ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಹಿಮೇಶ್’ಗೆ ಫುಟ್ಬಾಲ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ.

ಕುಂದಾಪುರ: STAIRS ನ್ಯಾಶನಲ್ ಗೇಮ್ಸ್ – 2025 ಅವರು ನವದೆಹಲಿಯಲ್ಲಿ ದಿನಾಂಕ 19.05.25 ರಿಂದ 22.05.2025 ರ ತನಕ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ಪುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಮೇಶ್ ಕರ್ನಾಟಕ ತಂಡದಿಂದ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮೆರೆದಿದ್ದಾನೆ. ಸಾಧಕ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಕಾರ್ಕಳ: ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ: ವಿ.ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರಕಾರದಿಂದ ರೂ. 5 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರು ತಿಳಿಸಿರುತ್ತಾರೆ. ಕಾರ್ಕಳದ ಜೋಡುಕಟ್ಟೆಯಿಂದ ಬೋರ್ಕಟ್ಟೆ-ರೆಂಜಾಳ-ಇರ್ವತ್ತೂರು-ಸಾಣೂರು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ ಜೊತೆಗೆ ಈ ರಸ್ತೆಯಲ್ಲಿ ಅತ್ಯಂತ ತಿರುವುಗಳಿದ್ದು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವ ವಿ.ಸುನಿಲ್ ಕುಮಾರ್ […]
ಜೆಇಇ ಮೈನ್, ಬಿ.ಆರ್ಕ್, ಕೆಸಿಇಟಿ ಪರೀಕ್ಷೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ.

ಮಂಗಳೂರು: 2025ನೇ ಸಾಲಿನ ಎನ್ ಟಿ ಎ ಅಖಿಲ ಭಾರತ ಮಟ್ಟದಲ್ಲಿ ನಡೆಸಿರುವ ಜೆಇಇ ಮೈನ್ -2025 ಬಿ.ಆರ್ಕ್ ಪರೀಕ್ಷೆಯಲ್ಲಿ ಶಕ್ತಿ ಪದವಿ ಪೂ ಕಾಲೇಜಿನ ಅಭಿನ್ ಕೃಷ್ಣ ಪಿ.ಎಸ್. 2316 ರ್ಯಾಂಕ್ ಮತ್ತು ಹರ್ಷೇಂದ್ರ ದಿಗಂಬರ ನಾಕ್ 4085 ರ್ಯಾಂಕ್ ನೊಂದಿಗೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಅಖಿಲ ಭಾರತ ಮಟ್ಟದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಆರ್ಕಿಟೆಕ್ಟರ್ ಸೀಟಿಗೆ ಅರ್ಹತೆಯನ್ನು ಪಡೆದಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ (ಸಿಇಟಿ) 2025ರ ಪರೀಕ್ಷೆಯಲ್ಲಿ ರಾಜ್ಯದ ಒಟ್ಟು ಪರೀಕ್ಷೆ […]
ಉದ್ಯಾವರ :ಗ್ರಾ.ಪಂ. ಸದಸ್ಯ ಯೋಗೀಶ್ ಎಸ್. ಕೋಟ್ಯಾನ್ ವತಿಯಿಂದ 1.5 ಲಕ್ಷ ರೂ. ಮೌಲ್ಯದ ಉಚಿತ ನೋಟ್ ಬುಕ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ

ಕಟಪಾಡಿ: ದಾನ ಪ್ರವೃತ್ತಿಯ ವಿಸ್ತಾರ, ಎತ್ತರವನ್ನು ಜಾತಿ ಮತ ಬೇಧವಿಲ್ಲದೆ ಮೆರೆದಿರುವ ಉದ್ಯಾವರ ಗ್ರಾ.ಪಂ. ಸದಸ್ಯ ಯೋಗೀಶ್ ಎಸ್. ಕೋಟ್ಯಾನ್ ಅವರ ಸಮಾಜದ ಋಣವನ್ನು ತೀರಿಸುವ ಸ್ತುತ್ಯಾರ್ಹ. ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡುವ ಚಿಂತನಾ ಶೀಲ ಬದುಕು ನಮ್ಮದಾಗಬೇಕು. ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ ಬದುಕನ್ನೇ ಶ್ರೀಮಂತಗೊಳಿಸೋಣ. ಛಲದ ಬಲದಿಂದ ಸಾಧನೆಯನ್ನು ಸಾಕ್ಷಾತ್ಕಾರಗೊಳಿಸಿ ಸುಂದರ ಬದುಕನ್ನು ಕಟ್ಟಿಕೊಳ್ಳುವಂತೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕರೆ ನೀಡಿದರು. ಅವರು ಮೇ 25 ರಂದು ಉದ್ಯಾವರ ಗಣಪತಿ […]
ಉಡುಪಿ: ಈಜುಪಟು ವಾಣಿಯವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ.

ಉಡುಪಿ: ಶಿವಮೊಗ್ಗದಲ್ಲಿ ನಡೆದ ಕರ್ನಾಟಕ ಸರಕಾರಿ ನೌಕರರ ಸಂಘದ ವತಿಯಿಂದ ಜರುಗಿದ ಸ್ಪರ್ಧೆಯಲ್ಲಿ ಶ್ರೀಮತಿ ವಾಣಿಯವರು ಸ್ಪರ್ದಿಸಿ ಮೂರು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕಾರ್ಕಳ ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.