ಉಡುಪಿ: ಜೂನ್ 15ರಂದು ನೇತ್ರದಾನ- ನೇತ್ರದಾನ ಜಾಗೃತಿ ಶಿಬಿರ

ಉಡುಪಿ: ಕಾಂಗ್ರೆಸ್ ಮುಖಂಡ, ಉದ್ಯಮಿ ಪ್ರಸಾದ್ ಕಾಂಚನ್ ಅವರ ಜನ್ಮದಿನದ ಅಂಗವಾಗಿ ಇದೇ ಜೂನ್ 15ರಂದು ಬೆಳಿಗ್ಗೆ 9ರಿಂದ 1ಗಂಟೆಯವರೆಗೆ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ‘ನೇತ್ರದಾನ ಹಾಗೂ ನೇತ್ರದಾನ ಜಾಗೃತಿ ಶಿಬಿರ’ವನ್ನು ಆಯೋಜಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೇಶ್ ಶೆಟ್ಟಿ ಅವರು, ನೇತ್ರದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಮತ್ತು ತಮ್ಮ ಕಣ್ಣುಗಳನ್ನು ದಾನ ಮಾಡಲು ಇಚ್ಛಿಸುವವರಿಗೆ ಅನುಕೂಲ ಮಾಡಿಕೊಡುವುದು ಈ ಶಿಬಿರದ […]
ಉಡುಪಿ: ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು; ಮಹಿಳೆ ಗಂಭೀರ

ಉಡುಪಿ: ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕೋರ್ಟ್ ಹಿಂಭಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಶನಿವಾರ ಸಂಭವಿಸಿದೆ. ಮೃತರನ್ನು ಫ್ರಾನ್ಸಿಸ್ ಫುಟೊರ್ಡೋ (65 ) ಎಂದು ಗುರುತಿಸಲಾಗಿದೆ. ಇವರು ಮನೆ ಮಾಲೀಕರ ಸಹೋದರ ಎಂದು ತಿಳಿದುಬಂದಿದೆ. ಮನೆ ಕೆಲಸದಾಕೆ ಮಲ್ಪೆ ಕಲ್ಮಾಡಿ ನಿವಾಸಿ ಶಾರದಾ (35) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ […]
ಉಡುಪಿ:ಅನರ್ಹ ಪಡಿತರ ಚೀಟಿ ರದ್ದು

ಉಡುಪಿ: ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್)ಹೊಂದಿರುವವರು ಸರ್ಕಾರ ವಿಧಿಸಿರುವ ಮಾನದಂಡದ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದ್ದಲ್ಲಿ, ಸಂಬಂಧಸಿದ ತಾಲೂಕು ಕಚೇರಿಯಆಹಾರ ಶಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪಡಿತರ ಚೀಟಿಯನ್ನು ಆದ್ಯರ್ಪಣೆ (ಸರೆಂಡರ್) ಮಾಡಿಕೊಳ್ಳಬೇಕು. ಯಾವುದೇ ಪಡಿತರ ಚೀಟಿದಾರರು ಸರಕಾರದ ನಿಯಮಾವಳಿಗಳನ್ನು ಮೀರಿ ಒಂದೇ ಮನೆಯಲ್ಲಿ ವಾಸವಿರುವವರು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಹೊಂದಿದ್ದಲ್ಲಿ ಅಂತಹ ಪಡಿತರ ಚೀಟಿದಾರರು ಸಂಬಂಧಪಟ್ಟ ಆಹಾರ ಶಾಖೆಯ ಅಧಿಕಾರಿಗಳಿಗೆ ಪಡಿತರ ಚೀಟಿಯನ್ನು ನೀಡಿಒಂದಕ್ಕಿಂತ ಹೆಚ್ಚಿನ ಪಡಿತರ ಚೀಟಿಯನ್ನು […]
ಉಡುಪಿ:ಬಿ.ಐ.ಇ.ಆರ್.ಟಿ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಗಳನ್ನುಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯುವ ಸಲುವಾಗಿ ಜಿಲ್ಲೆಯಲ್ಲಿಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ (ವಿಶೇಷ ಶಿಕ್ಷಕರ) ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿಗಧಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ […]
ಪೆರ್ಡೂರು: ಮಗಳ ಸಾವಿನ ಚಿಂತೆಯಲ್ಲಿ ತಾಯಿ ಆತ್ಮಹತ್ಯೆ

ಹಿರಿಯಡ್ಕ: ಮಗಳ ಸಾವಿನ ಚಿಂತೆಯಲ್ಲಿ ಮನನೊಂದ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.12ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಪೆರ್ಡೂರು ಗ್ರಾಮದ ಲತಾ(52) ಎಂದು ಗುರುತಿಸಲಾಗಿದೆ. ಇವರ ಗಂಡ ಸುಮಾರು 20 ವರ್ಷದ ಹಿಂದೆ ಹೃದಯಾಘಾತವಾಗಿ ಮೃತ ಪಟ್ಟಿದ್ದು, 3 ತಿಂಗಳ ಹಿಂದೆ ತನ್ನ ಒಬ್ಬಳೇ ಮಗಳು ಮೆದುಳಿನ ಆಘಾತದಿಂದ ಮೃತಪಟ್ಟಿದ್ದರು. ಇದೇ ಚಿಂತೆಯಲ್ಲಿ ಮನನೊಂದ ಅವರು ಮನೆಯ ಮಲಗುವ ಕೋಣೆಯ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ […]