ಉಡುಪಿ:ಗೃಹರಕ್ಷಕದಳ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ 19 ರಿಂದ 45 ವರ್ಷದ ಒಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಜಿಲ್ಲಾ ವ್ಯಾಪ್ತಿಯ ಅರ್ಹ ಪುರುಷ ಮತ್ತುಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂರವಾಣಿ ಸಂಖ್ಯೆ 0820-2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಗೃಹರಕ್ಷಕದಳದ ಜಿಲ್ಲಾ […]

ಉಡುಪಿ:ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳತಾಲೂಕು ಮಿಯ್ಯಾರು ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಆಂಗ್ಲಭಾಷೆ, ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ಹಾಗೂ ಬ್ರಹ್ಮಾವರ ತಾಲೂಕು ಆರೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಖಾಲಿ ಇರುವ ಕನ್ನಡ, ಗಣಿತ, ಜೀವಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಮಿಯ್ಯಾರು ಕಾಲೇಜು […]

ಮಂಗಳೂರು:ಎಕ್ಸ್ಪರ್ಟ್ ಪಿಯು ಕಾಲೇಜು: ಜೆಇಇ ಅಡ್ವಾನ್ಸ್ಡ್ ನಲ್ಲಿ ಉತ್ತಮ ಫಲಿತಾಂಶ

ಮಂಗಳೂರು:ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಎಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಜನರಲ್ ಮೆರಿಟ್ ವಿಭಾಗದಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಅನಿಕೇತ್ ಮಗದಂ ಜನರಲ್ ಕೆಟಗರಿ ವಿಭಾಗದಲ್ಲಿ 1021ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಜನರಲ್ ಮೆರಿಟ್ ವಿಭಾಗದಲ್ಲಿ ಸಿದ್ದೇಶ್ ಬಿ.ದಮ್ಮಳ್ಳಿ 3,538ನೇ ರ‍್ಯಾಂಕ್, ಸಾಯಿಶ್ ಶ್ರವಣ ಪಂಡಿತ್ 4562 ನೇ ರ‍್ಯಾಂಕ್, ಕೆ.ರೆಹಾನ್ ಮೊಹಮ್ಮದ್ 5712ನೇ ರ‍್ಯಾಂಕ್, ಅವನೀಶ್ ಬಿ. 6413ನೇ ರ‍್ಯಾಂಕ್, ಯಶಸ್ ಯೋಗೀಂದ್ರ 9088ನೇ ರ‍್ಯಾಂಕ್, ಧನುಷ್ […]

ಉಡುಪಿ:ಪ್ರಥಮ ಪಿಯು ವಿದ್ಯಾರಂಭ – ಭವ್ಯ ಭಾರತದ ಸುಪ್ರಜೆಯಾಗಬೇಕು-ಡಾ|ಎ.ಪಿ.ಭಟ್

ಉಡುಪಿ:’ಶಿಕ್ಷಣದ ಜೊತೆಗೆ ಸಂಸ್ಕಾರ ಪಡೆದು ಭವ್ಯ ಭಾರತದ ಸುಪ್ರಜೆಯಾಗಬೇಕು. ಶ್ರದ್ಧೆ, ಅನವರತ ಪ್ರಯತ್ನದಿಂದ ಸಾಧನೆ ಮಾಡಲು ಸಾಧ್ಯ. ಸ್ವಯಂ ಶಿಸ್ತನ್ನು ಅಳವಡಿಸಿಕೊಂಡಾಗ ಶೈಕ್ಷಣಿಕ ಸಾಧನೆ ಸಾಧ್ಯ. ಪೋಷಕರು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಜವಾಬ್ದಾರಿಯನ್ನು ಮನೆಯಲ್ಲಿ ಮಾಡಿದರೆ, ವಿದ್ಯಾ ಸಂಸ್ಥೆಯಲ್ಲಿ ಅಧ್ಯಾಪಕರು ಸಂಸ್ಕಾರಯುತ ಶಿಕ್ಷಣ ನೀಡುತ್ತಾರೆ’ ಎಂದು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಗೌರವ ಮಹಾ ಕಾರ್ಯದರ್ಶಿ ಡಾ|ಎ.ಪಿ.ಭಟ್ ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರಂಭದ ಉದ್ಘಾಟನೆ ಹಾಗೂ ಪೂರ್ವ ಮಾಹಿತಿ […]

ಆರ್‌ಸಿಬಿ ಸಂಭ್ರಮಾಚಾರಣೆ ವೇಳೆ ಹೃದಯಾಘಾತದಿಂದ ಅಭಿಮಾನಿ ಮೃತ್ಯು.

ಬೆಳಗಾವಿ, ಜೂನ್​ 04: ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇತಿಹಾಸ ಸೃಷ್ಟಿಸಿದೆ. 18 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ. ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗು ಬಡಿದು ಆರ್‌ಸಿಬಿ ಐಪಿಎಲ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲ್ಲುತ್ತಿದ್ದಂತೆ ಎಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಕುಣಿಯುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದುಬಿದ್ದು ಓರ್ವ ಅಭಿಮಾನಿ ಮಂಜುನಾಥ್ ಕುಂಬಾರ(25)‌ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.