ಉಡುಪಿ:ಅಂತರ್ಜಲ ವೃದ್ಧಿಗೆ ಮಳೆ ನೀರಿನ ಕೊಯ್ಲು ಆಶಯ- ಇದಕ್ಕೆ ಒತ್ತು ನೀಡಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೊಳಿಸಲು ಮಳೆನೀರು ಕೊಯ್ಲನ್ನು ಅಳವಡಿಸಿಕೊಳ್ಳುವುದು ಅವಶ್ಯ.ಸರಕಾರದ ಎಲ್ಲಾ ತೆರೆದ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಕೊಯ್ಲು ಕಡ್ಡಾಯವಾಗಿ ಅಳವಡಿಸಬೇಕೆಂದು ಅಧಿಕಾರಿಗಳಿಗೆಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಳೆ ನೀರು ಕೊಯ್ಲು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದರೂ ಸಹ ಅಂತರ್ಜಲದ ಮಟ್ಟ ನಿರೀಕ್ಷಿತ ಮಟ್ಟಕ್ಕಿಂತ ಕೆಳಭಾಗದಲ್ಲಿದೆ. ಹೆಚ್ಚು ಮಳೆಯಾದರೂನೀರು ಸರಾಗವಾಗಿ ಪಶ್ಚಿಮಾಭಿಮುಖವಾಗಿ ಹರಿದು ಸಮುದ್ರವನ್ನು ಸೇರುತ್ತಿದೆ. […]