ಕುಂದಾಪುರ: ಬಸ್ ನಿರ್ವಾಹಕನ‌ ಕೊಲೆಗೆ ಯತ್ನ: ಓರ್ವನ ಬಂಧನ

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು‌ ಪೊಲೀಸರು ಬಂಧಿಸಿದ್ದಾರೆ. ಆಲೂರು ಗ್ರಾಮದ ಪ್ರದೀಪ್ ಪೂಜಾರಿ(28) ಬಂಧಿತ ಆರೋಪಿ. ಜೂ. 2ರಂದು ಈತ ಹಾಗೂ ಇತರ ಐದು ಮಂದಿ‌ ಆಲೂರು -ಕುಂದಾಪುರ ಮಾರ್ಗದಲ್ಲಿ ಸಂಚರಿಸುವ ಜಯದುರ್ಗಾ ಬಸ್‌ಗೆ ಆಲೂರು ಗ್ರಾಮದ ಹೊಯಿಗೆಹರ ಬಸ್ ನಿಲ್ದಾಣದಲ್ಲಿ ಹತ್ತಿದ್ದಾರೆ. ಬಳಿಕ ನಿರ್ವಾಹಕ ಗಣೇಶ್ ಜೊತೆ ಜಗಳವಾಡಿ, ಅವರ ಶರ್ಟ್ ಕಾಲರ್ ಪಟ್ಟಿಯನ್ನು ಹಿಡಿದು, ಕೈಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಗಣೇಶ್ […]

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ರಾಜ್ಯ ಮಟ್ಟದ 22 ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ.

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಮೇ 31 ರಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿ ಯಾಗಿ ಶಿಕ್ಷಕರು ಹಾಗೂ ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನದ ತರಬೇತುದಾರ ರಾದ ರಾಜೇಂದ್ರ ಭಟ್. ಕೆ. ಪೋಷಕರನ್ನು ಉದ್ದೇಶಿಸಿ, ಪೋಷಕರು ತಮ್ಮ ಮಕ್ಕಳನ್ನು ಅತ್ಯುತ್ತಮ ರೀತಿಯಲ್ಲಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು. ಮಕ್ಕಳು ಹೃದಯ ಶ್ರೀಮಂತಿಗೆ ಬೆಳೆಸಿಕೊಳ್ಳು ವಂತೆ ಮಾಡಿ, ಮಗುವಿನಲ್ಲಿ ಅಂಕ ಪಡೆಯುವುದಕ್ಕಿಂತ ಮುಖ್ಯವಾಗಿರುವುದು ಮಾನವೀಯ ಮೌಲ್ಯ. ಒತ್ತಡ […]

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಪೊಮ್ಮು (57) ಎಂಬ ವ್ಯಕ್ತಿಯು ಜೂನ್ 2 ರಂದು ಆಸ್ಪತ್ರೆಯಿಂದ ಯಾರಿಗೂ ಹೇಳದೇ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

ಆರ್ ಸಿಬಿ‌ ಅಭಿಮಾನಿಗಳ ದುರಂತ ಸಾವಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು- ಶಾಸಕ ಯಶ್ ಪಾಲ್ ಸುವರ್ಣ ಒತ್ತಾಯ

ಉಡುಪಿ: ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯಿಲ್ಲದೆ ಕಾಲ್ತುಳಿತ ಉಂಟಾಗಿ 11 ಮಂದಿ ಅಮಾಯಕ ಆರ್ ಸಿ ಬಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾರನ್ನು ಹೊಣೆಯಾಗಿ ಗಡಿಪಾರು ಮಾಡುತ್ತೀರಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರಶ್ನಿಸಿದ್ದಾರೆ. ಯಾವುದೇ ಪೂರ್ವ ತಯಾರಿ ಇಲ್ಲದೇ ಸಾವಿರಾರು ಮಂದಿ ಸೇರುವ ಮಾಹಿತಿ ಇದ್ದರೂ ಕನಿಷ್ಟ ಒಂದು ಆಂಬ್ಯುಲೆನ್ಸ್ ವಾಹನದ ವ್ಯವಸ್ಥೆಯನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಡದೇ ಅಮಾಯಕ ಕ್ರೀಡಾಭಿಮಾನಿಗಳ ಸಾವಿನ ಹೊಣೆಯನ್ನು […]

ಬ್ರಹ್ಮಾವರದಲ್ಲಿರುವ ಸ್ನ್ಯಾಕ್ಸ್ ತಯಾರಿಸುವ ಘಟಕಕ್ಕೆ ಜನ ಬೇಕಾಗಿದ್ದಾರೆ.

ಉಡುಪಿ:ಬ್ರಹ್ಮಾವರದಲ್ಲಿರುವ ಸ್ನ್ಯಾಕ್ಸ್ ತಯಾರಿಸುವ ಘಟಕಕ್ಕೆ ಅಡುಗೆ ಭಟ್ಟರು ಬೇಕಾಗಿದ್ದಾರೆ.ಬಜ್ಜಿ, ಬೋಂಡಾ, ಹಾಗೂ ಮಳೆಗಾಲದ ಕುರುಕಲು ತಿಂಡಿಗಳನ್ನು ಮಾಡಲು ಗೊತ್ತಿರಬೇಕು.ವಸತಿ ಸೌಲಭ್ಯ ಇದೆ. ಆಸಕ್ತರು ಕರೆ ಮಾಡಿ: 9741761153