ರ‍್ಯಾಂಕ್ (ಬಿ.ಫಾರ್ಮ 92ನೇ ರ‍್ಯಾಂಕ್)3. ಆಕಾಶ್ ಪ್ರಭು 54 ನೇ […]

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ: ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

ಉಡುಪಿ : ಶಿಕ್ಷಣ ಕ್ಷೇತ್ರದ ಮಹೋನ್ನತ ಗುರಿಯೊಂದಿಗೆ ಏಳು ಜನ ಅತ್ಯಂತ ಅನುಭವಿ ಉಪನ್ಯಾಸಕರುಗಳೇ ಸೇರಿ ಸ್ಥಾಪಿಸಿದ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ 2022ರಲ್ಲಿ ತನ್ನ ಶಿಕ್ಷಣ ಸೇವೆಯನ್ನು ಉಡುಪಿಗೂ ವಿಸ್ತರಿಸುವ ಯೋಜನೆಯೊಂದಿಗೆ ಕಲ್ಯಾಣಪುರದ ತ್ರಿಶಾ ಪ. ಪೂ. ಕಾಲೇಜಿನ ಶೈಕ್ಷಣಿಕ ಸಹಭಾಗಿತ್ವ ವಹಿಸಿಕೊಂಡಿತು. ಈಗಾಗಲೇ ಪಿ.ಯು ಫಲಿತಾಂಶದಲ್ಲಿಆರಂಭಿಕ ವರ್ಷದಲ್ಲೇ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಸಂಸ್ಥೆ ಉಡುಪಿಯ ಶಾಖೆಯಲ್ಲೂ ಆ ಯಶಸ್ಸನ್ನು ಮುಂದುವರೆಸಿದೆ. ತನ್ನ ಪ್ರಥಮ ವರ್ಷದ ಫಲಿತಾಂಶದಲ್ಲೇ ಶೇ. 100 ಗಳಿಸುವುದರ ಜೊತೆಗೆ ಪಿ. […]

ಉಡುಪಿ:ನಗರಸಭೆ ತುರ್ತು ಸಂದರ್ಭಗಳಲ್ಲಿ ಸಹಾಯವಾಣಿಯನ್ನು ಸಂಪರ್ಕಿಸಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ ಸಂದರ್ಭವನ್ನು ಸಮರ್ಪಕವಾಗಿನಿರ್ವಹಿಸಲು ನಗರಸಭಾ ವ್ಯಾಪ್ತಿಯ 35 ವಾರ್ಡ್ಗಳಲ್ಲಿ ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಯಾವುದೇ ತುರ್ತು ಸಂದರ್ಭಗಳಲ್ಲಿ ನಗರಸಭಾ ಕಚೇರಿಯ ಸಹಾಯವಾಣಿ ಕಂಟ್ರೋಲ್ ರೂಂ ಸಂಖ್ಯೆ: 0820-2520306 ಅಥವಾ ನೋಡೆಲ್ಅಧಿಕಾರಿಗಳಾದ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್ ಮೊ.ನಂ: 9741943666, ಪರಿಸರ ಅಭಿಯಂತರೆ ಸ್ನೇಹಾ ಕೆ.ಎಸ್. ಮೊ.ನಂ: 9164397765, ಕಚೇರಿ ವ್ಯವಸ್ಥಾಪಕ ನಾರಾಯಣ ಎಸ್.ಎಸ್ ಮೊ.ನಂ: 9448723833, ಕಂದಾಯ ಅಧಿಕಾರಿ ಸಂತೋಷ್ ಎಸ್.ಡಿ ಮೊ.ನಂ: 9449747209 ಹಾಗೂ […]

ಉಡುಪಿ:ಗ್ರಾ.ಪಂ. ಉಪ ಚುನಾವಣೆಯ ಮತ ಎಣಿಕೆ : ನಿಷೇಧಾಜ್ಞೆ ಜಾರಿ

ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ 2025 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದತೆರವಾಗಿರುವ ಸದಸ್ಯ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಮೇ 28 ರಂದು ಉಡುಪಿ ತಾಲೂಕು ಕಚೇರಿ ಮತ್ತು ಕಾಪು ತಾಲೂಕು ಕಚೇರಿಯಲ್ಲಿ ನಡೆಯಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತ ಎಣಿಕೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು […]

ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ. ವಿದ್ಯಾರ್ಥಿನಿಲಯದ ವಿವರ: ಉಡುಪಿ ತಾಲೂಕಿನ ಕುಂಜಿಬೆಟ್ಟು, ಕಾಪು ತಾಲೂಕಿನ ಪಡುಬಿದ್ರಿ, ಬ್ರಹ್ಮಾವರ […]