ಪಡುಬಿದ್ರೆ: ಆಟೊಗೆ ಖಾಸಗಿ ಬಸ್ ಡಿಕ್ಕಿ- ಓರ್ವ ಮೃತ್ಯು

ಉಡುಪಿ: ಆಟೊ ರಿಕ್ಷಾಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಪಡುಬಿದ್ರೆ ಕಾರ್ಕಳ ರಾಜ್ಯ ಹೆದ್ದಾರಿಯ ಅಡ್ವೆ ಕಣಜಾರ್ ಕಟ್ಟೆ ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮಂಗಳೂರಿನಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಆಟೊಗೆ ಡಿಕ್ಕಿ ಹೊಡೆದಿದೆ. ಮೃತ ಪ್ರಯಾಣಿಕನ ಹೆಸರು ತಿಳಿದುಬಂದಿಲ್ಲ. ಆಟೊ ಚಾಲಕ ಕಂಚಿನಡ್ಕ ನಿವಾಸಿ‌ ಹಂಝ ಗಂಭೀರ ಗಾಯಗೊಂಡಿದ್ದಾರೆ. ಬಸ್ ಢಿಕ್ಕಿ ಹೊಡೆದ ಪರಿಣಾಮ‌ ಆಟೊ […]

ಉಡುಪಿ ಜಿಲ್ಲಾ ಫುಡ್ ಅಸೋಸಿಯೇಷನ್ ಮತ್ತು ಅರುಣೋದಯ ಹೋಂ ಇಂಡಸ್ಟ್ರೀಸ್ ಸಹಯೋಗದಲ್ಲಿ ಉದ್ಯಮ ಮಾಹಿತಿ ಕಾರ್ಯಗಾರ

ಉಡುಪಿ:ಉಡುಪಿ ಜಿಲ್ಲಾ ಫುಡ್ ಅಸೋಸಿಯೇಷನ್ ಮತ್ತು ಅರುಣೋದಯ ಹೋಂ ಇಂಡಸ್ಟ್ರೀಸ್, ವಡ್ಜೆ, ಪೆರ್ಡೂರು ಇದರ ಸಹಯೋಗದಲ್ಲಿ ಮಂಗಳವಾರ (10.6.2025) ನಡೆದ ಉದ್ಯಮ ಮಾಹಿತಿ ಕಾರ್ಯಗಾರವು ಅರುಣೋದಯ ಇಂಡಸ್ಟ್ರೀಸ್ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಸಂಘದ ಅಧ್ಯಕ್ಷರಾದ ವಿಶ್ವನಾಥ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಮ್ಮ ಸಂಘದ ಸದಸ್ಯರಾದ ಗೋವಿಂದ ಕುಲಾಲ್ ರವರು ಪ್ರಾರ್ಥನೆಯನ್ನು ನೆರವೇರಿಸಿದರು. ಸಂಘದ ಎಲ್ಲಾ ಸದಸ್ಯರಿಗೂ ಮತ್ತು ಸಭೆಯಲ್ಲಿ ನೆರೆದಿರುವ ಎಲ್ಲರಿಗೂ ಅಧ್ಯಕ್ಷರು ಸ್ವಾಗತಿಸಿದರು. ಪ್ರಾಸ್ತವಿಕವಾಗಿ ಅರುಣೋದಯ ಹೋಂ ಇಂಡಸ್ಟ್ರೀಸ್ ಮಾಲಕರಾದ ವಸಂತ […]

ರಾಜ್ಯದಲ್ಲಿ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು 9 ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’ ಘೋಷಿಸಿದೆ. ಗುರುವಾರ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ 30–40 ಕಿ.ಮೀ. ವೇಗದಲ್ಲಿ, ಉತ್ತರ ಒಳನಾಡಿನಲ್ಲಿ ಗಂಟೆಗೆ 40–50 ಕಿ.ಮೀ. ವೇಗದಲ್ಲಿ, ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 50–60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕೊಪ್ಪಳ, ಹಾವೇರಿ, ಬಾಗಲಕೋಟೆ, […]

ಉಡುಪಿಯ ಹೆಸರಾಂತ ‘ವಿದ್ಯಾ ಟ್ಯುಟೋರಿಯಲ್ ಕಾಲೇಜ್’ನಲ್ಲಿ ವಿವಿಧ ತರಗತಿಗಳಿಗೆ ಪ್ರವೇಶಾತಿ ಆರಂಭ.

ಉಡುಪಿ: ಉಡುಪಿಯ ಹೆಸರಾಂತ ವಿದ್ಯಾ ಟ್ಯುಟೋರಿಯಲ್ ಕಾಲೇಜ್ ನಲ್ಲಿ ವಿವಿಧ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ. ಎಸ್.ಎಸ್.ಎಲ್.ಸಿ. ಪಾಸಾದವರು ಅಥವಾ ಪ್ರಥಮ ಪಿ.ಯು.ಸಿ ಫೇಲಾಧವರು ನೇರವಾಗಿ ದ್ವಿತೀಯ ಪಿ.ಯು.ಸಿ ಮಾಡಬಹುದು. 7,8 ಅಥವಾ 9 ನೇ ತರಗತಿ ಫೇಲಾದವರು ನೇರವಾಗಿ ಎಸ್.ಎಸ್.ಎಲ್.ಸಿ ಮಾಡಬಹುದು. ಇದಲ್ಲದೆ 8,9 ಮತ್ತು 10 ನೇ ತರಗತಿಯ ಎಲ್ಲಾ ವಿಷಯಗಳು, ಪಿ.ಯು.ಸಿ ಯ ಅಕೌಂಟೆನ್ಸಿ, ಸ್ಟ್ಯಾಟಿಸ್ಟಿಕ್ಸ್, ಬಿಸಿನೆಸ್ ಸ್ಟಡೀಸ್ ಹಾಗೂ ಕಂಪ್ಯೂಟರ್ ಸೈನ್ಸ್ ಮುಂತಾದ ವಿಷಯಗಳಿಗೆ ತರಬೇತಿ ನೀಡಲಾಗುವುದು. ಇಂದೇ ಭೇಟಿಯಾಗಿ ವಿದ್ಯಾ ಟ್ಯುಟೋರಿಯಲ್ […]

ಬಿಜೆಪಿ ನಾಯಕರಿಂದ ಅರಾಜಕತೆ ಸೃಷ್ಟಿಗೆ ಹುನ್ನಾರ: ಮಂಜುನಾಥ್ ಭಂಡಾರಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸು ತ್ತಿದ್ದು, ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಗರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಡಾರಿ ಹೇಳಿದ್ದಾರೆ. ದ.ಕ. ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಅಶೋಕ್ ನೇತೃತ್ವದ ನಿಯೋಗ ದ.ಕ. ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ದುಂಡಾವರ್ತನೆ ತೋರಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಜಿಲ್ಲೆಯಲ್ಲಿ ಶಾಂತಿ ನೆಲೆಸು ವುದು ಬಿಜೆಪಿಯ ರಾಜ್ಯ ನಾಯಕರಿಗೆ […]