ಕುಂದಾಪುರ: ಮೆಡಿಕಲ್ ಶಾಪ್ ಸಿಬ್ಬಂದಿಗೆ ಹಲ್ಲೆ; ಮಹಿಳೆಯ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಮಾವಿನಕಟ್ಟೆಯ ಮೆಡಿಕಲ್ ಶಾಪ್ನ ದಲಿತ ಯುವತಿಗೆ ಚಿಲ್ಲರೆ ವಿಚಾರವಾಗಿ ಮುಸ್ಲಿಂ ಮಹಿಳೆಯೋರ್ವಳು ಹಲ್ಲೆಗೈದ ಘಟನೆ ನಡೆದಿದೆ. ಲಕ್ಷ್ಮೀ ಹಲ್ಲೆಗೊಳಗಾದ ಯುವತಿ. ಯಾಸ್ಮಿನ್ ಹಲ್ಲೆಗೈದ ಆರೋಪಿ. ಮಾವಿನಕಟ್ಟೆಯ ಮೆಡಿಕಲ್ಗೆ ಬಂದಿದ್ದ ಯಾಸ್ಮಿನ್, ಔಷಧ ಖರೀದಿಸಿ 500 ರೂಪಾಯಿ ನೋಟು ಕೊಟ್ಟಿದ್ದರು. ಆಗ ಯುವತಿ ಚಿಲ್ಲರೆ ಇಲ್ಲ ಪೋನ್ ಪೇ ಮಾಡಿ ಎಂದು ಹೇಳಿದ್ದಳು. ಇದಕ್ಕೆ ಕೋಪಗೊಂಡ ಯಾಸ್ಮಿನ್ ಚಿಲ್ಲರೆ ಕೊಡು ಎಂದು ಜಗಳವಾಡಿ ಯುವತಿಗೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ಮಾಡಿದ್ದಾಳೆ. ಘಟನೆಯ […]
ಅಭಿವೃದ್ಧಿಯ ಬದ್ಧತೆಗೆ ಮೋದಿ ಆಡಳಿತದ 11 ವರ್ಷಗಳೇ ಸಾಕ್ಷಿ: ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ಕೇವಲ ರಾಜಕಾರಣ, ಅಧಿಕಾರ ಅನುಭವಿಸಲು ಸೀಮಿತವಾಗದ ಬಿಜೆಪಿ ದೇಶದ ಅಭಿವೃದ್ಧಿಯ ಬದ್ಧತೆ ಹೊಂದಿದ್ದು ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ 11 ವರ್ಷಗಳ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಅವರು ‘ವಿಕಸಿತ ಭಾರತದ ಅಮೃತ ಕಾಲ’ – ‘ಸೇವೆ, ಸುಶಾಸನ, ಬಡವರ ಕಲ್ಯಾಣ’ದ ‘ಮೋದಿ ಸರಕಾರಕ್ಕೆ 11 ವರ್ಷ’ ಸಂಭ್ರಮದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಭಿವೃದ್ಧಿ ಜತೆಗೆ […]
ಪಂಚಗಂಗಾ ಎಕ್ಸ್ ಪ್ರೆಸ್ ರೈಲಿಗೆ ಹೆಚ್ಚುವರಿಯಾಗಿ 5 ಬೋಗಿಗಳ ಜೋಡಣೆ.

ಕುಂದಾಪುರ: ಸುಬ್ರಹ್ಮಣ್ಯ – ಸಕಲೇಶಪುರ ರೈಲ್ವೆ ಹಳಿ ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಕಾರವಾರ – ಯಶವಂತಪುರ ಹಗಲು ರೈಲು ಸಂಚಾರವನ್ನು ಸ್ಥಗಿತಗೊಳಿಸುತ್ತಿದ್ದು, ಅದಕ್ಕೆ ಪರ್ಯಾಯವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಪಂಚಗಂಗಾ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿಯಾಗಿ 5 ಬೋಗಿಗಳನ್ನು ಜೋಡಿಸಲಾಗುತ್ತಿದೆ. ಜೂ.11 ರಿಂದ ಅನ್ವಯವಾಗಲಿದೆ. ಕುಂದಾಪುರ, ಉಡುಪಿ, ಕಾರವಾರ ಭಾಗದ ಜನರಿಗೆ ಅನುಕೂಲವಾಗಿದ್ದ ಹಗಲು ರೈಲು ಸಂಚಾರವನ್ನು ಕಾಮಗಾರಿ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸುತ್ತಿರುವುದರಿಂದ ಈ ಮಾರ್ಗವಾಗಿ ಬೆಂಗಳೂರಿಗೆ ರಾತ್ರಿ ವೇಳೆ ಹೆಚ್ಚುವರಿ ರೈಲು ಒದಗಿಸುವಂತೆ ನೈಋತ್ಯ ರೈಲ್ವೆಗೆ ಕುಂದಾಪುರದ ಪ್ರಯಾಣಿಕರ ಹಿತರಕ್ಷಣಾ […]
ಉಡುಪಿ:ಪ.ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಸ್ವ-ಉದ್ಯೋಗ ಹೊಂದಲು ಹಾಗೂ ತರಬೇತಿಯೊಂದಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ Iಊಒ ಹಾಗೂ ಈಅI ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಹಾಗೂ ಕೆ.ಎಸ್.ಟಿ.ಡಿ.ಸಿ ಸಂಸ್ಥೆಗಳ ಮೂಲಕ ಕನಿಷ್ಠ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ […]
ಉಡುಪಿ:ತೋಟಗಾರಿಕೆ ಇಲಾಖೆಯ ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಲಭ್ಯವಿದ್ದು, ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ರೈತರಿಗೆ ಕಾಳುಮೆಣಸು, ಗೇರು, ಜಾಯಿಕಾಯಿ, ಅನಾನಸ್ಸು, ಅಂಗಾAಶಬಾಳೆ ಹಾಗೂ ಕಂದು ಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂಟಾನ್, ಮ್ಯಾಂಗೋಸ್ಟೀನ್ ಮತ್ತು ಡ್ರ್ಯಾಗನ್ ಫ್ರೂಟ್ ಹೊಸ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ, ಸಣ್ಣ ಸಸ್ಯಾಗಾರಗಳ/ ನರ್ಸರಿಗಳಳ ಸ್ಥಾಪನೆಗೆ ಶೇ.50 ರ ದರದಲ್ಲಿ (ಗರಿಷ್ಠ ರೂ. 10 ಲಕ್ಷಗಳು) […]