ಉಡುಪಿಯಲ್ಲಿ ಎಸ್ ಬಿ ಐ ನ ಮಿನಿ ಗೃಹ ಸಾಲ ಕೇಂದ್ರ ಉದ್ಘಾಟನೆ.

ಉಡುಪಿ: ಉಡುಪಿ ಬನ್ನಂಜೆ ಭಾರತೀಯ ಸ್ಟೇಟ್ ಬ್ಯಾಂಕಿನ ಪ್ರಾದೇಶಿಕ ವ್ಯವಹಾರ ಕಚೇರಿಯ ಕಟ್ಟಡದಲ್ಲಿ ಎಸ್ ಬಿ ಐ ನ ಮಿನಿ ಗೃಹ ಸಾಲ ಕೇಂದ್ರವನ್ನು ಎಸ್ ಬಿ ಐ ಬೆಂಗಳೂರು ವೃತ್ತದ ಜನರಲ್ ಮ್ಯಾನೇಜರ್ ಶ್ರೀ ಪ್ರಫುಲ್ಲ ಕುಮಾರ ಜೇನಾ ಮತ್ತು ಮಂಗಳೂರು ಆಡಳಿತ ಕಚೇರಿಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೃಷ್ಣ ಮೋಹನ್ ಎಂ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಪ್ರಾದೇಶಿಕ ವ್ಯವಹಾರ ಕಚೇರಿಯ ಪ್ರಾದೇಶಿಕ ವ್ಯವಸ್ಥಾಪಕರಾದ ಬಿ ಪ್ರಕಾಶ್ ಅಡಿಗ ಅವರು ಮಾತನಾಡಿ ಗೃಹ […]

ನಿಮ್ಮ ಮಕ್ಕಳ ಭವಿಷ್ಯದ ಕನಸಿಗೆ ಬೆಳಕು ತೋರಿಸುತ್ತದೆ ಸ್ನೇಹ ಟ್ಯುಟೋರಿಯಲ್ ಕಾಲೇಜು: ಕಲಿಯುವ ವಿದ್ಯಾರ್ಥಿಗಳಿಗೆ ಒಂದೊಳ್ಳೆ ಅವಕಾಶವಿದು!

ಉಡುಪಿಯ ಪ್ರತಿಷ್ಠಿತ ಸ್ನೇಹ ಟ್ಯುಟೋರಿಯಲ್ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ರೂಪಿಸುವಲ್ಲಿ ಶ್ರಮಿಸುತ್ತಿದೆ. ಅತ್ಯುತ್ತಮ ಮತ್ತು ಕ್ರಿಯಾತ್ಮಕ ಬೋಧನಾ ಸಿಬ್ಬಂದಿಯ ಸಹಾಯದಿಂದ, ಈ ಸಂಸ್ಥೆಯು ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಉತ್ತಮ ಸಂಬಂಧವನ್ನು ಕಾಯ್ದುಕೊಂಡು ಅವರ ಭವಿಷ್ಯನ್ನು ರೂಪಿಸುತ್ತಿದೆ. ಇದೀಗ ಸ್ನೇಹ ಟ್ಯುಟೋರಿಯಲ್ ಕಾಲೇಜಿನಲ್ಲಿ ಸ್ಟುಡೆಂಟ್ ಕೇರ್ ತರಗತಿಗಳು ಮತ್ತು ವಿಶೇಷ ಆರೈಕೆ ತರಗತಿಗಳು ಪ್ರಾರಂಭವಾಗಿದ್ದು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು ಇದೊಂದು ಅದ್ಬುತ ಅವಕಾಶವಾಗಿದೆ. ಸ್ಟುಡೆಂಟ್ ಕೇರ್ ತರಗತಿಗಳು:ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ 1 ನೇ ತರಗತಿಯಿಂದ 10 ನೇ […]

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಕಿನ್ನಿಗೋಳಿ: ಉಭಯ ತಿಟ್ಟುಗಳ ಖ್ಯಾತ ಹಾಸ್ಯಗಾರರಾದ ಕಿನ್ನಿಗೋಳಿ ಮುಖ್ಯಪ್ರಾಣ (84) ನಿನ್ನೆ ನಿಧನರಾದರು. ಇವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಮುಖ್ಯಪ್ರಾಣ ಕಿನ್ನಿಗೋಳಿ ಕಟೀಲು, ಮಂದಾರ್ತಿ, ಸಾಲಿಗ್ರಾಮ, ಪೆರ್ಡೂರು, ಕುಮಟಾ, ಇರಾ, ಕದ್ರಿ, ಸುಬ್ರಹ್ಮಣ್ಯ, ಮಂತ್ರಾಲಯ ಹೀಗೆ ವಿವಿಧ ಮೇಳಗಳಲ್ಲಿ 58 ವರ್ಷಗಳ ಕಾಲ ನಿರಂತರವಾಗಿ ಕಲಾಸೇವೆಗೈದ ಅಪೂರ್ವ, ಪ್ರತಿಭಾವಂತ ಹಾಸ್ಯ ಕಲಾವಿದರಾಗಿದ್ದರು. ರಾಜ್ಯೋತ್ಸವ ಸಹಿತ ನೂರಾರು ಪ್ರಶಸ್ತಿಗಳಿಗೆ […]

ಉಡುಪಿ:ವಿದ್ಯಾರ್ಥಿವೇತನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ:ರಾಷ್ಟ್ರೀಕೃತ ಬ್ಯಾಂಕುಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಡಿ ಆರ್ಥಿಕ ನೆರವು ಸೌಲಭ್ಯಗಳು ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸಿಗುವಂತಾಗಬೇಕು. ಪ್ರಧಾನಮಂತ್ರಿ ಜೀವನಜ್ಯೋತಿ, ಸುರಕ್ಷಾ ಭೀಮಾ ಯೋಜನೆಯಡಿ ಹೆಚ್ಚಿನ ಫಲಾನುಭವಿಗಳು ಲಾಭ ಪಡೆಯುವಂತಾಗಬೇಕು. ಶೈಕ್ಷಣಿಕ ಯೋಜನೆಗಳಿಗೆ ಸಾಲ ನೀಡುವ ನಿಯಮಗಳು ಸರಳೀಕರಣ ಆಗಬೇಕು ಎಂದ ಅವರು, ಸರಕಾರದ ವಿವಿಧ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ […]