ಉಡುಪಿ:ನಿವೃತ್ತ ತಹಸೀಲ್ದಾರ್ ಪಿ.ಬಾಬು ರವರಿಗೆ ಬಿ.ಜೆ.ಎಂ ಮಸ್ಜಿದ್ ಕಮಿಟಿಯಿಂದ ಸನ್ಮಾನ

ಉಡುಪಿ:ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಮಸ್ಜಿದ್ ಆಡಳಿತ ಕಚೇರಿಗೆ ನಿವೃತ್ತ ತಹಶೀಲ್ದಾರ್ ಪಿ ಬಾಬು ಭೇಟಿ ನೀಡಿದ ಸಂದರ್ಭದಲ್ಲಿ ಮಸ್ಜಿದ್ ಕಮಿಟಿ ವತಿಯಿಂದ ಮಸ್ಜಿದ್ ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಸನ್ಮಾನಿಸಿದರು ಸನ್ಮಾನಿಸಿ ಮಾತನಾಡಿದ ಅವರು ಪಿ ಬಾಬು ರವರು ತಹಸೀಲ್ದಾರ್ ಆಗಿ ಉತ್ತಮ ಕೆಲಸ ಮಾಡಿ ಜನ ಸಾಮಾನ್ಯರ ಮೆಚ್ಚುಗೆ ಪಡೆದಂತವರು ನಮ್ಮ ಊರಿನವರು ಎಂಬ ಹೆಗ್ಗಳಿಕೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಸ್ಜಿದ್ ಉಪಾಧ್ಯಕ್ಷರಾದ ಹಸನಬ್ಬ ಮಜೂರು ರಝಕ್ ಕೊಪ್ಪಲ್ ತೋಟ, ರಝಕ್ ಮಲ್ಲಾರು, […]

ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು.

ಬಂಟ್ವಾಳ: ತಾಲೂಕಿನ ಕಾರಿಂಜದಲ್ಲಿ ಸ್ನಾನಕ್ಕೆಂದು ಕೆರೆಗೆ ಇಳಿದ ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಕಾರಿಂಜ ಕಂಗಿಹಿತ್ಲು ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಎಂದು ಗುರುತಿಸಲಾಗಿದೆ. ಚೇತನ್ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ನಂತರ ದೇವಾಲಯದ ‌ಕೆರೆಯಲ್ಲಿ ಸ್ನಾನಕ್ಕೆಂದು ಇಳಿದಿದ್ದಾನೆ ಎನ್ನಲಾಗಿದೆ. ಜೊತೆಯಲ್ಲಿ ಇದ್ದ ಪ್ರಶ್ವಿತ್ ಗೆ ಈಜು ತಿಳಿಯದ ಕಾರಣ ಆತ ಸ್ಥಳೀಯರಿಗೆ ಪೋನ್ ಮಾಡಿದ್ದಾನೆ. ಕೂಡಲೇ ಸ್ಥಳೀಯರು ಸೇರಿದ್ದು ಕೆರೆಗೆ […]

ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ ನಿಧನ.

ಬೆಳ್ತಂಗಡಿ: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಶನಿವಾರ ರಾತ್ರಿ ಹೃದಯಾಘಾತದಿಂದ ಮಂಗಳೂರಿನ ಮನೆಯಲ್ಲಿ ನಿಧನರಾದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕ ರಾಗಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ಅವರು ನಿರ್ವಹಿಸಿದ್ದರು. ಪುಂಡು, ರಾಜವೇಶ, ನಾಟಕೀಯ ವೇಷಗಳಲ್ಲಿ ನುರಿತ ಕಲಾವಿದರಾಗಿದ್ದರು.