ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿ ಪ್ರತಿಮಾಗೆ ರಾಜ್ಯ ಹೈಕೋರ್ಟ್ ಶರತ್ತುಬದ್ದ ಜಾಮೀನು.

ಕಾರ್ಕಳ ಜೂ.16: ಕಳೆದ ವರ್ಷ ಅಕ್ಟೋಬರ್ 20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಸಂಚುಪೂರ್ವಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36) ಅವರಿಗೆ ಕರ್ನಾಟಕ ರಾಜ್ಯ ಹೈಕೋರ್ಟ್ ಶರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಮೃತ ಬಾಲಕೃಷ್ಣ ಪೂಜಾರಿಯ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಎಂಬವರು ಸೇರಿ ಈ ಕೊಲೆ ಎಸಗಿದ್ದಾರೆ ಎಂಬ ಆರೋಪದಡಿ ಅಕ್ಟೋಬರ್ 25ರಂದು ಅಜೆಕಾರು ಪೊಲೀಸ್ ಠಾಣೆಯ […]

ಭಾರಿ ಮಳೆ ಹಿನ್ನೆಲೆ, ನಾಳೆ (ಜೂನ್ 17) ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 17ರ ಮಂಗಳವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.

ಉಡುಪಿ: ನಡುರಾತ್ರಿ ಮನೆಗೆ ನುಗ್ಗಿ ಮಲಗಿದ್ದ ವ್ಯಕ್ತಿಯ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ; ಆರೋಪಿ ಬಂಧನ

ಉಡುಪಿ: ನಡುರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಯೋರ್ವ ತಂದೆಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಆದಿ ಉಡುಪಿಯಲ್ಲಿ ನಡೆದಿದೆ. ಹಲ್ಲೆಗೊಳಗಾಗಿ ರಕ್ತಸ್ರಾವವಾಗುತ್ತಿದ್ದ ವ್ಯಕ್ತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ , ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಕೂಲಿ ಕಾರ್ಮಿಕ ಕರಬಸಪ್ಪ(43) ಹಲ್ಲೆಗೊಳಗಾದ ವ್ಯಕ್ತಿ. ಕಾರ್ಮಿಕ ಕುಮಾರ್ ಹಲ್ಲೆ ನಡೆಸಿದ ದುಷ್ಕರ್ಮಿ. ತಂದೆ ಮಗಳು ಮಲಗಿರುವ ಸಮಯ ನಡುರಾತ್ರಿ ಕತ್ತಿ ಹಿಡಿದು ಬಂದ ಕುಮಾರ್ ಮಲಗಿದಲ್ಲಿಯೇ ಹಲ್ಲೆ ನಡೆಸಿದ್ದಾನೆ. ಎಚ್ಚರಗೊಂಡ ಮಗಳು ಬೊಬ್ಬೆ ಹಾಕಿದ್ದು ಸ್ಥಳೀಯರು […]

ಮಣಿಪಾಲದಲ್ಲಿ ಪ್ರೀಮಿಯಂ ಅಪಾರ್ಟ್‌ಮೆಂಟ್ ಮಾರಾಟಕ್ಕಿದೆ

ಉಡುಪಿ:ನೀವು ಉತ್ತಮ ಹೂಡಿಕೆಗೆ ಜಾಗ ಹುಡುಕುತ್ತಿದ್ದೀರಾ? ಅಥವಾ ಮಣಿಪಾಲದ ಪ್ರಮುಖ ಪ್ರದೇಶದಲ್ಲಿ ನೆಲೆಸಲು ಮನೆ ಬೇಕೆಂದು ಆಶಿಸುತ್ತಿದ್ದೀರಾ? ಇದು ನಿಮಗಾಗಿ ಸೂಕ್ತ ಆಯ್ಕೆ.ಮಣಿಪಾಲದ ಹೃದಯಭಾಗದಲ್ಲಿನ ಪ್ರೀಮಿಯಂ ಅಪಾರ್ಟ್‌ಮೆಂಟ್ ಮಾರಾಟಕ್ಕಿದೆ. ವೈಶಿಷ್ಟ್ಯಗಳು: ◼ವಿಶಾಲವಾದ 2.5 BHK ಅಪಾರ್ಟ್‌ಮೆಂಟ್ ◼ನಿರ್ಮಿತ ಪ್ರದೇಶ: 1110 ಚ.ಅ. ◼140 ಚ.ಅ. ಬೇಸ್‌ಮೆಂಟ್ ಪಾರ್ಕಿಂಗ್ ಸಹಿತ ◼ಡಿಸಿ ಕಚೇರಿ ಮುಖ್ಯರಸ್ತೆಗೆ ತಕ್ಕಿದ್ದು – ಅತ್ಯುತ್ತಮ ಸಂಪರ್ಕವಿರುವ ಸ್ಥಳ. 📞 ಸಂಪರ್ಕಿಸಿ: ಪ್ರಣಯ್ – 996723949 | 9892208275 📍 ಪ್ರೀಮಿಯರ್ ರೆಸಿಡೆನ್ಸಿ, ಫ್ಲಾಟ್ ನಂ. 103, ವಿದ್ಯಾ […]

ಮಂಗಳೂರು: ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ

ಮಂಗಳೂರು: ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜೂ.14 ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ ಇವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ವಂದನೀಯ ವಲೇರಿಯ ಡಿಸೋಜ […]