ಉಡುಪಿ: ಮಹಿಳೆಯರಿಗೆ ಉದ್ಯೋಗಾವಕಾಶ.

ಉಡುಪಿ: ಮಹಿಳೆಯರಿಗೆ ಉಡುಪಿಯಲ್ಲಿ ಕೆಲಸ ಮಾಡಲು ಒಂದು ಸುವರ್ಣ ಅವಕಾಶವನ್ನು ಕಲ್ಪಿಸಿದೆ. ಉಡುಪಿ ರಿಲಯನ್ಸ್ ಕ್ಯಾಪಿಟಲ್ (Reliance Capital) ಗೆ ಡಿಗ್ರಿ ಆಗಿರುವ 30 ವರ್ಷ ಮೇಲ್ಪಟ್ಟ ಮಹಿಳೆಯರು ಬೇಕಾಗಿದ್ದಾರೆ. ವೇತನ: ತಿಂಗಳಿಗೆ 22,000 ದಿಂದ 32,000 ಜೊತೆಗೆ ಪಿಎಫ್, ಇಎಸ್ಐ ಹಾಗೂ ಫ್ಯಾಮಿಲಿ ಇನ್ಸೂರೆನ್ಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕಚೇರಿ ಸಮಯ: ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ.ಆಸಕ್ತರು ಕೂಡಲೆ ಸಂಪರ್ಕಿಸಿ: 9343349670

ಕುಂದಾಪುರ: ಸತತ ಮಳೆಗೆ ಉಕ್ಕಿ ಹರಿದ ನದಿಗಳು -ಕಮಲಶಿಲೆ, ಮಾರಣಕಟ್ಟೆ ದೇವಸ್ಥಾನಗಳು ಜಲಾವೃತ

ಉಡುಪಿ: ಕಳೆದು ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸುತ್ತ ನದಿ ನೀರು ಉಕ್ಕಿ ಹರಿಯುತ್ತಿದ್ದು ಜಲಾವೃತಗೊಂಡಿವೆ. ಕುಬ್ಜಾ ನದಿ ಉಕ್ಕಿ ಹರಿಯುತ್ತಿದ್ದು ಪರಿಣಾಮ ನದಿ ನೀರು ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಲಾವೃತಗೊಂಡಿದೆ.ಪ್ರತೀ ವರ್ಷ ಮಳೆಗಾಲದಲ್ಲಿ ಇಲ್ಲಿನ ದೇವಸ್ಥಾನ ಜಲಾವೃಗಳೊಳ್ಳುತ್ತದೆ. ಇನ್ನು ಭಾರೀ ಮಳೆಯ ಪರಿಣಾಮ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಒಳಾಂಗಣಕ್ಕೆ ನೀರು ನುಗ್ಗಿದೆ.ಈ ಭಾಗದಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು […]

ಉಡುಪಿ ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅಧಿಕಾರ ಹಸ್ತಾಂತರ ಮಾಡಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಕುತ್ಯಾರು ನವೀನ್ ಶೆಟ್ಟಿ ಅವರು, ಬೂತ್ ಮಟ್ಟದಿಂದ ಪಕ್ಷವನ್ನು ಸದೃಢವಾಗಿ ಕಟ್ಟುವ ಕಾರ್ಯ ಮಾಡುತ್ತೇನೆ. ಯುವ ಕಾರ್ಯಕರ್ತರಿಗೆ ಪ್ರೇರಣೆ ನೀಡುವ ಕೆಲಸ ಆಗಬೇಕಿದೆ. ಪಕ್ಷದ ಭವಿಷ್ಯದ ಹಿತದೃಷ್ಠಿಯಿಂದ ಯುವ ಪಡೆಯನ್ನು ಸಂಘಟಿಸಿ ಪಕ್ಷದ ಬಲವರ್ಧನೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. […]

ನನ್ನಿಂದ ಅಧಿಕಾರ ಕಸಿದುಕೊಂಡು ತನ್ನನ್ನು ಪದಚ್ಯುತಿಗೊಳಿಸಿದ್ದಾರೆ: ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬಹಿರಂಗ ಅಕ್ರೋಶ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಏಕಾಏಕಿಯಾಗಿ ಬದಲಾವಣೆ ಮಾಡಿರುವುದಕ್ಕೆ ಕಿಶೋರ್ ಕುಮಾರ್ ಕುಂದಾಪುರ ಅಸಮಾಧಾನ ಹೊರಹಾಕಿದ್ದಾರೆ. ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರ ನಿರ್ಧಾರದ ವಿರುದ್ಧ ಗುಡುಗಿದರು. ಪಕ್ಷ ಏನೆಲ್ಲ ಜವಾಬ್ದಾರಿಗಳನ್ನು ನನಗೆ ಕೊಟ್ಟಿದೆಯೋ ಅದನ್ನು ನನ್ನ ಎಲ್ಲ ಪದಾಧಿಕಾರಿಗಳ ಸಹಕಾರದೊಂದಿಗೆ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ. ನಾನು ಪಕ್ಷದ ಹೆಸರಲ್ಲಿ ಯಾವುದೇ ಹಣ ವಸೂಲಿ ಮಾಡಿಲ್ಲ. ರಾಜ್ಯಕ್ಕೆ ಯಾವುದೇ ಸುಳ್ಳು ವರದಿ ಕಳುಹಿಸಿಲ್ಲ. ಆದರೆ ನನ್ನಿಂದ ಏನೂ […]

ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಕರುನಾಡ ಸೇವಾ ಕಣ್ಮಣಿ ರಾಜ್ಯ ಪ್ರಶಸ್ತಿ

ಉಡುಪಿ: ಬೆಂಗಳೂರಿನ ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ವತಿಯಿಂದ ‘ರಂಗ ದಿಬ್ಬಣ- 2025′ ಕಾರ್ಯಕ್ರಮದಡಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ಸೋಮವಾರ ನಡೆದ ನಾಡು, ನುಡಿ, ನೆಲ, ಜಲ, ಕಲೆ ಭಾಷೆ, ಸಂಸ್ಕೃತಿ ಹಾಗೂ ಸಮಾಜ ಸೇವೆ ಮಾಡಿದ ನಾಡಿನ ಸಾಧಕರಿಗೆ ನೀಡುವಕರುನಾಡ ಸೇವಾ ಕಣ್ಮಣಿ ರಾಜ್ಯ ಪ್ರಶಸ್ತಿ’ ಯನ್ನು ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಲೋಕಾಯುಕ್ತ ಜಸ್ಟಿಸ್ ಸಂತೋಷ್ […]