ಉಡುಪಿ:ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಿ : ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್

ಉಡುಪಿ: ಜನಸಾಮಾನ್ಯರು ಸರಕಾರದ ಮೇಲೆ ನಿರೀಕ್ಷೆ ಇಟ್ಟುಕೊಂಡು ತಮ್ಮ ಕೆಲಸ ಕಾರ್ಯಗಳಿಗಾಗಿ ಕಚೇರಿಗಳಿಗೆ ಬರುತ್ತಾರೆ. ಅವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳುವುದರೊಂದಿಗೆ ನಿಯಮಾನುಸಾರ ಸಹಾನುಭೂತಿಯಿಂದ ಕೆಲಸಕಾರ್ಯಗಳನ್ನು ಮಾಡಿಕೊಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ […]
ಭಾರಿ ಮಳೆಗೆ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು–ಮುರುಡೇಶ್ವರ ರೈಲು ಸಂಚಾರ ಸ್ಥಗಿತ

ಹಾಸನ: ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದಿದ್ದು, ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ತಪ್ಪಿತು ಬಾರಿ ಅನಾಹುತ:ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲು ಬಂಡೆ ಬಿದ್ದಿರುವ ಸ್ಥಳದಿಂದ ಸ್ವಲ್ಪ […]
MSDC ಓರೇನ್ ಇಂಟರ್ನ್ಯಾಷನಲ್’ ನಲ್ಲಿ ಫಾದರ್ಸ್ ಡೇ ಪ್ರಯುಕ್ತ ವಿಶೇಷ ಆಫರ್

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಓರೇನ್ ಇಂಟರ್ನ್ಯಾಷನಲ್’ನಲ್ಲಿ ತಂದೆಯರ ದಿನಾಚರಣೆಯ(ಫಾದರ್ಸ್ ಡೇ) ತಿಂಗಳನ್ನು ಆಚರಿಸಿಕೊಳ್ಳಲು ನಿಮಗಾಗಿ ವಿಶೇಷವಾದ ಆಫರ್ ಅನ್ನು ನೀಡಿದೆ. ನಿಮ್ಮ ತಂದೆಯೊಂದಿಗೆ ನಡೆದುಕೊಂಡು ನಮ್ಮ ಕಾಸ್ಮೆಟಾಲಜಿಯಲ್ಲಿ ಸ್ನಾತಕೋತ್ತರ ಕೋರ್ಸ್ ನಲ್ಲಿ 50% ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಆಫರ್ ಜೂನ್ 30, 2025 ರಂದು ಮಾನ್ಯವಾಗಿರುತ್ತದೆ. ಈಗಲೇ ನೋಂದಾಯಿಸಿ ಮತ್ತು ಉಜ್ವಲ ಭವಿಷ್ಯದತ್ತ ಒಟ್ಟಿಗೆ ನಡೆಯಿರಿ. MSDC ಕಟ್ಟಡ, 3 ನೇ ಮಹಡಿ ಈಶ್ವರ್ ನಗರ, ಹಾಲು ಡೈರಿ ರಸ್ತೆ ಮಣಿಪಾಲನೋಂದಣಿಗಾಗಿ ಸಂಪರ್ಕಿಸಿ:+91 8123163934+91 8123165068