ಜೂ.21ರಂದು ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ‘ಕುಶನ್ ಕವರ್ ಮೇಲೆ ಮಧುಬನಿ ಪೈಂಟಿಂಗ್’ ಒಂದು ದಿನದ ಕಾರ್ಯಾಗಾರ

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಜೂ.21 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12:30 ರ ವರೆಗೆ ‘ಕುಶನ್ ಕವರ್ ಮೇಲೆ ಮಧುಬನಿ ಚಿತ್ರಕಲೆ (MADHUBANI PAINTING ON CUSHION COVER) ಒಂದು ದಿನದ ಕಾರ್ಯಾಗಾರ ನಡೆಯಲಿದೆ. ಮುಖ್ಯಾಂಶಗಳು: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 12:30 ರವರೆಗೆಶುಲ್ಕ ಕೇವಲ ರೂ.200/- ನಿಮ್ಮ ಕಲ್ಪನೆಯನ್ನು ಜೀವಂತಗೊಳಿಸಿ, ಇಂದೇ ನೋಂದಾಯಿಸಿ.! ನಮ್ಮನ್ನು ಸಂಪರ್ಕಿಸಿ:ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, 2 ನೇ ಮಹಡಿ ಈಶ್ವರ್ ನಗರ, ಮಣಿಪಾಲ+91 8123163932

ಕುಂದಾಪುರ: ಖಾಸಗಿ ಬಸ್ – ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.

ಕುಂದಾಪುರ: ಬೈಕೊಂದು ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕೊಲ್ಲೂರು ಮುಖ್ಯ ರಸ್ತೆಯ ನೆಂಪಕೆಂಚನೂರು ಸಮೀಪದ ಮಲ್ಲಾರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಸಿಗಂಧೂರು ಮೂಲದ ನಿವಾಸಿ ಶರತ್(24) ಎಂದು ಗುರುತಿಸಲಾಗಿದೆ. ವಂಡ್ಸೆ ಕಡೆಯಿಂದ ಹೆಮ್ಮಾಡಿ ಕಡೆಗೆ ಹೋಗುತ್ತಿದ್ದ ಬೈಕ್ ಹೆಮ್ಮಾಡಿ ಕಡೆಯಿಂದ ವಂಡ್ಸೆ ಕಡೆಗೆ ಬರುತ್ತಿದ್ದ ಶ್ರೀದುರ್ಗಾಂಬಾ ಬಸ್‌ಗೆ ಎದುರಿನಿಂದ ಢಿಕ್ಕಿ ಹೊಡೆದ ಪರಿಣಾಮ ಸವಾರ ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶರತ್ […]

ಕಾರ್ಕಳ: ನಿಂತಿದ್ದ ಮಹಿಳೆಗೆ ಕಾರು ಢಿಕ್ಕಿ; ಮಹಿಳೆ ಮೃತ್ಯು.

ಕಾರ್ಕಳ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರು ಮೃತ ಪಟ್ಟ ಘಟನೆ ನಿಟ್ಟೆ ಗ್ರಾಮದ ದೂಪದಕಟ್ಟೆಯಲ್ಲಿರುವ ಗುಲಾಬಿ ಹೋಟೆಲ್ ಮುಂಭಾಗದಲ್ಲಿ ಜೂ.15ರಂದು ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಸವಿತಾ ವೀಣಾ(59) ಎಂದು ಗುರುತಿಸ ಲಾಗಿದೆ. ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟಲು ರಸ್ತೆ ಬದಿ ನಿಂತಿದ್ದ ಸವಿತಾ ಅವರಿಗೆ ಢಿಕ್ಕಿ ಹೊಡೆಯಿ ತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ವೇಳೆ […]

ಕಿರಣ್ ಮಂಜನಬೈಲು ಅವರಿಗೆ “ಯಶೋ ಮಾಧ್ಯಮ-2025” ಪ್ರಶಸ್ತಿ

ಉಡುಪಿ: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವಂಥ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಕಲ್ಯಾಣಪುರ ಶ್ರೀವೆಂಕಟರಮಣ ದೇವಸ್ಥಾನದ ಆಡಳಿತ ಮುಕ್ತೇಸರ ಕೆ.ಅನಂತಪದ್ಮನಾಭ ಕಿಣಿ ಹೇಳಿದರು. ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಸ್ಪಂದನಾ ಸೇವಾ ಸಂಸ್ಥೆ ವತಿಯಿಂದ ನೀಡಿದ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿ, ಸಂಯುಕ್ತ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ​ ವರದಿಗಾರರಾದ ಕಿರಣ್ ಮಂಜನಬೈಲು ರವರಿಗೆ “ಯಶೋ ಮಾಧ್ಯಮ-2025” ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು. ಡಾ.ಟಿ.ಎಂ.ಎ ಪೈ ಹಾಗೂ ಡಾ. ಬಿ.ವಿ.ಬಾಳಿಗ ರಂತಹ ಮಹಾನ್ […]

ಜೂ.21 ರಂದು ಸುಪ್ತದೀಪ್ತಿಯವರ ದ್ವಿಕೃತಿ ಅನಾವರಣ

ಉಡುಪಿ: ‘ಸುಪ್ತದೀಪ್ತಿ’ ಕಾವ್ಯನಾಮದಿಂದ ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾಗಿರುವ ಜ್ಯೋತಿ ಮಹಾದೇವ್ ಅವರ ಪ್ರಬಂಧ ಮತ್ತು ಕವನ ಸಂಕಲನಗಳ ಅನಾವರಣ ಜೂನ್ 21ರಂದು ಅಪರಾಹ್ನ 3.30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಕ್ಷರ ಲೋಕದ ನೋಟಗಳು ಪ್ರಬಂಧ ಸಂಕಲನವನ್ನು ಆರ್.ಆರ್.ಸಿ ಸಹಸಂಶೋಧಕ ಡಾ. ಅರುಣ ಕುಮಾರ್ ಎಸ್. ಆರ್. ಹಾಗೂ ಕವನ ಸಂಕಲನ ದೀಪ ನಕ್ಕಿತು ಕೃತಿಯನ್ನು ಪ್ರಸಿದ್ಧ ಕಾದಂಬರಿಕಾರ ಎಂ. ಆರ್. ದತ್ತಾತ್ರಿ ಬಿಡುಗಡೆಗೊಳಿಸುವರು. […]