ಶಿರ್ವ ಹಿಂದೂ ಜೂನಿಯರ್ ಕಾಲೇಜು:ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

ಶಿರ್ವ: ಶಿರ್ವದ ಹಿಂದುಾ ಜೂನಿಯರ್ ಕಾಲೇಜಿನ ಪ್ರಥಮ ವರ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸೈನ್ಸ್, ಕಾಮರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಓರಿಯಂಟೇಷನ್ ಕಾರ್ಯಕ್ರಮ” ಜ್ಞಾನ ಚೇತನ ಎಜುಕೇಷನ್ ಟ್ರಸ್ಟಿನ” ವತಿಯಿಂದ ಹಮ್ಮಿಕೊಳ್ಳಲಾಯಿತು.ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭಕೇೂರಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಂಜಿಎಂ.ಕಾಲೇಜಿನ ನಿವೃತ್ತ ರಾಜ್ಯ ಶಾಸ್ತ್ರ ಮುಖ್ಯಸ್ಥ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಮಾತನಾಡಿ “ಶಿರ್ವದ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ […]
ಯುಪಿಎಂಸಿ ಕಾಲೇಜು ವಾರ್ಷಿಕೋತ್ಸವ ಮತ್ತು ಸಂಸ್ಥಾಪಕರ ಸಂಸ್ಮರಣೆ

ಉಡುಪಿ: ಉಡುಪಿ ಜಿಲ್ಲೆ ಶಿಕ್ಷಣ ಕಾಶಿ, ಡಾ. ಟಿ ಎಂ ಎ ಪೈ ಯವರಿಂದ ಸ್ಥಾಪಿತವಾದ ಶಿಕ್ಷಣ, ಆರೋಗ್ಯ ಸಂಸ್ಥೆಗಳು ಎಷ್ಟೋ ಕುಟುಂಬಗಳಿಗೆ ಅನ್ನ ನೀಡಿದೆ, ಜಿಡಿಪಿ ಪ್ರಗತಿಗೆ ಉಡುಪಿಯ ಕೊಡುಗೆ ಅಪಾರ, ಕಲಿತ ವಿದ್ಯೆಯಿಂದ ಉದ್ಯೋಗ ಪಡೆದು ಅಥವಾ ಉದ್ಯೋಗ ನೀಡಿದರೆ ಮಾನವ ಸಂಪನ್ಮೂಲದ ಕ್ರೂಡಿಕರಣ ಆಗಲು ಸಾಧ್ಯ. ವಿದ್ಯೆಯ ಜೊತೆಗೆ ಕೌಶಲಗಳು ಅತೀ ಮುಖ್ಯ ಇವುಗಳು ಒಂದೇ ನಾಣ್ಯದ ಎರಡು ಮುಖಗಳು, ಜೀವನದಲ್ಲಿ ಸಾಧಿಸಿದ ನಂತರ ತಂದೆ ತಾಯಿ, ಗುರುಗಳು ಮತ್ತು ಕಲಿತ ಕಾಲೇಜನ್ನು […]
ಉಡುಪಿ:ಕೋವಿಡ್ ಸೋಂಕಿನ ಬಗ್ಗೆ ಆತಂಕ ಬೇಡ, ಅಗತ್ಯ ಮುಂಜಾಗ್ರತೆ ವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಭಯ ಬೀಳದೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನುಕೈಗೊಂಡಲ್ಲಿ ಇವುಗಳಿಂದ ದೂರವಿರಲು ಸಾಧ್ಯ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯದಾದ್ಯಂತ ಕೋವಿಡ್ ಸೋಂಕಿನ ಪ್ರಕರಣಗಳು ಕಂಡುಬರುತ್ತಿವೆ. ಜಿಲ್ಲೆಯಲ್ಲೂ ಸಹ ಕೆಲವು ಪ್ರಕರಣಗಳು ಉಂಟಾಗಿವೆ.ಸಾರ್ವಜನಿಕರು ಸರ್ಕಾರ ಸೂಚಿಸಿರುವ ಸುರಕ್ಷತಾ ಕ್ರಮಗಳನ್ನು […]
ಉಡುಪಿ:ಬಕ್ರೀದ್ ಆಚರಣೆಯ ವೇಳೆ ಅನಧೀಕೃತ ಜಾನುವಾರು ವಧೆ, ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಜಾರಿ : ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ

ಉಡುಪಿ: ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ನಡೆದ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ […]
ಹೋಟೆಲ್ ಉದ್ಯಮಿ ಸುರೇಶ್ ಪೂಜಾರಿ ಪಡುಕೋಣೆ ನಿಧನ

ಕುಂದಾಪುರ: ಮುಂಬಯಿಯಲ್ಲಿ ಸುಖ ಸಾಗರ್ ಗ್ರೂಪ್ ಆಫ್ ಹೊಟೇಲಿನ ಸಂಸ್ಥಾಪಕ ಉದ್ಯಮಿ, ಕೊಡುಗೈ ದಾನಿ ಪಡುಕೋಣೆ ಸುರೇಶ್ ಪೂಜಾರಿ (87) ಬುಧವಾರ (ಜೂ.4) ಸಂಜೆ ಮುಂಬಯಿಯಲ್ಲಿ ವಯೋ ಸಹಜವಾಗಿ ನಿಧನರಾಗಿದ್ದಾರೆ. ಎಳೆಯ ವಯಸ್ಸಿನಲ್ಲೇ ಹುಟ್ಟೂರನ್ನು ತೊರೆದು ಕುಟುಂಬದ ಪಾಲನೆಗೆ ದೂರದ ಮಾಯಾ ನಗರಿ ಮುಂಬಯಿಗೆ ತೆರಳಿ ತಮ್ಮ ಸ್ವ ಸಾಮರ್ಥ್ಯದಿಂದ ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್ […]