ಮಣಿಪಾಲ: ತಾಯಿಯ ಕತ್ತು ಹಿಸುಕಿ ಕೊಂದ ಮಗ: ಆರೋಪಿಯ ಬಂಧನ

ಉಡುಪಿ: ಹಣಕ್ಕಾಗಿ ಮಗನೋರ್ವ ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪದ್ಮಾಬಾಯಿ(45) ಕೊಲೆಯಾದ ಮಹಿಳೆ. ಮೃತರ ಮಗ ಈಶ ನಾಯಕ್(26) ಕೊಲೆ ಆರೋಪಿ. ಜೂ.18ರಂದು ರಾತ್ರಿ ಪದ್ಮಾಬಾಯಿ ಸೊಂಟ ನೋವಿನಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅಂದು ರಾತ್ರಿ ಪದ್ಮಾಬಾಯಿ ಅವರ ತಂಗಿ ಶಿಲ್ಪಾ ಎಂಬವರಿಗೆ ಕರೆ ಮಾಡಿದ ಈಶ ನಾಯಕ್, ತಾಯಿಗೆ ಸೌಖ್ಯವಿಲ್ಲ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕಳುಹಿಸುವಂತೆ ತಿಳಿಸಿದ್ದನು. ಅದರಂತೆ ಶಿಲ್ಪಾ ಆನ್ಲೈನ್ […]
ಉಡುಪಿ – ಬ್ರಹ್ಮಾವರದ ಹೆಸರಾಂತ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ!

ಕಾರ್ಕಳ: ಜೂ.23ರಂದು ರಾಜ್ಯ ಸರಕಾರದ ವಿರುದ್ಧ ಧರಣಿ ಸತ್ಯಾಗ್ರಹ

ಕಾರ್ಕಳ: ರಾಜ್ಯ ಸರಕಾರದ ಜನವಿರೋಧಿ ನಿಲುವು ಖಂಡಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 380 ಗ್ರಾಮ ಪಂಚಾಯತನ ಮುಂದೆ ಜೂ. 23ರಂದು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ ಸುನಿಲ್ ಕುಮಾರ್ ಮಾಹಿತಿ ನೀಡಿದರು. ವಿಕಾಸ ಕಚೇರಿಯಲ್ಲಿ ಜೂ.16ರಂದು ನಡೆದ ವಿಕಸಿತ ಭಾರತ ಕಾರ್ಯಾಗಾರದಲ್ಲಿ ಮಾತನಾಡಿ, 9/11 ವಿನ್ಯಾಸ ನಕ್ಷೆ ಪ್ರಾಧಿಕಾರದ ಸಮಸ್ಯೆಯ ಬಗ್ಗೆ ಸರಕಾರ ಇಲ್ಲಿವರೆಗೆ ಯಾವುದೇ ಪರಿಹಾರವನ್ನು ಕಂಡುಕೊಂಡಿಲ್ಲ. ಪರಿಣಾಮವಾಗಿ […]
ಮಂಗಳೂರು: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ.

ಮಂಗಳೂರು: ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರು ಶನಿವಾರ ನಿಧನರಾಗಿದ್ದಾರೆ. 84 ವಯಸ್ಸಿನ ಕಿನ್ನಿಗೋಳಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಬೆಳಗ್ಗೆ 10ರಿಂದ 12 ಗಂಟೆ ವರೆಗೆ ಕಿನ್ನಿಗೋಳಿಯ ಶಿಮಂತೂರು ಉದಯಗಿರಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತ್ಯಕ್ರಿಯೆ ನಡೆಸಲಾಗುವುದು. ಕಿನ್ನಿಗೋಳಿ ಅವರು ತೆಂಕು ಹಾಗೂ ಬಡಗು ಎರಡೂ ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಪ್ರಧಾನ ಕಲಾವಿದರಾಗಿ 55 ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿದ್ದಾರೆ. ಮುಖ್ಯಪ್ರಾಣ ಅವರು […]