ಉಡುಪಿ:ಕೋಸ್ಟಲ್ ಬರ್ತ್ ಅಭಿವೃದ್ಧಿ : ಪರಿಸರ ಸಾರ್ವಜನಿಕ ಅಲಿಕೆ ಸಭೆ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕು ಹಂಗಾರಕಟ್ಟೆಯಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿ, ಬಂದರು ಮತ್ತುಮೀನುಗಾರಿಕೆ ವಿಭಾಗ, ಉಡುಪಿ ಇವರು ಸಾಗರಮಾಲ ಯೋಜನೆಯಡಿಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಸಂಚರಿಸುವ ವಾಣಿಜ್ಯ ಹಡಗುಗಳಿಗೆ ಸುರಕ್ಷಿತವಾಗಿ ತಂಗಲು ಆಶ್ರಯ ಕಲ್ಪಿಸಲು ಸಿಮೆಂಟ್, ಖಾದ್ಯತೈಲ ಮತ್ತು ಕೃಷಿ ಉತ್ಪನ್ನಗಳು ಮತ್ತು ಇತರ ವಾಣಿಜ್ಯ ಸರಕುಗಳನ್ನು ನಿರ್ವಹಿಸಲು, ಸುರಕ್ಷಿತ ಆಶ್ರಯ ಮತ್ತು ಸಂಗ್ರಹಣೆಗಾಗಿ ಬೇಡಿಕೆಗಳಿರುವುದರಿಂದ, ಸರಕು ಸಾಗಣೆಯ ಅನುಕೂಲಕ್ಕಾಗಿ 1.62 ಹೆಕ್ಟೇರ್ ಪ್ರದೇಶದಲ್ಲಿ ಕೋಸ್ಟಲ್ ಬರ್ತ್ ಅನ್ನು ಅಭಿವೃದ್ಧಿಪಡಿಸುವ ಕುರಿತು ಪರಿಸರ ಸಾರ್ವಜನಿಕ ಆಲಿಕೆ ಸಭೆಯು ಬುಧವಾರಹಂಗಾರಕಟ್ಟೆ […]

ಉಡುಪಿ:ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಅಗತ್ಯವಿರುವ ಪೂರಕ ವಾತಾವರಣವನ್ನು ಅಧಿಕಾರಿಗಳು ಕಲ್ಪಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದರೊಂದಿಗೆ ಮಕ್ಕಳು ಸಮಾಜದಲ್ಲಿ ಆರೋಗ್ಯಯುತ ಜೀವನ ನಡೆಸಿ,ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಅಗತ್ಯವಿರುವ ಪೂರಕ ವಾತಾವರಣ ಅಧಿಕಾರಿಗಳು ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಭಿಕ್ಷಾಟಣೆ ಮಾಡುತ್ತಿರುವ ಮಕ್ಕಳು, ಬಾಲಕಾರ್ಮಿಕ ಮಕ್ಕಳು, ಕಾಣೆಯಾದ ಮಕ್ಕಳು, ಮಾದಕವ್ಯಸನಿಯ ಮಕ್ಕಳು,ಪರಿತ್ಯಕ್ತ […]

ಕಟಪಾಡಿ: ತ್ರಿಶಾ ಕಾಲೇಜಿನಲ್ಲಿ ಗ್ರಾಜುಯೇಟ್ಸ್ ಡೇ ಆಚರಣೆ

ಕಟಪಾಡಿ:ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು, ಕಟಪಾಡಿಯ ವತಿಯಿಂದ ಮೇ 28, 2025ರಂದು ಬಿಎಂಜೆ ಹಾಲ್, ಶಂಕರಪುರದಲ್ಲಿ ಗ್ರಾಜುಯೇಟ್ಸ್ ಡೇ (Graduates Day) ಮತ್ತು ಪರಂಪರಾ ದಿನ(Traditional Day) ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಅತಿಥಿಯಾಗಿ ಸಿಎ ಗುಜ್ಜಡಿ ಪ್ರಭಾಕರ ಎನ್ ನಾಯಕ್ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶ್ರದ್ಧೆ, ಶಿಸ್ತು, ನಿಷ್ಠೆಯ ಮಹತ್ವವನ್ನು ಮತ್ತು ಪ್ರಾಯೋಗಿಕ ಜ್ಞಾನ ಮತ್ತು ನೈತಿಕ ಮೌಲ್ಯಗಳ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

ಉಡುಪಿ:ಕಂಪ್ಯೂಟರ್ ಪಾಯಿಂಟ್ ನಲ್ಲಿ ವಿವಿಧ ಕೋರ್ಸ್ ಗಳು ಲಭ್ಯ

ಉಡುಪಿ:ಕಂಪ್ಯೂಟರ್ ಪಾಯಿಂಟ್ ನಲ್ಲಿ ಎಲ್ಲಾ ರೀತಿಯ ಕಂಪ್ಯೂಟರ್ ನ ವೈಯಕ್ತಿಕ ಕೋರ್ಸ್‌ಗಳು ಲಭ್ಯವಿದ್ದು, ಆಸಕ್ತರು ಇದರ ಸದುಪಯೋಗ ಮಾಡಿಕೊಳ್ಳಬಹುದು. ಕೋರ್ಸ್ ಗಳು:(MS Word, MS Excel, MS PPT, MS-Access, C, C++, VB, Oracle, Java, Photoshop, Tally, HTML) ◼ಕಂಪ್ಯೂಟರ್ ಬೇಸಿಕ್ಸ್-1 ತಿಂಗಳ ಕೋರ್ಸ್.◼ಆಫೀಸ್ ಮ್ಯಾನೇಜ್ಮೆಂಟ್ ನಲ್ಲಿ ಡಿಪ್ಲೊಮಾ. (3 ತಿಂಗಳು)◼ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಡಿಪ್ಲೊಮಾ .(5 ತಿಂಗಳು)◼ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಡಿಪ್ಲೊಮಾ. (1 ವರ್ಷ)◼ವೆಬ್ ಡಿಸೈನಿಂಗ್‌ನಲ್ಲಿ ಡಿಪ್ಲೊಮಾ.◼ಫ್ಯಾಷನ್ ಡಿಸೈನಿಂಗ್‌ನಲ್ಲಿ ಡಿಪ್ಲೊಮಾ. (1 ವರ್ಷ) ಹೆಚ್ಚಿನ […]

ಇಂದು (ಮೇ 29) ಉಡುಪಿ ಜಿಲ್ಲೆಯ ಅಂಗನವಾಡಿಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಮೇ 30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಇಂದು (ಮೇ 29) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.