ಉಡುಪಿ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕರವೇ ಪ್ರತಿಭಟನೆ

ಉಡುಪಿ: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದ್ದು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಳೆದ 2 ದಿನಗಳಿಂದ ಕಮಲ್ ಹಾಸನ್ ವಿರುದ್ಧ ಕನ್ನಡಿಗರು ಪ್ರತಿಭಟನೆ ನಡೆಸಿ ಕ್ಷಮೆಯಾಚಿಸಲು ಪಟ್ಟು ಹಿಡಿದಿದ್ದಾರೆ.ಉಡುಪಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಸೇರಿದ್ದ ಕರವೇ ಕಾರ್ಯಕರ್ತರು ಕಮಲ್ ಹಾಸನ್ ವಿರುದ್ಧ ದಿಕ್ಕಾರ ಕೂಗಿದರು. ಕಮಲ್ ಹಾಸನ್ ತಕ್ಷಣವೇ ಕನ್ನಡಿಗರ ಕ್ಷಮೆಯಾಚಿಸಬೇಕು. […]
ಮಣಿಪಾಲ ಶ್ರೀ ಶಾರದಾ ಟೀಚರ್ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ನಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿ ಆರಂಭ

ಮಣಿಪಾಲ : ಮಣಿಪಾಲದ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಅರ್ಹ ಆಸಕ್ತ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಮಾಂಟೆಸ್ಸರಿ/ನರ್ಸರಿ/ಪೂರ್ವ ಪ್ರಾಥಮಿಕ ಶಿಕ್ಷಕಿಯರ ತರಬೇತಿ ಕೋರ್ಸ್ಗಳ ನೂತನ ಬ್ಯಾಚ್ಗಳು ಆರಂಭವಾಗಲಿದ್ದು ನಿರುದ್ಯೋಗಿ ಮಹಿಳೆಯರು, ಗ್ರಹಿಣಿಯರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಇಲ್ಲಿನ ತರಬೇತಿ ತರಗತಿಗಳು ನರ್ಸರಿಗೆ ಕಳುಹಿಸುವ 2 ರಿಂದ 3 ವರ್ಷಗಳ ಪ್ರಾಯದ ಮಕ್ಕಳ ಬಾಲಸಂರಕ್ಷಣೆಯ ಅಂಶಗಳನ್ನು ಬೆಳೆಸುವ ಭೋದನೆಗಳು, ಆ ಮಕ್ಕಳ ಜೊತೆ ವ್ಯವಹರಿಸುವ ರೀತಿ, ಪ್ರಾಸಬದ್ಧವಾಗಿ ಕಥೆ, ಪದ್ಯಗಳ ಮೂಲಕ ಅವರ ಏಕಾಗ್ರತೆಯನ್ನು ಬೆಳೆಸುವ ಕಲಿಕಾ ವಿಧಾನಗಳು […]
ಕುಲಾಲ ಸಮಾಜ ಸುಧಾರಕ ಸಂಘ ಕುಂದಾಪುರ: ಜೂ.1 ರಂದು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕುಂದಾಪುರ: ಕುಲಾಲ ಸಮಾಜ ಸುಧಾರಕರ ಸಂಘ (ರಿ) ಕುಂದಾಪುರ, ಕುಲಾಲ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಕುಲಾಲ ಸಮುದಾಯದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಾಗೂ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಬೈಂದೂರು ಮತ್ತು ಕುಂದಾಪುರ ವಿಧಾನಸಭಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿನಾಂಕ 01-06-2025 ಸಮಯ ಬೆಳಗ್ಗೆ 10.00 ಗಂಟೆಗೆ ಕುಲಾಲ ಸಮುದಾಯ ಭವನ ಹೊಂಬಾಡಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಗೌರವ ಅಧ್ಯಕ್ಷತೆಯನ್ನು ಕುಲಾಲ ರತ್ನ ಡಾ|ಎಂ.ವಿ.ಕುಲಾಲ್ ವೈದ್ಯಕೀಯ ನಿರ್ದೇಶಕರು ಮಂಜುನಾಥ ಆಸ್ಪತ್ರೆ ಕುಂದಾಪುರ ಗೌರವ […]
ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್’ನಲ್ಲಿ ಪ್ರಾದೇಶಿಕ ಸಮ್ಮೇಳನ

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ನಲ್ಲಿ ” ಹೈ ರಿಸ್ಕ್ ಅಂಡ್ ಕ್ರಿಟಿಕಲ್ ಕೇರ್ ಒಬ್ಸೆಟ್ರಿಕ್ಸ್ ” ಕುರಿತು ಪ್ರಾದೇಶಿಕ ಸಮ್ಮೇಳನ ವನ್ನು ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ, ಫಾದರ್ ಮುಲ್ಲರ್ ಕಾಲೇಜಿನ ಪ್ರಾಧ್ಯಾಪಕಿಯಾದ ಡಾ. ರೀನಾ ವಿಲ್ಟಾ ಪ್ರಾಂಕ್, ಐಎಂಜೆ ಇನ್ಸ್ಟಿಟ್ಯೂಷನ್ಸ್ ಬ್ರಾಂಡ್ ಬಿಲ್ಡಿಂಗ್ ಡೈರೆಕ್ಟರ್ ಡಾ. ರಾಮಕೃಷ್ಣ ಹೆಗಡೆ, ಮತ್ತು ಉಪ ಪ್ರಾಂಶುಪಾಲರಾದ ಶ್ರೀಮತಿ ರೂಪಶ್ರೀ ಕೆ ಎಸ್ ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ […]
ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕಾರ ಮಾಡಿದರು.ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು. ಈ ಮೊದಲು ಹರಿರಾಮ್ ಶಂಕರ್ ಅವರು ರಾಜ್ಯ ಇಂಟಲಿಜೆನ್ಸ್ ಎಸ್ಪಿಯಾಗಿದ್ದರು. ಡಾ. ಅರುಣ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಎಸ್ಪಿ ಹರಿರಾಮ್ ಶಂಕರ್ ಅವರು, ಉಡುಪಿ ಜಿಲ್ಲೆಯ ಜನತೆ ಕೋಮು ಪ್ರಚೋದನೆಗೆ ಅವಕಾಶ […]