ಉಡುಪಿ: ಬೈಕ್ ಗೆ ಕಾರು ಡಿಕ್ಕಿ; ಎಂಬಿಎ ವಿದ್ಯಾರ್ಥಿ ಸಾವು

ಉಡುಪಿ: ಬೈಕ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಭಜನೆ ಹಾಡುಗಾರ ಮತ್ತು ತಬಲ ವಾದಕ ಕಿದಿಯೂರಿನ ಸಂಕೀರ್ತನ್ (28) ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಮಂಗಳೂರು ಕಡೆಗೆ ರಾಷ್ಟ್ರೀಯ ಹೆದ್ದಾರಿ – 66ರಲ್ಲಿ ಸಾಗುತ್ತಿದ್ದ ಕಾರನ್ನು ಅದರ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಗೂಡ್ಸ್ ವಾಹನವೊಂದಕ್ಕೆ ಮತ್ತು ಅದರ ಹಿಂದೆ ಸಾಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದ್ದ. ಕಾರನ್ನು […]
ಯುಪಿಎಂಸಿ’ಯಲ್ಲಿ ಉಪೇಂದ್ರ ಪೈ ಪ್ರೀಮಿಯರ್ ಲೀಗ್ – ವಾಲಿಬಾಲ್ ಪಂದ್ಯಾಟ.

ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಮೇ 27ರಂದು ಯುಪಿಎಲ್ ಅಂತರ್ಕಕ್ಷ್ಯಾ ವಾಲಿಬಾಲ್ ಪಂದ್ಯಾಟ ಜರಗಿತು.ಕಾಲೇಜಿನ ಹಳೆ ವಿದ್ಯಾರ್ಥಿ ಮುಕುಂದ ರಿಟೈಲರ್ಸ್ ಮಾಲಕ ಮುಕುಂದ ಶೆಣೈ ಕಾರ್ಯಕ್ರಮ ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕ್ರೀಡಾ ಜರ್ಸಿ ಮತ್ತು ಫಲಕ ಅನಾವರಣಗೊಂಡಿತು.ಕಾಲೇಜಿನ ಪ್ರಾಚಾರ್ಯೆ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಚಾರ್ಯ ರಾಧಾಕೃಷ್ಣ ರಾವ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಭಾ ಕಾಮತ್, ದೈಹಿಕ ಶಿಕ್ಷಣ ನಿರ್ದೇಶಕ ಗಣೇಶ್ ಕೋಟ್ಯಾನ್, ವಿದ್ಯಾರ್ಥಿ ಕ್ಷೇಮಪಾಲನ […]
ಉಡುಪಿ: ಪ್ರೊ.ಕು.ಶಿ.ಹರಿದಾಸ ಭಟ್ ಜಾನಪದ ಪ್ರಶಸ್ತಿಗೆ ಡಿ.ಕೆ. ರಾಜೇಂದ್ರ, ವಿಜಯಶ್ರೀ ಸಬರದ ಆಯ್ಕೆ

ಉಡುಪಿ: ಸಾಹಿತ್ಯ, ಶಿಕ್ಷಣ, ಆಡಳಿತ, ಸಂಘಟನೆ, ಜಾನಪದ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮ ಅನುಪಮ ಸಾಧನೆ ಸಿದ್ಧಿಗಳಿಂದ ಲೋಕವಿಖ್ಯಾತರಾದ ಪ್ರೊ.ಕು.ಶಿ.ಹರಿದಾಸ ಭಟ್ ಶತಮಾ ನೋತ್ಸವ ಜಾನಪದ ಪ್ರಶಸ್ತಿ-2024ಕ್ಕೆ ನಿವೃತ್ತ ಪ್ರಾದ್ಯಾಪಕರಾದ ಡಾ.ಡಿ.ಕೆ. ರಾಜೇಂದ್ರ ರನ್ನು ಆಯ್ಕೆ ಮಾಡಲಾಗಿದೆ. ಅದೇ ರೀತಿ ಪ್ರೊ.ಕು.ಶಿ.ಹರಿದಾಸ ಭಟ್ ಜಾನಪದ ಪ್ರಶಸ್ತಿ-2025ಕ್ಕೆ ಜಾನಪದ ವಿದ್ವಾಂಸೆ, ಲೇಖಕಿ ಡಾ.ವಿಜಯಶ್ರೀ ಸಬರದ ಅವರು ಆಯ್ಕೆ ಯಾಗಿದ್ದಾರೆ ಎಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಈ ಎರಡೂ […]
ಬೆಳ್ತಂಗಡಿ: ಜೂ.7ರಿಂದ ಗಡಾಯಿಕಲ್ಲು, ಜಲಪಾತಗಳಿಗೆ ಪ್ರವಾಸಿಗರಿಗೆ ಪ್ರವೇಶಕ್ಕೆ ಅನುಮತಿ

ಬೆಳ್ತಂಗಡಿ : ಗಡಾಯಿಕಲ್ಲು (ಜಮಲಾಬಾದ್ ಗಡ) ಕಡಮಗುಂಡಿ, ಬೊಳ್ಳೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಜೂ.7ರಿಂದ ಎಂದಿನಂತೆ ಪ್ರವೇಶ ಮಾಡಲು ಅನುಮತಿ ನೀಡಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಅಧಿಕೃತವಾಗಿ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆ ಯಂತೆ ರೆಡ್ ಅಲರ್ಟ್ ಘೋಷಣೆಯಾಗಿತ್ತು. ನದಿ ಹಳ್ಳಗಳು ಉಕ್ಕಿ ಹರಿದು ಒಳ ಹರಿವು ಜಾಸ್ತಿ ಇದ್ದುದ ರಿಂದ ಪ್ರವಾಸಿಗರ ಚಾರಣಕ್ಕೆ ಮೇ 31ರಂದು ಮುಂದಿನ ಆದೇಶದವರೆಗೆ ಪ್ರವೇಶವನ್ನು ನಿಷೇಧ ಮಾಡಿ […]
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಉತ್ತಮ ಅವಕಾಶ

ಉಡುಪಿ:ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಲಾಗಿದೆ.6,7,8,9 ನೇ ಕ್ಲಾಸ್ ಫೈಲ್ ಆದವರು ನೇರವಾಗಿ SSLC ಬರೆಯಲು ಅವಕಾಶ ಮತ್ತು 1st ಪಿಯುಸಿ ಫೈಲ್ ಆದವರು ನೇರವಾಗಿ ದ್ವಿತೀಯ ಪಿಯುಸಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಕಲಿಯುವ ಅವಕಾಶ, ಮತ್ತು 1ರಿಂದ 10 ನೇ ತರಗತಿಯವರೆಗೆ ಟ್ಯೂಷನ್ ಕೊಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ, ಉಡುಪಿ- 8971588367